Sunday, October 6, 2024
Sunday, October 6, 2024

ಜೆಡಿಎಸ್ ಬಡವರ ಪರ ಚಿಂತನೆ ಮಾಡುತ್ತಿದೆ- ತಿಮ್ಮಶೆಟ್ಟಿ

Date:

ಜೆಡಿಎಸ್‌ನ ಪಂಚರತ್ನ ಯೋಜನೆಗಳೇ ನಾಡಿನ ಜನತೆಯ ಸಮಸ್ಯೆ ಗಳನ್ನು ಆಲಿಸುವ ಜೊತೆಗೆ ಬಡ ಹಾಗೂ ಹಿಂದುಳಿದ ಜನಾಂಗದವರಿಗೆ ಸದೃಢವಾಗಿ ಸ್ಪಂದಿಸುವ ಪ್ರಾದೇಶಿಕ ಪಕ್ಷ ಎಂದು ಚಿಕ್ಕಮಗಳೂರು ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಹೇಳಿದರು.

ಚಿಕ್ಕಮಗಳೂರಿನ ತಾಲ್ಲೂಕಿನ ಲಕ್ಯಾ ಹೋಬಳಿಯ ಕಣಿವೆಹಳ್ಳಿ ಹಾಗೂ ಕ್ಯಾತನಬೀಡು ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ಜನತೆಯು ಚುನಾವಣಾ ವಿಷಯವನ್ನು ಗಂಭೀರವಾಗಿ ಆಲೋಚಿಸಿ ಸೂಕ್ತ ಅಭ್ಯರ್ಥಿಯನ್ನು ಮತದಾನದ ಮೂಲಕ ಆಯ್ಕೆಗೊಳಿಸಬೇಕು ಎಂದು ಹೇಳಿದರು.

ಬಡವರ ಪರ ಉತ್ತಮ ಚಿಂತನೆ ಹೊಂದಿರುವ ಪ್ರಾದೇಶಿಕ ಪಕ್ಷ ಜೆಡಿಎಸ್. ಪ್ರತಿಯೊಬ್ಬರು ತಮ್ಮ ವ್ಯಾಪ್ತಿಗಳಲ್ಲಾಗಿರುವ ಅಭಿವೃದ್ದಿ ಶೂನ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸದ ಉಜ್ವಲ ಭವಿಷ್ಯಕ್ಕಾಗಿ ಹಾಗೂ ಆರ್ಥಿಕವಾಗಿ ಸದೃಢವಾಗಲು ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ಜನತೆಗೆ ವರದಾನವಾಗಲಿದೆ ಎಂದು ಹೇಳಿದರು.

ಪಕ್ಷದ ವತಿಯಿಂದ ಇದುವರೆಗೂ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಅನೇಕ ಬಾರಿ ಆರೋಗ್ಯ ಮತ್ತು ನೇತ್ರ ತಪಾಸಣೆ ಶಿಬಿರವನ್ನು ಆಯೋಜಿಸಿ ಗ್ರಾಮಸ್ಥರನ್ನು ಸ್ಪಂದಿಸುವ ಕಾರ್ಯ ಮಾಡಲಾಗಿದೆ. ಈ ಆಲೋಚನೆಗಳು ಕೇವಲ ಜೆಡಿಎಸ್‌ನಲ್ಲಿದೆಯೇ ಹೊರತು ಇನ್ಯಾವ ರಾಷ್ಟ್ರೀಯ ಪಕ್ಷಗಳಲ್ಲಿರುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರುಗಳು ಹಾಗೂ ಪಕ್ಷದ ಕಾರ್ಯಕರ್ತರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಅಕ್ಟೋಬರ್ 7 ರಂದು ಆಲ್ಕೊಳ‌ ಸುತ್ತಮುತ್ತ ವಿದ್ಯುತ್ ಸರಬರಾಜು ಇರುವುದಿಲ್ಲ

MESCOM ಶಿವಮೊಗ್ಗ ಅಕ್ಟೋಬರ್ 05 (ಕರ್ನಾಟಕ ವಾರ್ತೆ): ಶಿವಮೊಗ್ಗ...

Nehru Stadium Shimoga ಪ್ರಾಥಮಿಕ ಶಾಲಾಮಕ್ಕಳ ಕ್ರೀಡಾಕೂಟ ಉದ್ಘಾಟನೆ

Nehru Stadium Shimoga ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ...

Shimoga Dasara 2024 ಶಿವಮೊಗ್ಗ ರಂಗದಸರಾದಲ್ಲಿ ಅ.5 ರಿಂದ ನಾಟಕ ಪ್ರದರ್ಶನಗಳ ಸುಗ್ಗಿ

Shimoga Dasara 2024 ಈ ಬಾರಿ ಶಿವಮೊಗ್ಗ ಮಹಾನಗರ ಪಾಲಿಕೆಯು ಆಯೋಜನೆ...

Shivamogga News ಕೆರೆ,ಕಟ್ಟೆ,ಹಳ್ಳ ಜಮೀನು ಇತರೆ ಸರ್ಕಾರದ ಸ್ವತ್ತು ಒತ್ತುವರಿ ಗಮನಕ್ಕೆ ಬಂದಾಕ್ಷಣ ಕ್ರಮ ಕೈಗೊಳ್ಳಿ-ನ್ಯಾ.ಬಿ.ಎ.ಪಾಟೀಲ್

Shivamogga News ಸರ್ಕಾರದ ಸ್ವತ್ತಿನ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು...