Thursday, March 26, 2026
Thursday, March 26, 2026

ಅಪರಿಚಿತರೊಂದಿಗೆ ಉದ್ಯಮಿಗಳು ದಾಖಲೆ ಹಂಚಿಕೊಳ್ಳಬಾರದು- ಎನ್.ಗೋಪಿನಾಥ್

Date:

ಉದ್ಯಮದಾರರು ನಿವೇಶನ ಹಾಗೂ ಸ್ಥಳೀಯ ಸಂಸ್ಥೆಗಳ ದಾಖಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು ಹಾಗೂ ದಾಖಲೆಗಳ ದುರುಪಯೋಗ ಆಗದಂತೆ ಎಚ್ಚರ ವಹಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಅವರು ತಿಳಿಸಿದ್ದಾರೆ.

ಜಿಎಸ್‌ಟಿ ಸೌಲಭ್ಯ ಪಡೆಯುವುದು ಆನ್‌ಲೈನ್ ವ್ಯವಸ್ಥೆ ಆಗಿರುವುದರಿಂದ ಯಾವುದೋ ಉದ್ಯಮಿಗಳ ನಿವೇಶನ ದಾಖಲೆಗಳನ್ನು ಬಳಸಿ ವಂಚಕರು ಜಿಎಸ್‌ಟಿ ಪಡೆದುಕೊಳ್ಳುವ ಸಾಧ್ಯತೆ ಇರುತ್ತದೆ. ಉದ್ಯಮಿಗಳು ಹಾಗೂ ಮಾಲೀಕರಿಗೆ ತಿಳಿಯದಂತೆ ದಾಖಲೆ ಸಲ್ಲಿಸಿ ಜಿಎಸ್‌ಟಿ ಸಂಖ್ಯೆ ಪಡೆದುಕೊಂಡು ಮೋಸ, ವಂಚನೆ ಮಾಡುವುದು ವಿವಿಧ ಕಡೆಗಳಲ್ಲಿ ಕಂಡುಬಂದಿದೆ ಎಂದು ತಿಳಿಸಿದ್ದಾರೆ.

ದೇಶದ ವಿವಿಧ ಕಡೆಗಳಲ್ಲಿ ವಂಚನೆ ನಡೆಸುತ್ತಿರುವ ಮೋಸಗಾರರು ಯಾವುದೋ ಸ್ಥಳಗಳಲ್ಲಿ ಕುಳಿತು ನಿಮ್ಮ ದಾಖಲೆಗಳನ್ನು ಬಳಸಿಕೊಂಡು ಜಿಎಸ್‌ಟಿ ಪಡೆಯುತ್ತಾರೆ. ನಂತರ ತೆರಿಗೆ ಪಾವತಿಸದೇ ದೇಶದ ಆರ್ಥಿಕ ವ್ಯವಸ್ಥೆಗೆ ನಷ್ಟ ಉಂಟುಮಾಡುತ್ತಾರೆ. ಪರಿಶೀಲನೆಗೆ ಬಂದ ಸಂದರ್ಭದಲ್ಲಿ ವಂಚನೆ ಆಗಿರುವುದು ಬೆಳಕಿಗೆ ಬರುತ್ತಿದೆ. ಆದ್ದರಿಂದ ಸ್ಥಳೀಯ ಉದ್ಯಮಿಗಳು ನಿಮ್ಮ ದಾಖಲೆಗಳ ಬಗ್ಗೆ ಎಚ್ಚರ ವಹಿಸಬೇಕು. ಅಪರಿಚಿತರೊಂದಿಗೆ ದಾಖಲೆಗಳನ್ನು ಹಂಚಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

ಸ್ಥಳೀಯ ಸಂಸ್ಥೆಗಳು ನಿವೇಶನ ಮಾಹಿತಿಗಳನ್ನು ಎಲ್ಲರಿಗೂ ದೊರಕುವಂತೆ ಮಾಡದೇ ಸುರಕ್ಷತೆಗೆ ಕ್ರಮ ವಹಿಸಬೇಕು. ಮಾಹಿತಿ ಪಡೆಯುವ ನಿವೇಶನದಾರರು ಒಟಿಪಿ ಅಥವಾ ಸುರಕ್ಷತಾ ಪಾಸ್ ವರ್ಡ್ ಬಳಸಲು ಅನುವು ಮಾಡಬೇಕು. ಇದರಿಂದ ಎಲ್ಲೋ ಕುಳಿತಿರುವ ವಂಚಕ ಬೇರೆಯವರ ದಾಖಲೆಯ ಮಾಹಿತಿ ಪಡೆಯಲು ಅಸಾಧ್ಯವಾಗುತ್ತದೆ.

ತೆರಿಗೆ ಇಲಾಖೆ ಅಧಿಕಾರಿಗಳು ಯಾವುದೇ ವ್ಯಕ್ತಿ ಜಿಎಸ್‌ಟಿಗೆ ಅರ್ಜಿ ಸಲ್ಲಿಸಿದರೂ ಸ್ಥಳ ಪರಿಶೀಲನೆ ಮಾಡಿಯೇ ಜಿಎಸ್‌ಟಿ ನೀಡಬೇಕು. ಇಲ್ಲದಿದ್ದರೆ ಎಲ್ಲೋ ಕುಳಿತಿರುವ ವಂಚಕರು ಮತ್ತೊಬ್ಬರ ಹೆಸರಲ್ಲಿ ಜಿಎಸ್‌ಟಿ ಪಡೆದು ವಂಚಿಸುವ ಸಾಧ್ಯತೆ ಇರುತ್ತದೆ. ಆದ್ದರಿಂದ ಜಿಎಸ್ ಟಿ ತೆರಿಗೆ ಇಲಾಖೆ ಅಧಿಕಾರಿಗಳು ಜಿಎಸ್‌ಟಿ ನೀಡುವ ಮುನ್ನ ಪರಿಶೀಲಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಎನ್.ಗೋಪಿನಾಥ್ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...