Monday, April 21, 2025
Monday, April 21, 2025

ಹಳ್ಳಿಹಳ್ಳಿಗಳಲ್ಲಿ ಬಿಜೆಪಿ ಕಾರ್ಯಕರ್ತರ ಪಡೆ ಸದೃಢವಾಗಿದೆ- ಯಡಿಯೂರಪ್ಪ

Date:

ಹೊಸನಗರ: ರಾಜ್ಯದಲ್ಲಿ ಅನೇಕ ಪಾದಯಾತ್ರೆಗಳ ಮೂಲಕ ಪಕ್ಷ ಕಟ್ಟಿ ಬೆಳೆಸಿದ್ದೇನೆ. ಅಂದಿನ ಹೋರಾಟದ ಫಲ ಇಂದು ಬಿಜೆಪಿ ಅಧಿಕಾರ ನಡೆಸುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು.

ಹೊಸನಗರ ತಾಲೂಕಿನ ಬ್ರಹ್ಮೇಶ್ವರ ಗ್ರಾಮದಲ್ಲಿ 3 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಖಿಲ ಭಾರತ ವೀರಶೈವ ಸಮಾಜದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹೋರಾಟದ ದಿನದಲ್ಲಿ ಶಾಸಕರಾಗಿದ್ದವರು ನಾನು ಹಾಗೂ ದಕ್ಷಿಣ ಕನ್ನಡದ ವಸಂತ ಬಂಗೇರ. ಆದರೆ ಇಂದು ಹಳ್ಳಿಹಳ್ಳಿಯಲ್ಲೂ ಬಿಜೆಪಿ ಕಾರ್ಯಕರ್ತರ ಪಡೆ ಸದೃಢವಾಗಿದೆ ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದರು.

ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶ ಕಂಡ ದಣಿವರಿಯದ ನಾಯಕರಾಗಿದ್ದು, ಅವರ ನೇತೃತ್ವದಲ್ಲಿ ನಾವೆಲ್ಲ ಕೆಲಸ ಮಾಡಬೇಕಾಗಿದೆ. ಸಮೃದ್ಧ ಭಾರತ ಕಟ್ಟಬೇಕಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಸಾಗರ ಶಾಸಕರಾದ ಹರತಾಳು ಹಾಲಪ್ಪ, ಮಳಲಿ ಮಠದ ಶ್ರೀ ಷ.ಬ್ರ.ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು, ಮೂಲೆಗದ್ದೆ ಮಠದ ಶ್ರೀ ಮ.ನಿ.ಪ್ರ. ಅಭಿನವ ಚನ್ನಬಸವ ಮಹಾಸ್ವಾಮಿಗಳು, ಸಂಸದರಾದ ಶ್ರೀ ಬಿ ವೈ ರಾಘವೇಂದ್ರ ರವರು, ಶ್ರೀ ಟಿ ಡಿ ಮೇಘರಾಜ್, ಶ್ರೀ ಎಸ್ ಎಸ್ ಜ್ಯೋತಿಪ್ರಕಾಶ್,ಶ್ರೀ ಎಸ್ ಆರ್ ಷಡಕ್ಷರಿ, ಶ್ರೀ ಚನ್ನವೀರಪ್ಪ,ಶ್ರೀ ಜಿ.ಯುವರಾಜ್, ಶ್ರೀ ಜಯಶೀಲಪ್ಪ ಗೌಡ್ರು,ಶ್ರೀ ಹಾಲಪ್ಪ ಗೌಡ್ರು,ಶ್ರೀ ಚಂದ್ರ ಮೌಳಿ, ಶ್ರೀ ಹಾಲಪ್ಪ ಚಿಕ್ಕಮಣತಿ, ಶ್ರೀಮತಿ ಅನಿತಾ ರವಿಶಂಕರ್,ಶ್ರೀ ಹೆಚ್ ಆರ್ ತೀರ್ಥೇಶ್, ಹಾಗೂ, ಮಹಾಸಭಾ ಎಲ್ಲಾ ಸದಸ್ಯರು, ಯುವ ವೇದಿಕೆಯ ಎಲ್ಲಾ ಸದಸ್ಯರು, ಮಹಿಳಾ ವೇದಿಕೆಯ ಎಲ್ಲಾ ಸದಸ್ಯರು, ವೀರಭದ್ರೇಶ್ವರ ದೇವನ ಸ್ಥಾನ ಸಮಿತಿಯ ಎಲ್ಲಾ ಸದಸ್ಯರು, ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

eAsset ಇ-ಸ್ವತ್ತು ದಾಖಲೀಕರಣ ಸಮಸ್ಯೆಗಳ ಬಗ್ಗೆ ಅಧ್ಯಯನಕ್ಕೆ ಸಮಿತಿ ರಚನೆ- ಪ್ರಿಯಾಂಕ ಖರ್ಗೆ

eAsset ಇ-ಸ್ವತ್ತು ಅನುಷ್ಠಾನದಲ್ಲಿ ಕಾಲಕಾಲಕ್ಕೆ ಎದುರಾಗುವ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಪರಿಹರಿಸಲು...

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...