Sunday, May 17, 2026
Sunday, May 17, 2026

ಕಾಮಗಾರಿಗಳು ಲೇಔಟ್ ನಿರ್ಮಾಣಗಳಲ್ಲಿ ಆರಗ ಜ್ಞಾನೇಂದ್ರ ಸ್ವಜನ ಪಕ್ಷಪಾತ- ಕಿಮ್ಮನೆ ರತ್ನಾಕರ್

Date:

ಶಿವಮೊಗ್ಗ: ಹೊಸನಗರಗಳಲ್ಲಿನ ಪಿಡಬ್ಲ್ಯೂಡಿ ಕಾಮಗಾರಿಗಳೆಲ್ಲವನ್ನು ಗೃಹ ಸಚಿವರು ಅವರ ಸಂಬಂಧಿ ಸಿವಿ ಚಂದ್ರಶೇಖರ್ ಅವರಿಗೆ ನೀಡಿದ್ದಾರೆ. ಶೇ. 50ರಷ್ಟು ಪಾಲುದಾರಿಕೆಯು ಇದೆ ಎಂದು ಕಿಮ್ಮನೆ ರತ್ನಾಕರ್ ಅವರು ಆರಗ ಜ್ಞಾನೇಂದ್ರ ಅವರ ಮೇಲೆ ಆರೋಪಿಸಿದ್ದಾರೆ.

ಸರ್ಕಾರಿ ಭೂಮಿಯನ್ನು ಖಾಸಗಿ ಭೂಮಿಯನ್ನಾಗಿ ದಾಖಲಿಸಿ, ಲೇಔಟ್ ಗಳನ್ನ ಮಾಡುತ್ತಿದ್ದಾರೆ. ಇವರ ಮಗನೇ ಇದಕ್ಕೆ ಬಂಡವಾಳ ಹೂಡಿದ್ದಾರೆ ಎಂದು ಹೇಳಿದ್ದಾರೆ.

ಯಾವ ಅಧಿಕಾರಿಯನ್ನು ಎಲ್ಲಿಗೆ ವರ್ಗಾವಣೆ ಮಾಡಬೇಕು ಎಂಬ ಪಟ್ಟಿ, ಸ್ಯಾಂಟ್ರೋ ರವಿ ಬಳಿ ಇತ್ತು. ಅದರಂತೆ ವರ್ಗಾವಣೆ ಆಗಿದೆ. ಈ ವಿಚಾರದಲ್ಲಿ ಆರಗ ಜ್ಞಾನೇಂದ್ರ ಅವರನ್ನ ಬಂಧಿಸಬೇಕು. ಫೆಬ್ರವರಿ ಒಳಗೆ ಆರೋಗ್ಯ ಅವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕಿಮ್ಮನೆ ರತ್ನಾಕರ್ ಅವರು ಎಚ್ಚರಿಕೆ ನೀಡಿದ್ದಾರೆ.

ನಾನು 10 ವರ್ಷ ಶಾಸಕನಾಗಿದ್ದೇನೆ. ಬಿಜೆಪಿಯವರ ಇಂತಹ ರಾಜಕಾರಣಕ್ಕೆ ಹೆದರುವುದಿಲ್ಲ. ನಾನು ರಾಜಕೀಯಕ್ಕೆ ಬಂದಿದ್ದು ಸಮಾಜದ ಸೇವೆಗಾಗಿ. ಇದನ್ನು ಸವಾಲಾಗಿ ಸ್ವೀಕರಿಸುತ್ತೇನೆ. ಮಾನ್ಯ ಗೃಹ ಸಚಿವರಾದ ಆರಗ ಜ್ಞಾನೇಂದ್ರ ಅವರಿಗೆ ಈ ಬಗ್ಗೆ ಸವಾಲು ಎಸೆಯುತ್ತೇನೆ. ಅಮಿತ್ ಶಾ ಹಾಗೂ ಆರಗ ಜ್ಞಾನೇಂದ್ರ ಇವರಿಬ್ಬರೂ ನನ್ನ ವಿರುದ್ಧ ಈ ವಿಚಾರದಲ್ಲಿ ಸಿಬಿಐ ತನಿಖೆ ನಡೆಸಲಿ ಎಂದು ಮಾಧ್ಯಮಗೋಷ್ಠಿಯಲ್ಲಿ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...