Tuesday, February 3, 2026
Tuesday, February 3, 2026

ಕಾಮಗಾರಿಗಳು ಲೇಔಟ್ ನಿರ್ಮಾಣಗಳಲ್ಲಿ ಆರಗ ಜ್ಞಾನೇಂದ್ರ ಸ್ವಜನ ಪಕ್ಷಪಾತ- ಕಿಮ್ಮನೆ ರತ್ನಾಕರ್

Date:

ಶಿವಮೊಗ್ಗ: ಹೊಸನಗರಗಳಲ್ಲಿನ ಪಿಡಬ್ಲ್ಯೂಡಿ ಕಾಮಗಾರಿಗಳೆಲ್ಲವನ್ನು ಗೃಹ ಸಚಿವರು ಅವರ ಸಂಬಂಧಿ ಸಿವಿ ಚಂದ್ರಶೇಖರ್ ಅವರಿಗೆ ನೀಡಿದ್ದಾರೆ. ಶೇ. 50ರಷ್ಟು ಪಾಲುದಾರಿಕೆಯು ಇದೆ ಎಂದು ಕಿಮ್ಮನೆ ರತ್ನಾಕರ್ ಅವರು ಆರಗ ಜ್ಞಾನೇಂದ್ರ ಅವರ ಮೇಲೆ ಆರೋಪಿಸಿದ್ದಾರೆ.

ಸರ್ಕಾರಿ ಭೂಮಿಯನ್ನು ಖಾಸಗಿ ಭೂಮಿಯನ್ನಾಗಿ ದಾಖಲಿಸಿ, ಲೇಔಟ್ ಗಳನ್ನ ಮಾಡುತ್ತಿದ್ದಾರೆ. ಇವರ ಮಗನೇ ಇದಕ್ಕೆ ಬಂಡವಾಳ ಹೂಡಿದ್ದಾರೆ ಎಂದು ಹೇಳಿದ್ದಾರೆ.

ಯಾವ ಅಧಿಕಾರಿಯನ್ನು ಎಲ್ಲಿಗೆ ವರ್ಗಾವಣೆ ಮಾಡಬೇಕು ಎಂಬ ಪಟ್ಟಿ, ಸ್ಯಾಂಟ್ರೋ ರವಿ ಬಳಿ ಇತ್ತು. ಅದರಂತೆ ವರ್ಗಾವಣೆ ಆಗಿದೆ. ಈ ವಿಚಾರದಲ್ಲಿ ಆರಗ ಜ್ಞಾನೇಂದ್ರ ಅವರನ್ನ ಬಂಧಿಸಬೇಕು. ಫೆಬ್ರವರಿ ಒಳಗೆ ಆರೋಗ್ಯ ಅವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಿಮ್ಮನೆ ರತ್ನಾಕರ್ ಅವರು ಎಚ್ಚರಿಕೆ ನೀಡಿದ್ದಾರೆ.

ನಾನು 10 ವರ್ಷ ಶಾಸಕನಾಗಿದ್ದೇನೆ. ಬಿಜೆಪಿಯವರ ಇಂತಹ ರಾಜಕಾರಣಕ್ಕೆ ಹೆದರುವುದಿಲ್ಲ. ನಾನು ರಾಜಕೀಯಕ್ಕೆ ಬಂದಿದ್ದು ಸಮಾಜದ ಸೇವೆಗಾಗಿ. ಇದನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರಿಗೆ ಈ ಬಗ್ಗೆ ಸವಾಲು ಎಸೆಯುತ್ತೇನೆ. ಅಮಿತ್ ಶಾ ಹಾಗೂ ಆರಗ ಜ್ಞಾನೇಂದ್ರ ಇವರಿಬ್ಬರೂ ನನ್ನ ವಿರುದ್ಧ ಈ ವಿಚಾರದಲ್ಲಿ ಸಿಬಿಐ ತನಿಖೆ ನಡೆಸಲಿ ಎಂದು ಮಾಧ್ಯಮಗೋಷ್ಠಿಯಲ್ಲಿ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...