VISL ನಲ್ಲಿ 105ನೇ ಸ್ಥಾಪನೆಯ ವರ್ಷದ ಅಂಗವಾಗಿ ಅತ್ಯುತ್ತಮ ಇಂಜೀನಿಯರ್, ರಾಜನೀತಿಜ್ಞ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ದಿನಾಂಕ 18-01-2023 ರಂದು ಮಾಲಾರ್ಪಣೆ ಮಾಡುವ ಮೂಲಕ ವಿ.ಐ.ಎಸ್.ಪಿಯ ಸಮುದಾಯವು ತಮ್ಮ ಗೌರವ ವಂದನೆಗಳನ್ನು ಸಲ್ಲಿಸಿತು.
ಶ್ರೀ ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು, ಶ್ರೀ ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಿಬ್ಬಂದಿ ಮತ್ತು ಸಾರ್ವಜನಿಕ ಸಂಪರ್ಕ), ಶ್ರೀ ಜೆ. ಜಗದೀಶ, ಅಧ್ಯಕ್ಷರು, ಗಿISಐ ಕಾರ್ಮಿಕರ ಸಂಘ, ಶ್ರೀ ಸುಗಾಲಿ ಲೋಕನಾಥ, ಅಧ್ಯಕ್ಷರು,VISL ಅಧಿಕಾರಿಗಳ ಸಂಘ ಇವರುಗಳು VISL ಆವರಣದೊಳಗಿರುವ ಸರ್. ಎಮ್. ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಂಸ್ಥಾಪಕರಾದ ಸರ್. ಎಮ್. ವಿಶ್ವೇಶ್ವರಾಯರವರಿಗೆ ತಮ್ಮ ನಮ್ರತೆಯ ಗೌರವ ವಂದನೆಗಳನ್ನು ಸಲ್ಲಿಸಿದರು.
ಈ ಕಾರ್ಯಕ್ರಮದ ಸ್ಮರಣಾರ್ಥ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆಯ ಭಾಗವಾಗಿ ಗ್ರಾಮೀಣ ಶಿಕ್ಷಕರಿಗೆ ತರಬೇತಿಗಾಗಿ ಒಂದು ಲಕ್ಷ ರೂಪಾಯಿ ಮೌಲ್ಯದ 2 ಕಂಪ್ಯೂಟರುಗಳು ಮತ್ತು ವೀಡಿಯೋ ವೆಬ್ಕ್ಯಾಮ್ಅನ್ನು ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಎ.ಕೆ. ನಾಗೇಂದ್ರಪ್ಪರವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಎಸ್.ಕೆ. ರವಿಕುಮಾರ್, ಎಜುಕೇಷನ್ ಕೋ-ಆರ್ಡಿನೇಟರ್ ಉಪಸ್ಥಿತರಿದ್ದರು.
VISL ಅತಿಥಿಗೃಹದ ಮಾಹಿತಿ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು.VISL ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ್ದು, ಶ್ರೀ ನಿತಿನ್ ಜೋಸ್, ಸಹಾಯಕ ಮಹಾಪ್ರಬಂಧಕರು ನೇತೃತ್ವದ ಸಿಸ್ಟಂ ಸುಧಾರಣೆಯ ಪ್ರಕ್ರಿಯೆಯ ಭಾಗವಾಗಿ ಪ್ರಾರಂಭಿಸಲಾಗಿದೆ.
ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
