Sunday, May 17, 2026
Sunday, May 17, 2026

ಕೊಪ್ಪಳದ ಕಿರ್ಲೋಸ್ಕರ್ ಫೆರಸ್ ಕಾರ್ಖಾನೆವತಿಯಿಂದರಸ್ತೆ ಸುರಕ್ಷತಾ ಸಪ್ತಾಹ

Date:

ರಾಷ್ಟೀಯ ರಸ್ತೆ ಸುರಕ್ಷತಾ ಸಪ್ತಾಹ-2023ಕ್ಕೆ ಚಾಲನೆ*

ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ, ಭಾರತ ಸರ್ಕಾರವು ಎಲ್ಲರಿಗೂ ಸುರಕ್ಷಿತ ರಸ್ತೆಗಳ ಕಾರಣವನ್ನು ಪ್ರಚಾರ ಮಾಡಲು “ಸ್ವಚ್ಛತಾ ಪಖ್ವಾದ” ಅಡಿಯಲ್ಲಿ 11 ರಿಂದ 17 ಜನವರಿ 2023 ರವರೆಗೆ ರಸ್ತೆ ಸುರಕ್ಷತಾ ಸಪ್ತಾಹವನ್ನು ಆಚರಿಸುತ್ತಿದೆ. ವಾರದಲ್ಲಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮತ್ತು ರಸ್ತೆ ಸುರಕ್ಷತೆಯ ಕಾರಣಕ್ಕೆ ಕೊಡುಗೆ ನೀಡಲು ಎಲ್ಲಾ ಪಾಲುದಾರರಿಗೆ ಅವಕಾಶವನ್ನು ನೀಡಲು ದೇಶದಾದ್ಯಂತ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಇದು ರಸ್ತೆ ಅಪಘಾತಗಳ ಕಾರಣಗಳು ಮತ್ತು ಅವುಗಳನ್ನು ತಡೆಗಟ್ಟುವ ಕ್ರಮಗಳಿಗೆ ಸಂಬಂಧಿಸಿದ ವಿವಿಧ ಜಾಗೃತಿ ಅಭಿಯಾನಗಳನ್ನು ಒಳಗೊಂಡಿದೆ.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಕಾರ್ಖಾನೆಯ ಆವರಣದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ದಿನಾಂಕ 11-1-2023 ರಿಂದ 17-1-2023 ರ ವರೆವಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಆಚರಣೆಯನ್ನು ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಕಾರ್ಖಾನೆಯ ಆವರಣದಲ್ಲಿ ಕಾರ್ಮಿಕರು ಮತ್ತು ಆಡಳಿತ ವರ್ಗದ ಅದಿಕಾರಿಗಳು ಸೇರಿ ರಸ್ತೆ ಸುರಕ್ಷತಾ ಜಾತಾ ನಡೆಸಲಾಯಿತು. ಸುರಕ್ಷತಾ ನೆಡಿಗೆಯಲ್ಲಿ ಕಾರ್ಖಾನೆಯ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಸಂಯೋಜಕ ಉಪಾಧ್ಯಕ್ಷರಾದ ಶ್ರೀ ಪಿ.ನಾರಾಯಣ ಮತ್ತು ಬೀಡು ಕಬ್ಬಿಣ ವಿಭಾಗದ ಸಂಯೋಜಕ ಉಪಾದ್ಯಕ್ಷರಾದ ಶ್ರೀ ಎಂ.ಜಿ.ನಾಗರಾಜ್ ಹಾಗೂ ಹಿರಿಯ ಮತ್ತು ಕಿರಿಯ ಅಧಿಕಾರಿಗಳು, ಗುತ್ತಿಗೆದಾರರು, ಕಾರ್ಮಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮವನ್ನು ಸುರಕ್ಷತಾ ವಿಭಾಗ ಆಯೋಜಿಸಿದ್ದರು. ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಅಭಿಯಾನದ ನಂತರ ಪ್ರಾಜೆಕ್ಟ್ ಕಾರ್ಮಿಕರು ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ನಾಟಕ ಪ್ರದರ್ಶನ ಮಾಡಿದರು.
ಶ್ರೀ ಪಿ.ನಾರಾಯಣ ಮಾತನಾಡುತ್ತಾ ಅನೇಕ ಅಪಘಾತಗಳು ಮಾನವ ತಪ್ಪುಗಳಿಂದಲೇ ಆಗುತ್ತವೆ. ಅಮಾಯಕರು ಜೀವ ಕಳೆದುಕೊಂಡು ಅವಲಂಬಿಸಿರುವವರನ್ನು ಬೀದಿಪಾಲು ಮಾಡುತ್ತಾರೆ. ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬ ಮತ್ತು ಅವಲಂಬಿತರನ್ನು ನೆನಪಿಸಿಕೊಳ್ಳಬೇಕು. ಎಲ್ಲಕ್ಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಕುಡಿದು ವಾಹನ ಚಾಲನೆ ಮಾಡುವುದು, ಮೊಬೈಲ್‍ನಲ್ಲಿ ಮಾತನಾಡುತ್ತಾ ಚಾಲನೆ ಮಾಡುವುದನ್ನು ಕಡ್ಡಾಯವಾಗಿ ನಿಲ್ಲಿಸಬೇಕು ಚಾಲಕರು ರಸ್ತೆ ನಿಯಮಗಳನ್ನು ಹಾಗೂ ಸಂಚಾರ ಚಿಹ್ನೆಗಳನ್ನು ಚೆನ್ನಾಗಿ ಅರಿತುಕೊಳ್ಳಬೇಕು. ಸ್ವಲ್ಪವೂ ಬೇಜವಾಬ್ದಾರಿ ಅಥವಾ ನಿರ್ಲಕ್ಷ್ಯತೆ ತೋರದೆ ನಿಯಮ ಪಾಲನೆ ಮಾಡಬೇಕು. ಕಾರ್ಖಾನೆಗೆ ಬರುವ ದ್ವಿಚಕ್ರವಾಹನ ಸವಾರರು ಹೆಲ್ಮೆಟ್ ಧರಿಸಿರಬೇಕು. ಸಂಚಾರ ನಿಯಮಗಳನ್ನು ಪಾಲನೆ ಮಾಡಿದರೆ ಸಾಕಷ್ಟು ಅಪಘಾತಗಳನ್ನು ತಡೆಗಟ್ಟಬಹುದು ಎಂದರು.

ವರದಿ

ಮುರುಳಿಧರ್ ನಾಡಿಗೇರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...