ಶಿವಮೊಗ್ಗ: ತೀರ್ಥಹಳ್ಳಿ ತಾಲೂಕು ಗುಡ್ಡೇಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಕ್ಕಳ ವಾದ್ಯತಂಡ, ಚದ್ಮ ವೇಷ, ಪೂರ್ಣಕುಂಭ, ಕಂಸಾಳೆ ತಂಡಗಳೊಂದಿಗೆ ವಿದ್ಯಾರ್ಥಿಗಳು ಗ್ರಾಮದಲ್ಲಿ ಮೆರವಣಿಗೆ ತೆರಳಿದ್ದರು.
ಮೆರವಣಿಗೆಯಲ್ಲಿ ಭಾರತಾಂಬೆ, ಯಕ್ಷಗಾನ,ಶಿವ,ರೈತ,ನೆಹರು, ಝಾನ್ಸಿರಾಣಿ ಲಕ್ಷ್ಮೀಬಾಯಿ,ಕೊಡವ ಶೈಲಿಯ ವೇಷಭೂಷಣಗಳು ಗಮನಸೆಳೆದವು.
ವೇದಿಕೆ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯ್ತಿ ಅಧ್ಯಕ್ಷೆ ಸೂರ್ಯಕಲಾ ಅವರು ವಿಜ್ಞಾನ ವಿಸ್ಮಯ ಪ್ರಯೋಗದ ಮೂಲಕ ಉದ್ಘಾಟನೆ ನೆರವೇರಿಸಿದರು.
ಶಾಲಾ ಎಸ್.ಡಿ.ಎಂ.ಸಿ.ಅಧ್ಯಕ್ಷ ಸುರೇಶ್ ಅಧ್ಯಕ್ಷತೆ ವಹಿಸಿದ್ದರು.
ಸಮನ್ವಯಾಧಿಕಾರಿ ಗಣೇಶ್ ಸ್ವಾಗತಿಸಿದರು. ಭಾವಿಕ್ಕೆಸರು ಶಾಲೆ ಮುಖ್ಯಶಿಕ್ಷಕ ಸುರೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸಭೆಯಲ್ಲಿ ಗ್ರಾಮಪಂಚಾಯ್ತಿ ಸದಸ್ಯಗುರುಮೂರ್ತಿ ಗೌಡರು, ಶ್ರೀಮತಿ ಉಮಾ,ರಾಘವೇಂದ್ರಪವಾರ್,ತಾ.ಪಂ.,ಮಾಜಿಸದಸ್ಯ ಟಿ.ಮಂಜುನಾಥ್,ಶಿಕ್ಷಣ ಇಲಾಖೆ ಅಧಿಕಾರಿಗಳಾದ ಪ್ರವೀಣ್, ಗುಡ್ಡೇಕೊಪ್ಪ ಶಾಲಾ ಮುಖ್ಯೋಪಾದ್ಯಾಯರಾದ ಲಕ್ಷ್ಮಣ್ ಮುಂತಾದವರು ಹಾಜರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.