Tuesday, October 1, 2024
Tuesday, October 1, 2024

ಹಿರಿಯ ರಾಜಕಾರಣಿ ತಿಮ್ಮಪ್ಪ ಹೆಗ್ಡೆ ಅವರ ನಿಧನಕ್ಕೆ ವಿವಿಧ ಗಣ್ಯರ ಶ್ರದ್ದಾಂಜಲಿ

Date:

ಶಿವಮೊಗ್ಗ ಜಿಲ್ಲೆಯ “ರಾಜಕೀಯ ಭೀಷ್ಮ” ಎಂದೇ ಗುರುತಿಸಲ್ಪಡುವ ಅತ್ಯಂತ ಸರಳ ಸಜ್ಜನ ರಾಜಕಾರಣಿ ಎಲ್‌.ಟಿ. ತಿಮ್ಮಪ್ಪ ಹೆಗಡೆಯವರ ನಿಧನದ ವಾರ್ತೆ ಕೇಳಿ ಬೇಸರವಾಯಿತು. ಕೇವಲ ರಾಜಕೀಯ ಕ್ಷೇತ್ರಕ್ಕೆ ಅಂಟಿಕೊಳ್ಳದೆ ಸಹಕಾರಿ ಕ್ಷೇತ್ರ ವಿದ್ಯಾ ಕ್ಷೇತ್ರ, ಧಾರ್ಮಿಕ ಕ್ಷೇತ್ರ, ಹಾಗೂ ಬ್ರಾಹ್ಮಣ ಸಮುದಾಯ ನಡುವೆ ಕೂಡ ತಮ್ಮನ್ನು ತಾವು ತೊಡಸಿಕೊಂಡಿದ್ದ ತಿಮ್ಮಪ್ಪನವರು ಎಲ್ಲರನ್ನೂ ಗುರುತಿಸಿ ಮಾತನಾಡಿಸತ್ತಿದ್ದರು. ಯಾವುದೇ ಹಮ್ಮು ಬಿಮ್ಮಿಲ್ಲದೆ ಎಲ್ಲರೂಡನೆ ಒಂದಾಗಿ ಬೆರೆಯುತ್ತಿದ್ದರು. ಅವರ ಸರಣ ನಡವಳಿಕೆ ಸ್ನೇಹಶೀಲ ಸ್ವಭಾವ ನಿಜಕ್ಕೂ ನಮ್ಮೆಲ್ಲರಿಗೂ ಮಾದರಿ.94 ವರ್ಷದ ತಿಮ್ಮಪ್ಪನವರು ವಯೋ ಸಹಜವಾದ ಕಾಯಿಲೆಯಿಂದ ನಿಧನ ಹೊಂದಿದ್ದಾರೆ.
ಶ್ರೀ ತಿಮ್ಮಪ್ಪ ಹೆಗಡೆಯವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ನೋವನ್ನು ಬರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಸ್.ದತ್ತಾತ್ರಿಯವರು ಶ್ರದ್ಧಾಂಜಲಿಯವರು ಸಂತಾಪ ಸೂಚಿಸಿದ್ದಾರೆ.

ಹಿರಿಯ ರಾಜಕಾರಣಿ ಎಲ್.ಟಿ. ತಿಮ್ಮಪ್ಪ ಹೆಗಡೆಯವರ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಹೇಗಿರಬೇಕು ಎಂಬುದಕ್ಕೆ ಎಲ್.ಟಿ. ಅವರ ಜೀವನ ಮಾದರಿಯಾಗಿದೆ. ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡ ಅವರ ಕಾರ್ಯವೈಖರಿ ಯುವ ಪೀಳಿಗೆಗೆ ಆದರ್ಶಪ್ರಾಯವಾಗಿದೆ ಎಂದು ಸಾಗರ ಶಾಸಕರಾದ ಎಚ್. ಹಾಲಪ್ಪನವರು ಸಂತಾಪ ಸೂಚಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ಪ್ರಾಮಾಣಿಕರಾಗಿ ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ಸದಾ ಶ್ರಮಿಸಿದ ಮೇರು ವ್ಯಕ್ತಿತ್ವ ಎಲ್. ಟಿ. ಅವರದ್ದು. ಕಾಂಗ್ರೆಸ್ ಪಕ್ಷದ ಸಂಘಟನೆಗೂ ಅವರು ನೀಡಿರುವ ಕೊಡುಗೆ ಅಪಾರ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿ.ಆರ್. ಜಯಂತ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ ‌.

ಮಲೆನಾಡು ಪ್ರದೇಶದ ಜನಮಾನಸದಲ್ಲಿ ಸದಾ ಉಳಿಯುವ ಕೆಲವೇ ರಾಜಕಾರಣಿಗಳ ಪೈಕಿ ಎಲ್.ಟಿ. ಕೂಡ ಒಬ್ಬರಾಗಿದ್ದಾರೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ಅವರು ಕೊಟ್ಟಿರುವ ಒತ್ತನ್ನು ಮರೆಯುವಂತಿಲ್ಲ ಎಂದು ಸಾಗರದ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ತಿಳಿಸಿದ್ದಾರೆ.

ಸರಳತೆ ಸಜ್ಜನಿಕೆಯ ಮನೋಭಾವದ ಎಲ್.ಟಿ. ತಿಮ್ಮಪ್ಪ ಹೆಗಡೆ ಅತ್ಯಂತ ಪ್ರಭಾವಿ ವ್ಯಕ್ತಿತ್ವ ಹೊಂದಿದ್ದರು. ರಾಜಕಾರಣದ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವ ಮೂಲಕ ಅವರು ನೀಡಿರುವ ಕೊಡುಗೆಯನ್ನು ಮರೆಯುವಂತಿಲ್ಲ ಎಂದು ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪನವರು ಸಂತಾಪ ವ್ಯಕ್ತಪಡಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...