Sunday, May 17, 2026
Sunday, May 17, 2026

ಜೆಡಿಎಸ್ ಬಡವರ ಪರ ಚಿಂತನೆ ಮಾಡುತ್ತಿದೆ- ತಿಮ್ಮಶೆಟ್ಟಿ

Date:

ಜೆಡಿಎಸ್‌ನ ಪಂಚರತ್ನ ಯೋಜನೆಗಳೇ ನಾಡಿನ ಜನತೆಯ ಸಮಸ್ಯೆ ಗಳನ್ನು ಆಲಿಸುವ ಜೊತೆಗೆ ಬಡ ಹಾಗೂ ಹಿಂದುಳಿದ ಜನಾಂಗದವರಿಗೆ ಸದೃಢವಾಗಿ ಸ್ಪಂದಿಸುವ ಪ್ರಾದೇಶಿಕ ಪಕ್ಷ ಎಂದು ಚಿಕ್ಕಮಗಳೂರು ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಹೇಳಿದರು.

ಚಿಕ್ಕಮಗಳೂರಿನ ತಾಲ್ಲೂಕಿನ ಲಕ್ಯಾ ಹೋಬಳಿಯ ಕಣಿವೆಹಳ್ಳಿ ಹಾಗೂ ಕ್ಯಾತನಬೀಡು ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದ ಅವರು ಜನತೆಯು ಚುನಾವಣಾ ವಿಷಯವನ್ನು ಗಂಭೀರವಾಗಿ ಆಲೋಚಿಸಿ ಸೂಕ್ತ ಅಭ್ಯರ್ಥಿಯನ್ನು ಮತದಾನದ ಮೂಲಕ ಆಯ್ಕೆಗೊಳಿಸಬೇಕು ಎಂದು ಹೇಳಿದರು.

ಬಡವರ ಪರ ಉತ್ತಮ ಚಿಂತನೆ ಹೊಂದಿರುವ ಪ್ರಾದೇಶಿಕ ಪಕ್ಷ ಜೆಡಿಎಸ್. ಪ್ರತಿಯೊಬ್ಬರು ತಮ್ಮ ವ್ಯಾಪ್ತಿಗಳಲ್ಲಾಗಿರುವ ಅಭಿವೃದ್ದಿ ಶೂನ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಮಕ್ಕಳ ವಿದ್ಯಾಭ್ಯಾಸದ ಉಜ್ವಲ ಭವಿಷ್ಯಕ್ಕಾಗಿ ಹಾಗೂ ಆರ್ಥಿಕವಾಗಿ ಸದೃಢವಾಗಲು ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ಜನತೆಗೆ ವರದಾನವಾಗಲಿದೆ ಎಂದು ಹೇಳಿದರು.

ಪಕ್ಷದ ವತಿಯಿಂದ ಇದುವರೆಗೂ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಅನೇಕ ಬಾರಿ ಆರೋಗ್ಯ ಮತ್ತು ನೇತ್ರ ತಪಾಸಣೆ ಶಿಬಿರವನ್ನು ಆಯೋಜಿಸಿ ಗ್ರಾಮಸ್ಥರನ್ನು ಸ್ಪಂದಿಸುವ ಕಾರ್ಯ ಮಾಡಲಾಗಿದೆ. ಈ ಆಲೋಚನೆಗಳು ಕೇವಲ ಜೆಡಿಎಸ್‌ನಲ್ಲಿದೆಯೇ ಹೊರತು ಇನ್ಯಾವ ರಾಷ್ಟ್ರೀಯ ಪಕ್ಷಗಳಲ್ಲಿರುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯ ಮುಖಂಡರುಗಳು ಹಾಗೂ ಪಕ್ಷದ ಕಾರ್ಯಕರ್ತರುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...