Monday, April 21, 2025
Monday, April 21, 2025

ಉದ್ಯಮಿಗಳು ವಾಚ್ ಪಾರ್ಕ್ ಸ್ಥಾಪಿಸಲು ಮುಂದೆ ಬಂದರೆ ಸರ್ಕಾರದ ಸಹಕಾರವಿದೆ-ಅಶ್ವತ್ಥನಾರಾಯಣ

Date:

ಬೆಂಗಳೂರು: ಗಡಿಯಾರ ಉದ್ಯಮಕ್ಕೆ ಸಂಬಂಧಿಸಿದವರು ವಾಚ್ ಪಾರ್ಕ್ ಸ್ಥಾಪಿಸಲು ಮುಂದೆ ಬಂದರೆ ಸರ್ಕಾರ ಎಲ್ಲಾ ಅಗತ್ಯ ಸಹಕಾರ ನೀಡಲು ಸಿದ್ಧವಿದೆ ಎಂದು ಐಟಿಬಿಟಿ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಅವರು ಹೇಳಿದರು.

‘ಇಂಡಿಯಾ ಇಂಟರ್ ನ್ಯಾಷನಲ್ ಅಂಡ್ ಕ್ಲಾಕ್ ಫೇರ್’ ವತಿಯಿಂದ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿರುವ ‘ಸಮಯ ಭಾರತಿ- 2023’ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ಸರ್ಕಾರ ಈಗ ನಿಯಮಗಳನ್ನು ಸುಲಭಗೊಳಿಸಿದೆ. ಆ ಪ್ರಕಾರ ಕೈಗಾರಿಕೆಗೆ ಸಂಬಂಧಿಸಿದವರು ತಮ್ಮದೇ ಆದ ಉದ್ಯಮ ಪಾರ್ಕ್ ಗಳನ್ನು ಸ್ಥಾಪಿಸಿ ತಾವೇ ನಿರ್ವಹಿಸಬಹುದು. ಇದಕ್ಕೆ ಬೇಕಾದ ಭೂಮಿ ಖರೀದಿ ಪ್ರಕ್ರಿಯೆಯನ್ನು ಈಗ ಸರಳಗೊಳಿಸಲಾಗಿದೆ ಎಂದು ಸಚಿವರು ವಿವರಿಸಿದರು.

ಕೈಗಾರಿಕಾ ವಾತಾವರಣವನ್ನು ಉತ್ತೇಜಿಸುವ ಸಲುವಾಗಿ ಸರ್ಕಾರ ಬಿಗಿ ನಿಯಮಗಳಿಗೆ ಬದಲಾಗಿ ಅನುಸರಿಸಲು ಸುಲಭವಾದ ನಿಯಮಾವಳಿಯನ್ನು ಜಾರಿಗೆ ತಂದಿದೆ. ಉದ್ಯಮಗಳು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ತನ್ನ ಮನಸ್ಸಿಗೆ ಒಪ್ಪುವಂತಹ ಗಡಿಯಾರ ಹಾಕಿಕೊಳ್ಳಬೇಕೆಂಬುದು ಪ್ರತಿಯೊಬ್ಬ ವ್ಯಕ್ತಿಯ ಬಯಕೆಯಾಗಿರುತ್ತದೆ. ಆದ್ದರಿಂದ, ಗಡಿಯಾರ ಉದ್ಯಮವು ಯಾವಾಗಲೂ ಬೇಡಿಕೆಯಲ್ಲಿರುವ ಉದ್ಯಮವಾಗಿರುತ್ತದೆ ಎಂದರು.

ಸರ್ಕಾರವು ಈಗ ವಿದ್ಯಾರ್ಥಿಗಳ ಕಲಿಕೆ ಹಾಗೂ ಅವರಿಗೆ ಕೌಶಲ ತರಬೇತಿ ಇವೆರಡಕ್ಕೂ ಒಟ್ಟೊಟ್ಟಿಗೆ ಒತ್ತು ಕೊಡುತ್ತಿದೆ. ಕಲಿಕೆಯ ಬೇರೆ, ಕೌಶಲವೇ ಬೇರೆ ಎಂಬ ಪರಿಸ್ಥಿತಿ ಈಗ ಇಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಕೌಶಲ್ಯವಿರುವ ವ್ಯಕ್ತಿಯನ್ನಾಗಿಸುವುದೇ ಸರ್ಕಾರದ ಗುರಿಯಾಗಿದೆ. ಹೀಗಾಗಿ ಗಡಿಯಾರ ಉದ್ಯಮಕ್ಕೆ ಅಗತ್ಯವಿರುವ ಕೌಶಲ್ಯಯುಕ್ತ ಮಾನವ ಸಂಪನ್ಮೂಲವನ್ನು ಸರ್ಕಾರ ಲಭ್ಯವಾಗಿಸಲಿದೆ ಎಂದು ಅಶ್ವಥ್ ನಾರಾಯಣ್ ಅವರು ಹೇಳಿದರು.

ಯುವಕರಿಗೆ ನಾನಾ ರೀತಿಯ ಕೌಶಲ ತರಬೇತಿಗಳನ್ನು ಸರ್ಕಾರ ಆದ್ಯತೆಯ ಮೇರೆಗೆ ಕೊಡುತ್ತಿದೆ. ಗಡಿಯಾರ ಉದ್ಯಮ ಸೇರಿದಂತೆ ಬೇಡಿಕೆಯಲ್ಲಿರುವ ಎಲ್ಲಾ ಉದ್ಯಮಗಳಿಗೂ ಮಾನವ ಸಂಪನ್ಮೂಲವನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಚಿವರು ಪ್ರದರ್ಶನಕ್ಕೆ ಇರಿಸಿರುವ ಅನೇಕ ಬಗೆಯ ಗಡಿಯಾರಗಳನ್ನು ನೋಡಿ ವಿನ್ಯಾಸಗಳ ಹೊಸತನದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಭಾಸ್ಕರ್ ಭಟ್ ಉದ್ಘಾಟಿಸಿದರು. ಗಡಿಯಾರ ಉದ್ಯಮದ ಹಿರಿಯರಾದ ಯಜ್ಞನಾರಾಯಣ, ಸಮಯ ಭಾರತಿ ಸಿಇಒ ಹೇಮಂತ್, ಟೈಟನ್ ಸಿಇಒ ಸುಪರ್ಣಾ, ದೀಪಕ್, ವಿನೋದ್ ಮತ್ತಿತರರು ಇದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...