Wednesday, October 2, 2024
Wednesday, October 2, 2024

ಜಿಲ್ಲಾ ಪತ್ರಕರ್ತರ ಸಂಘದ ಹೊಳೆಹೊನ್ನೂರು ಘಟಕ ಉದ್ಘಾಟನೆ

Date:

ಶಿವಮೊಗ್ಗ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಡಿಯಲ್ಲಿ ಹೋಬಳಿ ಘಟಕ ಅಸ್ಥಿತ್ವಕ್ಕೆ ಬಂದಿದೆ.

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಹಿಂಭಾಗದಲ್ಲಿರುವ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಗೋಪಾಲ್ ಯಡಗೆರೆ ಅಧಿಕೃತವಾಗಿ ಘೋಷಣೆ ಮಾಡಿದರು.

ಹೊಬಳಿ ಘಟಕದ ಅಧ್ಯಕ್ಷರಾಗಿ ಹೆಚ್.ಜಿ. ವಿಜಯರಾಜ್, ಉಪಾಧ್ಯಕ್ಷರಾಗಿ ರವಿಕುಮಾರ್ ಕಾರ್ಯದರ್ಶಿಯಾಗಿ ಕೆ. ರಂಗನಾಥ್ , ಖಜಾಚಿಯಾಗಿ ಕುಮಾರ್ ಅಗಸನಹಳ್ಳಿ
ಆಯ್ಕೆಯಾದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಅವರು ಮಾತನಾಡಿ, ಸಂಘಟನೆಯ ಮೂಲಕ ಪತ್ರಕರ್ತರಿಗೆ ಗರಿಷ್ಠ ಸವಲತ್ತುಗಳು ಸಿಗಬೇಕೆಂಬುದು ನಮ್ಮ ಗುರಿ. ಯಾರನ್ನೂ ಧ್ವೇಷಿಸದೇ ಎಲ್ಲರ ಪ್ರೀತಿಯಿಂದ ಸಂಘಟನೆ ಮಾಡುವುದು ನಮ್ಮ ಉದ್ದೇಶ ಎಂದರು.

ಹೊಳೆಹೊನ್ನೂರು ಹೋಬಳಿ ಘಟಕದ ಅಧ್ಯಕ್ಷ ಹೆಚ್.ಜಿ. ವಿಜಯರಾಜ್ ಮಾತನಾಡಿ, ಎಲ್ಲರೂ ಒಂದಾಗಿ ಸಾಗೋಣ. ಪತ್ರಕರ್ತರ ಏಳಿಗೆಗಾಗಿ, ಭದ್ರತೆಗಾಗಿ ಕೆಲಸ ಮಾಡೋಣ ಎಂದರು.

ಶಿವಮೊಗ್ಗ ಪ್ರೆಸ್‌ ಟ್ರಸ್ಟ್ ಅಧ್ಯಕ್ಷ
ಎನ್. ಮಂಜುನಾಥ್ ಮಾತನಾಡಿ, ನಂಬಿಕೆಯೇ ನಮ್ಮ ಬಲ. ಪರಸ್ಪರ ನಂಬಿಕೆಯು ನಮ್ಮನ್ನು ಕಾಪಾಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಗೋ. ವ. ಮೋಹನ್, ಖಜಾಂಚಿ ಶಿವಮೊಗ್ಗ ನಂದನ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ಟ್ರಸ್ಟ್ ಪದಾಧಿಕಾರಿಗಳು, ಹಲವು ಪತ್ರಿಕಾ ಮಿತ್ರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...