Wednesday, March 25, 2026
Wednesday, March 25, 2026

ಕಾಮಗಾರಿಗಳು ಲೇಔಟ್ ನಿರ್ಮಾಣಗಳಲ್ಲಿ ಆರಗ ಜ್ಞಾನೇಂದ್ರ ಸ್ವಜನ ಪಕ್ಷಪಾತ- ಕಿಮ್ಮನೆ ರತ್ನಾಕರ್

Date:

ಶಿವಮೊಗ್ಗ: ಹೊಸನಗರಗಳಲ್ಲಿನ ಪಿಡಬ್ಲ್ಯೂಡಿ ಕಾಮಗಾರಿಗಳೆಲ್ಲವನ್ನು ಗೃಹ ಸಚಿವರು ಅವರ ಸಂಬಂಧಿ ಸಿವಿ ಚಂದ್ರಶೇಖರ್ ಅವರಿಗೆ ನೀಡಿದ್ದಾರೆ. ಶೇ. 50ರಷ್ಟು ಪಾಲುದಾರಿಕೆಯು ಇದೆ ಎಂದು ಕಿಮ್ಮನೆ ರತ್ನಾಕರ್ ಅವರು ಆರಗ ಜ್ಞಾನೇಂದ್ರ ಅವರ ಮೇಲೆ ಆರೋಪಿಸಿದ್ದಾರೆ.

ಸರ್ಕಾರಿ ಭೂಮಿಯನ್ನು ಖಾಸಗಿ ಭೂಮಿಯನ್ನಾಗಿ ದಾಖಲಿಸಿ, ಲೇಔಟ್ ಗಳನ್ನ ಮಾಡುತ್ತಿದ್ದಾರೆ. ಇವರ ಮಗನೇ ಇದಕ್ಕೆ ಬಂಡವಾಳ ಹೂಡಿದ್ದಾರೆ ಎಂದು ಹೇಳಿದ್ದಾರೆ.

ಯಾವ ಅಧಿಕಾರಿಯನ್ನು ಎಲ್ಲಿಗೆ ವರ್ಗಾವಣೆ ಮಾಡಬೇಕು ಎಂಬ ಪಟ್ಟಿ, ಸ್ಯಾಂಟ್ರೋ ರವಿ ಬಳಿ ಇತ್ತು. ಅದರಂತೆ ವರ್ಗಾವಣೆ ಆಗಿದೆ. ಈ ವಿಚಾರದಲ್ಲಿ ಆರಗ ಜ್ಞಾನೇಂದ್ರ ಅವರನ್ನ ಬಂಧಿಸಬೇಕು. ಫೆಬ್ರವರಿ ಒಳಗೆ ಆರೋಗ್ಯ ಅವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಿಮ್ಮನೆ ರತ್ನಾಕರ್ ಅವರು ಎಚ್ಚರಿಕೆ ನೀಡಿದ್ದಾರೆ.

ನಾನು 10 ವರ್ಷ ಶಾಸಕನಾಗಿದ್ದೇನೆ. ಬಿಜೆಪಿಯವರ ಇಂತಹ ರಾಜಕಾರಣಕ್ಕೆ ಹೆದರುವುದಿಲ್ಲ. ನಾನು ರಾಜಕೀಯಕ್ಕೆ ಬಂದಿದ್ದು ಸಮಾಜದ ಸೇವೆಗಾಗಿ. ಇದನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರಿಗೆ ಈ ಬಗ್ಗೆ ಸವಾಲು ಎಸೆಯುತ್ತೇನೆ. ಅಮಿತ್ ಶಾ ಹಾಗೂ ಆರಗ ಜ್ಞಾನೇಂದ್ರ ಇವರಿಬ್ಬರೂ ನನ್ನ ವಿರುದ್ಧ ಈ ವಿಚಾರದಲ್ಲಿ ಸಿಬಿಐ ತನಿಖೆ ನಡೆಸಲಿ ಎಂದು ಮಾಧ್ಯಮಗೋಷ್ಠಿಯಲ್ಲಿ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...