Monday, June 23, 2025
Monday, June 23, 2025

ಕರ್ನಾಟಕ ಸಂಘದ ವಾರ್ಷಿಕ ಪುಸ್ತಕ ಬಹುಮಾನಕ್ಕೆ ಕೃತಿಗಳಿಗೆ ಆಹ್ವಾನ

Date:

ಪ್ರತಿ ವರ್ಷದಂತೆ ಶಿವಮೊಗ್ಗ ಕರ್ನಾಟಕ ಸಂಘವು 2022ನೇಯ ಸಾಲಿನಲ್ಲಿ ಮೊದಲ ಮುದ್ರಣವಾಗಿ ಪ್ರಕಟವಾದ ಕನ್ನಡ ಪುಸ್ತಕಗಳಿಗೆ ಬಹುಮಾನವನ್ನು ನೀಡಲು ಲೇಖಕರಿಂದ ಮತ್ತು ಪ್ರಕಾಶಕರಿಂದ ಕೆಳಕಂಡ ನಿಯಮಗಳಿಗೆ ಒಳಪಟ್ಟಂತೆ ಕೃತಿಗಳನ್ನು ಆಹ್ವಾನಿಸುತ್ತಿದೆ.

01.ಮರುಮುದ್ರಣಗೊಂಡ ಕೃತಿಗಳಿಗೆ, ಹಸ್ತ ಪ್ರತಿಗಳಿಗೆ ಮತ್ತು ಸಂಪಾದಿತ ಕೃತಿಗಳಿಗೆ ಅವಕಾಶವಿರುವುದಿಲ್ಲ.

02. ಈ ಹಿಂದೆ ಕರ್ನಾಟಕ ಸಂಘದ ಬಹುಮಾನ ಪಡೆದವರು ಅದೇ ವಿಭಾಗದಲ್ಲಿ ಸ್ಪರ್ಧಿಸುವಂತಿಲ್ಲ, ಇನ್ನಿತರೆ ಯಾವುದೇ ವಿಭಾಗಕ್ಕೆ ಸ್ಪರ್ಧಿಸಬಹುದು.

03. ಕರ್ನಾಟಕ ಸಂಘದ ಸದಸ್ಯರು ಭಾಗವಹಿಸುವಂತಿಲ್ಲ.

04. ಪುಸ್ತಕ ಬಹುಮಾನಕ್ಕೆ ಪುಸ್ತಕದ ಒಟ್ಟು 04 ಪ್ರತಿಗಳನ್ನು ಕಳುಹಿಸಬೇಕು / ಬಹುಮಾನಕ್ಕೆ ಕಳುಹಿಸಿದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.

05. ಅಂಕಣ ಬರಹಗಳು ಪತ್ರಿಕೆಗಳಲ್ಲಿ ಪ್ರಕಟವಾಗಿರುವ ಬಗ್ಗೆ ದಾಖಲೆ ನೀಡಬೇಕು.

06. ಬರಹಗಾರರು/ಪ್ರಕಾಶಕರು – ಪತ್ರದ ಮುಖೇನ ಸ್ವವಿವರ / ವಿಳಾಸ / ಮೊಬೈಲ್ ನಂ. ಮತ್ತು ಯಾವ ಪ್ರಕಾರಕ್ಕೆ ಸಲ್ಲಿಸುತ್ತಿರುವುದು ಎಂಬ ಬಗ್ಗೆ ವಿವರವನ್ನು ಕಳುಹಿಸಬೇಕು.

07. ಒಂದು ಪ್ರಕಾರಕ್ಕೆ ಕನಿಷ್ಠ 05 ಕೃತಿಗಳು ಬರದಿದ್ದರೆ ಬಹುಮಾನಕ್ಕೆ ಪರಿಗಣ ಸಲಾಗುವುದಿಲ್ಲ.

08. ವಿವಿಧ ಪ್ರಕಾರಕ್ಕೆ ಪುಸ್ತಕ ಕಳಿಸಿದಲ್ಲಿ ಒಂದೊಂದು ಪ್ರಕಾರಕ್ಕೂ 04 ಪುಸ್ತಕಗಳು ಪ್ರತ್ಯೇಕವಾಗಿರಬೇಕು.

ಪ್ರಕಾರ

01.ಕಾದಂಬರಿ
ಕುವೆಂಪು ಪುರಸ್ಕಾರ

02.ಅನುವಾದ
ಪ್ರೊ. ಎಸ್.ವಿ. ಪರಮೇಶ್ವರ ಭಟ್ಟ ಪುರಸ್ಕಾರ

03.ಮಹಿಳಾ ಸಾಹಿತ್ಯ
ಶ್ರೀಮತಿ ಎಂ.ಕೆ. ಇಂದಿರಾ ಪುರಸ್ಕಾರ

04.ಮುಸ್ಲಿಂ ಬರಹಗಾರರು
ಶ್ರೀ ಪಿ. ಲಂಕೇಶ್ ಪುರಸ್ಕಾರ

05.ಕವನ ಸಂಕಲನ
ಡಾ. ಜಿ. ಎಸ್. ಶಿವರುದ್ರಪ್ಪ ಪುರಸ್ಕಾರ

06. ಅಂಕಣ ಬರಹಗಾರರು
ಡಾ. ಹಾ. ಮಾ. ನಾಯಕ ಪುರಸ್ಕಾರ

07.ಸಣ್ಣ ಕಥಾ ಸಂಕಲನ
ಡಾ. ಯು. ಆರ್. ಅನಂತಮೂರ್ತಿ ಪುರಸ್ಕಾರ

08.ನಾಟಕ
ಡಾ. ಕೆ. ವಿ. ಸುಬ್ಬಣ್ಣ ಪುರಸ್ಕಾರ

09.ಪ್ರವಾಸ ಸಾಹಿತ್ಯ
ಶ್ರೀ ಕುಕ್ಕೆ ಸುಬ್ರಹ್ಮಣ್ಯ ಶಾಸ್ತ್ರಿ ಪುರಸ್ಕಾರ

10. ವಿಜ್ಞಾನ ಸಾಹಿತ್ಯ
ಶ್ರೀ ಹಸೂಡಿ ವೆಂಕಟಶಾಸ್ತ್ರೀ ಪುರಸ್ಕಾರ

11. ಮಕ್ಕಳ ಸಾಹಿತ್ಯ
ಡಾ. ನಾ. ಡಿಸೋಜ ಪುರಸ್ಕಾರ

12. ವೈದ್ಯ ಸಾಹಿತ್ಯ
ಡಾ. ಹೆಚ್. ಡಿ. ಚಂದ್ರಪ್ಪಗೌಡ ಪುರಸ್ಕಾರ

ಮೇಲ್ಕಂಡ ಪ್ರಕಾರಗಳ ಸಾಹಿತ್ಯ ಕೃತಿಗಳ 04 (ನಾಲ್ಕು) ಪ್ರತಿಗಳನ್ನು ಸಲ್ಲಿಸಲು ದಿನಾಂಕ 15- 03-2023ರವರೆಗೆ ಕಾಲಾವಕಾಶವಿರುತ್ತದೆ.
ನಂತರ ಬಂದ ಕೃತಿಗಳನ್ನು ಪರಿಗಣ ಸಲಾಗುವುದಿಲ್ಲ. ಪುಸ್ತಕಗಳನ್ನು ಗೌರವ ಕಾರ್ಯದರ್ಶಿಗಳು, ಕರ್ನಾಟಕ ಸಂಘ, ಬಿ.ಹೆಚ್.ರಸ್ತೆ, ಶಿವಮೊಗ್ಗ-577201 ಇವರಿಗೆ ಅಂಚೆ/ಕೊರಿಯರ್ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬೇಕು.

ಅತ್ಯುತ್ತಮವೆಂದು ಆಯ್ಕೆ ಆದ ಕೃತಿಗಳಿಗೆ ರೂ: 10,000/- (ಹತ್ತು ಸಾವಿರ) ನಗದು ಬಹುಮಾನ ಮತ್ತು ಫಲಕವನ್ನು ನೀಡಿ ಗೌರವಿಸಲಾಗುವುದು.
ತೀರ್ಪುಗಾರರ ತೀರ್ಮಾನವೇ ಅಂತಿಮ.

ಹೆಚ್ಚಿನ ವಿವರಗಳಿಗೆ ಕರ್ನಾಟಕ ಸಂಘದ ಕಛೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ದೂರವಾಣ ಸಂಖ್ಯೆ ( 08182-277406/ 99801599696/ 959077200

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...