Thursday, March 26, 2026
Thursday, March 26, 2026

ಜೆಡಿಎಸ್ ಬಡವರ ಪರ ಚಿಂತನೆ ಮಾಡುತ್ತಿದೆ- ತಿಮ್ಮಶೆಟ್ಟಿ

Date:

ಜೆಡಿಎಸ್‌ನ ಪಂಚರತ್ನ ಯೋಜನೆಗಳೇ ನಾಡಿನ ಜನತೆಯ ಸಮಸ್ಯೆ ಗಳನ್ನು ಆಲಿಸುವ ಜೊತೆಗೆ ಬಡ ಹಾಗೂ ಹಿಂದುಳಿದ ಜನಾಂಗದವರಿಗೆ ಸದೃಢವಾಗಿ ಸ್ಪಂದಿಸುವ ಪ್ರಾದೇಶಿಕ ಪಕ್ಷ ಎಂದು ಚಿಕ್ಕಮಗಳೂರು ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಹೇಳಿದರು.

ಚಿಕ್ಕಮಗಳೂರಿನ ತಾಲ್ಲೂಕಿನ ಲಕ್ಯಾ ಹೋಬಳಿಯ ಕಣಿವೆಹಳ್ಳಿ ಹಾಗೂ ಕ್ಯಾತನಬೀಡು ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ಜನತೆಯು ಚುನಾವಣಾ ವಿಷಯವನ್ನು ಗಂಭೀರವಾಗಿ ಆಲೋಚಿಸಿ ಸೂಕ್ತ ಅಭ್ಯರ್ಥಿಯನ್ನು ಮತದಾನದ ಮೂಲಕ ಆಯ್ಕೆಗೊಳಿಸಬೇಕು ಎಂದು ಹೇಳಿದರು.

ಬಡವರ ಪರ ಉತ್ತಮ ಚಿಂತನೆ ಹೊಂದಿರುವ ಪ್ರಾದೇಶಿಕ ಪಕ್ಷ ಜೆಡಿಎಸ್. ಪ್ರತಿಯೊಬ್ಬರು ತಮ್ಮ ವ್ಯಾಪ್ತಿಗಳಲ್ಲಾಗಿರುವ ಅಭಿವೃದ್ದಿ ಶೂನ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸದ ಉಜ್ವಲ ಭವಿಷ್ಯಕ್ಕಾಗಿ ಹಾಗೂ ಆರ್ಥಿಕವಾಗಿ ಸದೃಢವಾಗಲು ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ಜನತೆಗೆ ವರದಾನವಾಗಲಿದೆ ಎಂದು ಹೇಳಿದರು.

ಪಕ್ಷದ ವತಿಯಿಂದ ಇದುವರೆಗೂ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಅನೇಕ ಬಾರಿ ಆರೋಗ್ಯ ಮತ್ತು ನೇತ್ರ ತಪಾಸಣೆ ಶಿಬಿರವನ್ನು ಆಯೋಜಿಸಿ ಗ್ರಾಮಸ್ಥರನ್ನು ಸ್ಪಂದಿಸುವ ಕಾರ್ಯ ಮಾಡಲಾಗಿದೆ. ಈ ಆಲೋಚನೆಗಳು ಕೇವಲ ಜೆಡಿಎಸ್‌ನಲ್ಲಿದೆಯೇ ಹೊರತು ಇನ್ಯಾವ ರಾಷ್ಟ್ರೀಯ ಪಕ್ಷಗಳಲ್ಲಿರುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರುಗಳು ಹಾಗೂ ಪಕ್ಷದ ಕಾರ್ಯಕರ್ತರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...