Wednesday, June 25, 2025
Wednesday, June 25, 2025

ಜೆಡಿಎಸ್ ಬಡವರ ಪರ ಚಿಂತನೆ ಮಾಡುತ್ತಿದೆ- ತಿಮ್ಮಶೆಟ್ಟಿ

Date:

ಜೆಡಿಎಸ್‌ನ ಪಂಚರತ್ನ ಯೋಜನೆಗಳೇ ನಾಡಿನ ಜನತೆಯ ಸಮಸ್ಯೆ ಗಳನ್ನು ಆಲಿಸುವ ಜೊತೆಗೆ ಬಡ ಹಾಗೂ ಹಿಂದುಳಿದ ಜನಾಂಗದವರಿಗೆ ಸದೃಢವಾಗಿ ಸ್ಪಂದಿಸುವ ಪ್ರಾದೇಶಿಕ ಪಕ್ಷ ಎಂದು ಚಿಕ್ಕಮಗಳೂರು ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಹೇಳಿದರು.

ಚಿಕ್ಕಮಗಳೂರಿನ ತಾಲ್ಲೂಕಿನ ಲಕ್ಯಾ ಹೋಬಳಿಯ ಕಣಿವೆಹಳ್ಳಿ ಹಾಗೂ ಕ್ಯಾತನಬೀಡು ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ಜನತೆಯು ಚುನಾವಣಾ ವಿಷಯವನ್ನು ಗಂಭೀರವಾಗಿ ಆಲೋಚಿಸಿ ಸೂಕ್ತ ಅಭ್ಯರ್ಥಿಯನ್ನು ಮತದಾನದ ಮೂಲಕ ಆಯ್ಕೆಗೊಳಿಸಬೇಕು ಎಂದು ಹೇಳಿದರು.

ಬಡವರ ಪರ ಉತ್ತಮ ಚಿಂತನೆ ಹೊಂದಿರುವ ಪ್ರಾದೇಶಿಕ ಪಕ್ಷ ಜೆಡಿಎಸ್. ಪ್ರತಿಯೊಬ್ಬರು ತಮ್ಮ ವ್ಯಾಪ್ತಿಗಳಲ್ಲಾಗಿರುವ ಅಭಿವೃದ್ದಿ ಶೂನ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸದ ಉಜ್ವಲ ಭವಿಷ್ಯಕ್ಕಾಗಿ ಹಾಗೂ ಆರ್ಥಿಕವಾಗಿ ಸದೃಢವಾಗಲು ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ಜನತೆಗೆ ವರದಾನವಾಗಲಿದೆ ಎಂದು ಹೇಳಿದರು.

ಪಕ್ಷದ ವತಿಯಿಂದ ಇದುವರೆಗೂ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಅನೇಕ ಬಾರಿ ಆರೋಗ್ಯ ಮತ್ತು ನೇತ್ರ ತಪಾಸಣೆ ಶಿಬಿರವನ್ನು ಆಯೋಜಿಸಿ ಗ್ರಾಮಸ್ಥರನ್ನು ಸ್ಪಂದಿಸುವ ಕಾರ್ಯ ಮಾಡಲಾಗಿದೆ. ಈ ಆಲೋಚನೆಗಳು ಕೇವಲ ಜೆಡಿಎಸ್‌ನಲ್ಲಿದೆಯೇ ಹೊರತು ಇನ್ಯಾವ ರಾಷ್ಟ್ರೀಯ ಪಕ್ಷಗಳಲ್ಲಿರುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರುಗಳು ಹಾಗೂ ಪಕ್ಷದ ಕಾರ್ಯಕರ್ತರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Gurudatta Hegde ಅತ್ಯಾಧುನಿಕ ತಂತ್ರಾಂಶವನ್ನು ಅರಿತು ಕಾರ್ಯಕ್ಷೇತ್ರದಲ್ಲಿ ಅಳವಡಿಸಿಕೊಳ್ಳಿ : ಗುರುದತ್ತ ಹೆಗಡೆ

Gurudatta Hegde ನಾಗಾಲೋಟದಲ್ಲಿ ಬದಲಾಗುತ್ತಿರುವ ಕಾಲಮಾನಕ್ಕೆ ಅನುಗುಣವಾಗಿ ಸರ್ಕಾರವು ಸುಗಮ ಆಡಳಿತಕ್ಕೆ...

MESCOM ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.26 ರಂದು ಬೆಳಿಗ್ಗೆ...

Backward Classes Welfare Department ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ...

Department of Horticulture ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Department of Horticulture ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ...