ಇತ್ತೀಚಿನ ದಿನಗಳಲ್ಲಿ ಭಾರತ ಸರ್ಕಾರವು ಗಮನಿಸಿದಂತೆ ದೇಶದ 500 ಕ್ಕೂ ಹೆಚ್ಚಿನ ಜಿಲ್ಲೆಗಳಲ್ಲಿ ಸಾಮಾಜಿಕ ಭದ್ರತೆಯ ಬಗ್ಗೆ ತಿಳುವಳಿಕೆ ಇಲ್ಲದಿರುವುದು, ಅದನ್ನು ಸುಧಾರಿಸುವುದರಲ್ಲಿ, ದೊಡ್ಡ ಅಡಚಣೆಯಾಗಿದೆ.
ಭಾರತದಲ್ಲಿ ವಯೋವೃದ್ಧರ ಜನಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾರ್ಮಿಕ ವಲಯದ ಜನತೆಯು ನಿವೃತ್ತಿಯ ಸಮಯದಲ್ಲಿ ಅಥವಾ ನಂತರದಲ್ಲಿ, ಸಾಮಾಜಿಕ ಭದ್ರತೆಯ ಪ್ರಯೋಜನಗಳು ಮತ್ತು ಉಳಿತಾಯಗಳ ಬಗ್ಗೆ ಮಾಹಿತಿ ಹೊಂದಿರುವುದು ಅವಶ್ಯಕವಾಗಿದೆ.
ಪ್ರತಿಯೊಂದು ಜಿಲ್ಲೆಗಳಲ್ಲಿ ದುಡಿಯುವ ಜನಸಂಖ್ಯೆಯ ಸಾಮಾಜಿಕ ಭದ್ರತೆಯ ಅಗತ್ಯಗಳನ್ನು ಪೂರೈಸುವ ನಿಟ್ಟಿನಲ್ಲಿ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯು ಒಂದು ಹೆಜ್ಜೆ ಗುರುತಾಗಿ ಮತ್ತು ಸಂಸ್ಥೆಯ ಉಪಸ್ಥಿತಿಯನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳ 27 ರಂದು ನಿಧಿ ಆಪ್, ನಿಕಟ್ 2.00 ಕಾರ್ಯಕ್ರಮವನ್ನು ಎಲ್ಲಾ ಗಳಲ್ಲಿ ಆಯೋಜಿಸಲಾಗುತ್ತಿದೆ.
ಇದು ಭವಿಷ್ಯ ನಿಧಿ ಸದಸ್ಯರ ಪಿಂಚಣಿದಾರರ ಮತ್ತು ಉದ್ಯೋಗದಾತರ ಕುಂದು ಕೊರತೆ ನಿವಾರಣಾ ವೇದಿಕೆಯಾಗಿ ಮತ್ತು ಮಾಹಿತಿ ವಿನಿಮಯ ಕಾರ್ಯಕ್ರಮವಾಗಿ ರೂಪುಗೊಂಡಿದ್ದು, ಸದಸ್ಯರು ಉದ್ಯೋಗದಾತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಿಕೆಯಿಂದ, ಹೆಚ್ಚಿನ ವ್ಯಾಪ್ತಿಯನ್ನು ಸುಲಭವಾಗಿ ತಲುಪಬಹುದಾಗಿದೆ.
ಮೇಲಿನ ಉದ್ದೇಶದಂತೆ ಶಿವಮೊಗ್ಗದ ಚೇಂಬರ್ ಆಫ್ ಕಾಮರ್ಸ್ ಮತ್ತು ದಾವಣಗೆರೆಯ BIET ಕಾಲೇಜು ಕ್ಯಾಂಪಸ್ ನಲ್ಲಿ ದಿನಾಂಕ 27-01-2023ರಂದು ಬೆಳಿಗ್ಗೆ 9:00ಯಿಂದ ನಿಧಿ ಆಪ್ಕೆ ನಿಕಟ್ 2.00 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಭವಿಷ್ಯ ನಿಧಿ ಸದಸ್ಯರು, ಪಿಂಚಣಿ ದಾರರು ಹಾಗೂ ಉದ್ಯೋಗದಾತರ ಗಳಿಗಾಗಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರು, ಪ್ರಾದೇಶಿಕ ಕಚೇರಿ ಶಿವಮೊಗ್ಗ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.