Wednesday, October 2, 2024
Wednesday, October 2, 2024

ಸಿರಿಧಾನ್ಯ ಸೇವಿಸಿ ಬುಲೆಟ್ ನಂತೆ ಶಕ್ತಿವಂತರಾಗಿ-ಸಚಿವ ಬಿ.ಸಿ.ಪಾಟೀಲ್

Date:

ಬೆಂಗಳೂರು: ಈಟ್ ಮಿಲೆಟ್ ಸೇವ್ ಲೈಫ್ ಪರ್ ಪ್ಲಾನೆಟ್ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲರು ಕರೆ ನೀಡುವ ಮೂಲಕ ಸಿರಿಧಾನ್ಯ ಬಳಕೆ ಉತ್ತಮ ಆರೋಗ್ಯ ಜೀವನಕ್ಕೆ ಆರೋಗ್ಯ ಜೀವನ ಶೈಲಿಗೆ ಭವಿಷ್ಯದ ಆಹಾರವೆಂದಿದ್ದಾರೆ.

ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ರಾಶಿಪೂಜೆ ಟೇಪ್‌ಕತ್ತರಿಸುವ ಮೂಲಕ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಪ್ರಮುಖ ಸಚಿವರೊಡನೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಬಳಿಕ ವೇದಿಕೆ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಕಾರ್ಯಕ್ರಮ ನಡೆಯುತ್ತಿದೆ. ದೀನದಲಿತರ ಬಡವರಪರ ಕಾಳಜಿಯುಳ್ಳ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಕೇಂದ್ರದ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ 3 ದಿನ ಸಿರಿಧಾನ್ಯ ಮೇಳ ಹಮ್ಮಿಕೊಂಡಿದೆ‌.

ಬಹಳ ಸಂತಸದಿಂದ‌ ಈ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳ ಉದ್ಘಾಟನೆಯಾಗಿದೆ.
ಕರ್ನಾಟಕ ಸರ್ಕಾರದ ಪ್ತಸ್ತಾವನೆಯ ಮೇರೆಗೆ ಕೇಂದ್ರ ಸರ್ಕಾರ ಅಂತರಾಷ್ಟ್ರೀಯ ಮಟ್ಟದಲ್ಲಿ ಸಿರಿಧಾನ್ಯ ಮೇಳ ಕರ್ನಾಟಕದಲ್ಲಿ ನಡೆಯಲು ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದಗಳನ್ನು ಬಿ.ಸಿ.ಪಾಟೀಲ್ ಅವರು ತಿಳಿಸಿದರು.

ಹಿಂದೆ ಸಿರಿಧಾನ್ಯವೆಂದರೆ ಬಡವರ ಆಹಾರವೆಂದಾಗಿತ್ತು.ಈಗ ಸಿರಿಧಾನ್ಯವೆನ್ನುವುದು ಸಿರಿವಂತರ ಆಹಾರವಾಗಿದೆ‌.ಇದಕ್ಕೆ ಜನರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿರುವುದು ಪ್ರಮುಖ ಕಾರಣವಾಗಿದೆ.

ಸಿರಿಧಾನ್ಯ ತಿಂದವರು ಬುಲೇಟ್‌ನಂತೆ ಶಕ್ತಿವಂತರಾಗುತ್ತಾರೆ. ಸಿರಿಧಾನ್ಯ ಪ್ರತಿ ಹೆಕ್ಟೇರ್‌ಗೆ 10 ಸಾವಿರ ಪ್ರೋತ್ಸಾಹ ಧನ ಸಿರಿಧಾನ್ಯ ರೈತರಿಗೆ ನೀಡಲಾಗುತ್ತಿದೆ.ಸಿರಿಧಾನ್ಯ ಬಳಕೆ ಹೆಚ್ಚುತ್ತಿದ್ದು ಒಂದು ಕಾಲದಲ್ಲಿ ಫುಡ್ ಸೆಕ್ಯೂರಿಟಿ ಬಗ್ಗೆ ಗಮನಕೊಡುತ್ತಿದ್ದೆವು.  ಈಗ ನ್ಯೂಟ್ರಿಷಿಯನ್ ಬಗ್ಗೆ ಹೆಚ್ಚು ಗಮನ ಹರಿಸಲಾಗುತ್ತಿದೆ. ಕೇಂದ್ರ ಸೇರಿದಂತೆ‌ ರಾಜ್ಯ ಸರ್ಕಾರ ಜನರ ಆರೋಗ್ಯದ ಬಗ್ಗೆ ಹೆಚ್ಚು‌ ಗಮನ ಹರಿಸುತ್ತಿವೆ. ಪ್ರಸಕ್ತ , 80 ಹೊಟೇಲ್‌ಗಳಲ್ಲಿ ಸಿರಿಧಾನ್ಯ ಪೂರೈಕೆ ಬೆಂಗಳೂರಿನಲ್ಲಿ ಆಗುತ್ತಿದೆ.ರೈತ ಮಕ್ಕಳ ರಿಸರ್ವೇಶನ್ ವಿಶ್ವ‌ವಿದ್ಯಾಲಯದಲ್ಲಿ ಏರಿಕೆಯಾಗಿದೆ.  ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಮೊದಲ ದಿನವೇ ರೈತ ವಿದ್ಯಾನಿಧಿ ಯೋಜನೆ ಜಾರಿಗೊಳಿಸಿ ಇಡೀ ದೇಶಕ್ಕೆ ಮಾದರಿ ಸಿಎಂ ಆಗಿದ್ದಾರೆ.ಈ ರೈತ ವಿದ್ಯಾನಿಧಿ ಯೋಜನೆ ರೈತಕಾರ್ಮಿಕ ಮಕ್ಕಳಿಗೂ ವಿಸ್ತರಿಸಲಾಗಿದೆ ಎಂದರು.

ಕೇಂದ್ರದ ಸಚಿವರಾದ ಕೈಲಾಸ್‌ನಾಥ್ ಚೌದರಿ, ಶೋಭಾ ಕರಂದ್ಲಾಜೆ, ಉತ್ತರ ಪ್ರದೇಶದ ಕೃಷಿ ಸಚಿವ ಸೂರ್ಯ ಪ್ರತಾಪ್ ರಾಜ್ಯದ ಸಚಿವ ಸಿ.ಎನ್.ಅಶ್ವತ್ಥನಾರಾಯಣ,‌ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ,ಅ.ದೇವೇಗೌಡ, ನಾರಾಯಣಸ್ವಾಮಿ ಹೆಬ್ಬಾಳ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಕೇಂದ್ರದ ಹಾಗೂ ರಾಜ್ಯದ ಪ್ರಮುಖ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ಕೃಷಿ ಇಲಾಖೆಯ ಅಪರ‌ಮುಖ್ಯ ಕಾರ್ಯದರ್ಶಿ ಶಿವಯೋಗಿ ಕಳಸದ ವೇದಿಕೆಗೆ ಗಣ್ಯರನ್ನು ಸ್ವಾಗತಿಸಿದರು.
ವೇದಿಕೆ ಕಾರ್ಯಕ್ರಮದಲ್ಲಿ ಸಿರಿಧಾನ್ಯದಿಂದ ತಯಾರಿಸಿದ ಉಡುಗೊರೆಯನ್ನು ಸಿಎಂ ಸೇರಿದಂತೆ ಗಣ್ಯರಿಗೆ ನೀಡಲಾಯಿತು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...