Wednesday, March 25, 2026
Wednesday, March 25, 2026

ರಾಹುಲ್ ತಾಳ್ಮೆ ಬ್ಯಾಟಿಂಗ್ ಲಂಕನ್ನರ ವಿರುದ್ಧ ಏಕದಿನ ಸರಣಿಗೆದ್ದ ಭಾರತ

Date:

ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಕ್ರಿಕೆಟ್ ಪಂದ್ಯವನ್ನು ರಾಹುಲ್ ಅವಿಸ್ಮರಣೀಯವನ್ನಾಗಿಸಿದ್ದಾರೆ. ಸಹಜವಾಗಿ ಆರಂಭಿಕ ಬ್ಯಾಟರ್ ಆಗಿರುವ ರಾಹುಲ್ ಎರಡನೇ ಕ್ರಮಾಂಕದಲ್ಲಿ ಕ್ರೀಸ್ ಗಿಳಿದಿದ್ದರು.

ಆಟದ ಕೊನೆಯ ತನಕ ಅವರು ತೋರಿದ ಸಹನೆ, ಜವಾಬ್ದಾರಿ ಮರೆಯುವಂತಿಲ್ಲ. ರಾಹುಲ್ ಗಳಿಸಿದ ಅಜೇಯ 64 ರನ್ ಗಳಲ್ಲಿ 06 ಬೌಂಡರಿಗಳಿದ್ದವು.

ರೋಹಿತ್ ಶರ್ಮಾ 17, ಗಿಲ್ 21, ಕೊಹ್ಲಿ 4, ಶ್ರೇಯಸ್ 28 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. 86 ರನ್ ಗಳಿಗೆ ನಾಲ್ಕು ವಿಕೆಟ್ ಕಬಳಿಸಿದ ಶ್ರೀಲಂಕಾ ಗೆ ಈ ಪಂದ್ಯ ಬಾಯಿಗೆ ಬಂದ ತುತ್ತಾಗಿದ್ದಂತೆ ಕಂಡುಬಂದಿತು.

ಆದರೆ ರಾಹುಲ್ ಜೊತೆಗೂಡಿದ ಹಾರ್ದಿಕ್ ಪಾಂಡ್ಯ ರನ್ ಗತಿ ಹೆಚ್ಚಿಸಿದರು .53 ಬಾಲ್ ಗಳಲ್ಲಿ 35 ರನ್ ಗಳಿಸಿದ ಹಾರ್ದಿಕ್ ಬ್ಯಾಟಿಂಗ್ ಜಯದತ್ತ ಶೀಘ್ರ ಮುಖ ಮಾಡಿತ್ತು.

ಆದರೆ ಕರುಣಾ ರತ್ನೆ ಅವರ ಬೌಲಿಂಗ್ ನಲ್ಲಿ ಕಾಟ್ ಬಿಹೈಂಡ್ ಆದರು. ಮತ್ತೆ ಆಟಕ್ಕೆ ಮಂಕು ಕವಿಯಬಹುದೇನೋ ಅನ್ನಿಸಿತ್ತು. ಅಕ್ಸರ್ ಪಟೇಲ್ ಅವರು 21 ಬಾಲ್ ಗಳಲ್ಲಿ 21 ರನ್ ಸೇರಿಸಿದರು. ಬ್ಯಾಟಿಂಗ್ ಅದೇ ಬಿಸಿಯಲ್ಲಿತ್ತು.

ಅವರೂ ಹೆಚ್ಚು ಹೊತ್ತು ನಿಲ್ಲಲಿಲ್ಲ. ಡಿಸಿಲ್ವ ಅವರ ಬೌಲಿಂಗ್ ನಲ್ಲಿ ಔಟಾದರು. 191 ರನ್ ಗೆ 6 ವಿಕೆಟ್ ಸ್ಕೋರ್ ಆಗಿತ್ತು.
ಜಯ ಇನ್ನೇನು ಸಮೀಪವಿತ್ತು. ಕುಲದೀಪ್ ಯಾದವ್ ತಮ್ಮ ಬ್ಯಾಟಿಂಗ್ ಸಾಥ್ ನೀಡಿದರು. ಜಯದ ಬೌಂಡರಿ ಬಾರಿಸಿದರು.

ಅಂತೂ ರಾಹುಲ್ ಆತ್ಮವಿಶ್ವಾಸ ಕುದುರಿಸಿಕೊಂಡು ಶ್ರೀಲಂಕಾ ತಂಡದಿಂದ ಜಯ ಕಸಿದುಕೊಂಡರು.

ಶ್ರೀಲಂಕಾ -215 (39-4)
ಭಾರತ-219-06 (43.2)

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...