Thursday, August 13, 2026
Thursday, August 13, 2026

ಶಾಲೆಗಳಲ್ಲಿ ನೈತಿಕ ಶಿಕ್ಷಣ ಮುಂದಿನ ವರ್ಷದಿಂದ ಜಾರಿ ಬಗ್ಗೆ ಚಿಂತನೆ- ಸಚಿವ ನಾಗೇಶ್

Date:

ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ಮತ್ತು ಸಾತ್ವಿಕ ಆಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ಅದಕ್ಕಾಗಿ ರಾಜ್ಯದ ಎಲ್ಲ ಶಾಲೆಗಳಲ್ಲಿ ನೈತಿಕ ಶಿಕ್ಷಣದ ವರ್ಗದಲ್ಲಿ ಧಾರ್ಮಿಕ ಗ್ರಂಥಗಳ ಮಾಹಿತಿಯನ್ನು ನೀಡುವ ವಿಷಯದಲ್ಲಿ ಚರ್ಚೆ ಪ್ರಾರಂಭವಾಗಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಅದನ್ನು ಪ್ರಾರಂಭಿಸುವ ವಿಷಯದಲ್ಲಿ ಪ್ರಯತ್ನಿಸಲಾಗುವುದು ಎಂದು ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಅವರು ತಿಳಿಸಿದ್ದಾರೆ.

ಅಧ್ಯಯನಕಾರರು ಶಿಕ್ಷಣದಲ್ಲಿ ನೈತಿಕ ಶಿಕ್ಷಣವನ್ನು ಸೇರ್ಪಡೆಗೊಳಿಸಲು ಬೆಂಗಳೂರಿನಲ್ಲಿ ಸಭೆಯನ್ನು ಏರ್ಪಡಿಸಿದ್ದರು.

ಅಭ್ಯಾಸಕ್ರಮದಲ್ಲಿ ಬದಲಾವಣೆ ತರಲು ಸಾಧ್ಯವಾದಷ್ಟು ಬೇಗನೆ ಸಮಿತಿಯನ್ನು ಸ್ಥಾಪಿಸಲಾಗುವುದೆಂದು ಹೇಳಿದರು.

ಸಭೆಯಲ್ಲಿ ಚರ್ಚಿಸಲಾಗಿರುವ ವಿಷಯಗಳ ಆಧಾರದಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ನೀಡಲು ವಿಭಾಗೀಯ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಿ ಅಂತಿಮ ನಿರ್ಣಯವನ್ನು ತೆಗೆದುಕೊಳ್ಳಲಾಗುವುದು ಎಂದರು.

ಈ ಸಭೆಯ ಮೂಲ ಉದ್ದೇಶ ಮಕ್ಕಳ ಆರೋಗ್ಯ ಚೆನ್ನಾಗಿರುವಂತೆ ಪ್ರಯತ್ನಿಸುವುದು, ನೈತಿಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಮತ್ತು ದೇವರ ಭಕ್ತಿಯನ್ನು ಕಲಿಸುವುದಾಗಿದೆ ಎಂದು ತಿಳಿಸಿದರು.

ಶಾಲೆಯಲ್ಲಿ ಸಾತ್ವಿಕ ಆಹಾರವನ್ನು ಪ್ರಾರಂಭಿಸುವ ವಿಷಯದಲ್ಲಿಯೂ ಸಭೆಯಲ್ಲಿ ವಿಚಾರ ಮಾಡಲಾಯಿತು.

ಈ ಸಭೆಯಲ್ಲಿ ಶಿಕ್ಷಣ ಮತ್ತು ಸಾಕ್ಷರಣಾ ಸಚಿವ ಬಿ.ಸಿ. ನಾಗೇಶ ಮತ್ತು ಶ್ರೀ ಶ್ರೀ ರವಿಶಂಕರ, ಅನೇಕ ಧಾರ್ಮಿಕ ಮತ್ತು ಸಾಮಾಜಿಕ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...