Tuesday, October 1, 2024
Tuesday, October 1, 2024

ಬಳ್ಳಾರಿ ಉತ್ಸವಕ್ಕೆ ಸಾಗಿ ಬಂದ ಬಣ್ಣಬಣ್ಣದ ಬಂಡಿ ಸಾಲು

Date:

ಬಳ್ಳಾರಿ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಉತ್ಸವದ ಅಂಗವಾಗಿ ಕೃಷಿ ಮಾರುಕಟ್ಟೆ ಆವರಣದಿಂದ ಮುನಿಸಿಪಲ್ ಮೈದಾನದವರೆಗೆ ಹಮ್ಮಿಕೊಳ್ಳಲಾಗಿತ್ತು. ನೂರಾರು ಅಲಂಕೃತ ಎತ್ತಿನ ಗಾಡಿಗಳ ಮೆರವಣಿಗೆಗೆ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರರೆಡ್ಡಿ ಅವರು ಚಾಲನೆ ನೀಡಿದರು.

ಎತ್ತಿನ ಬಂಡಿ ಉತ್ಸವದಲ್ಲಿ ಶ್ರೀಧರಗಡ್ಡೆ, ಲಕ್ಷ್ಮೀನಗರ ಕ್ಯಾಂಪ್, ಕೊಳಗಲ್, ಸಂಜೀವರಾಯನ ಕೋಟೆ, ಚೆರಕುಂಟೆ ಹಾಗೂ ನೆರೆಯ ಆಂಧ್ರಪ್ರದೇಶದ ನಾನಾ ಗ್ರಾಮಗಳ ಸೇರಿದಂತೆ ತಳಿರು ತೋರಣಗಳಿಂದ ಸಿಂಗಾರಗೊಂಡ 100 ಕ್ಕೂ ಅಧಿಕ ಎತ್ತಿನ ಬಂಡಿಗಳು ಉತ್ಸವದಲ್ಲಿ ಪಾಲ್ಗೊಂಡಿದ್ದವು.

ಸಿಂಗಾರದ ಎತ್ತಿನ ಬಂಡಿಗಳು: ಎತ್ತಿನ ಬಂಡಿಗಳಿಗೆ ನಾನಾ ಹೂ, ತಳಿರು ತೋರಣ, ರಾಷ್ಟ್ರೀಯ ಐಕ್ಯತೆ ಸಾರುವ ಹಾಗೂ ನಾಡಿನ ಮೆರಗನ್ನು ಸಾರುವ ಬಾವುಟ, ಅನೇಕ ಬಣ್ಣದ ಬಲೂನ್‍ಗಳ ಮೂಲಕ ಸಿಂಗಾರಗೊಳಿಸಲಾಗಿತ್ತು. ಇದಲ್ಲದೇ, ಸದೃಢ ಆರೋಗ್ಯಕ್ಕಾಗಿ ಸಿರಿಧಾನ್ಯದ ಅರಿವು ಮೂಡಿಸುವ ಹಾಗೂ ಕೃಷಿ ಇಲಾಖೆಯ ಮಾಹಿತಿಯುಳ್ಳ ಬ್ಯಾನರ್‍ಗಳನ್ನು ಬಂಡಿಗಳಿಗೆ ಹಾಕಲಾಗಿತ್ತು.

ಪ್ರತಿಯೊಂದು ಎತ್ತುಗಳ ದೇಹದ ಮೇಲೆ ನೀಲಿ ಮತ್ತು ಕೆಂಪು ಬಣ್ಣಗಳಿಂದ ನಾನಾ ಚಿತ್ರಗಳನ್ನು ಬಿಡಿಸಲಾಗಿತ್ತು. ಎತ್ತುಗಳ ಕೊರಳಲ್ಲಿ ಗೆಜ್ಜೆಯ ಸರ, ನಾನಾ ಬಣ್ಣದ ಹಣೆಯ ಮೇಲೆ ಗಂಡೇವು ಕಟ್ಟಲಾಗಿತ್ತು.

ಪ್ರತಿಯೊಬ್ಬ ರೈತರು ಎತ್ತಿನ ಬಂಡಿ ಓಡಿಸುವವರು ಹಸಿರುಪೇಟ ತೊಟ್ಟಿದ್ದು ವಿಶೇಷವಾಗಿತ್ತು.
*

ಗಮನಸೆಳೆದ ಮಾಹಿತಿ ಬ್ಯಾನರ್‍ಗಳು; ಎತ್ತಿನ ಬಂಡಿ ಉತ್ಸವದಲ್ಲಿ ಎತ್ತಿನ ಬಂಡಿಗಳಲ್ಲಿ ಸಾವಯವ ಕೃಷಿ ಪದ್ಧತಿಗಳ ಅರಿವು ಮೂಡಿಸುವ ಬ್ಯಾನರ್, ಸಿರಿಧಾನ್ಯ ಬಳಕೆಯ ಮಹತ್ವ ಕುರಿತ ಬ್ಯಾನರ್‍ಗಳು, ಮತದಾನದ ಜಾಗೃತಿ ಮೂಡಿಸುವ ಬ್ಯಾನರ್‍ಗಳು ಮತ್ತು ಸಿರಿಧಾನ್ಯ ಬಳಕೆಯ ಸ್ಲೋಗನ್‍ಗಳ ಬ್ಯಾನರ್‍ಗಳು ಆಳವಡಿಸಿದ್ದು ನೋಡುಗರನ್ನು ಗಮನ ಸೆಳೆದವು.

ಗಮನ ಸೆಳೆದ ಕಲಾ ತಂಡಗಳು:

ಎತ್ತಿನ ಬಂಡಿ ಉತ್ಸವದಲ್ಲಿ ಕಲಾ ತಂಡಗಳಾದ ಡೊಳ್ಳು ಬಾರಿಸುವಿಕೆ, ಕಹಳೆ ಉದುವಿಕೆ, ಹುಲಿಕುಣಿತ, ಎತ್ತರದ ಮಾನವನ ನಡಿಗೆ ಸೇರಿದಂತೆ ಹಲವು ಕಲಾ ತಂಡಗಳು ಭಾಗವಹಿಸಿ ಕಲೆ ಪ್ರದರ್ಶಿಸಿದರು. ಮೆರವಣಿಗೆಯ ರಸ್ತೆಯ ಉದ್ದಕ್ಕೂ ಸಾರ್ವಜನಿಕರು ಹಾಗೂ ವಾಹನ ಸವಾರರು ಮೊಬೈಲ್ ಹಿಡಿದು ವಿಡಿಯೋ ಮಾಡುವ ಮೂಲಕ ಸಂಭ್ರಮಿಸಿದರು.

ನಾನಾ ರೀತಿಯ ಎತ್ತುಗಳು ಕಂಡು ಕೆಲವರು ಕೇಕೆ ಹಾಕುತ್ತ ಬಂಡಿಯಿಂದ ಓಡುತ್ತಿದ್ದರು. ನಾ ಮುಂದು ತಾ ಮುಂದು ಎನ್ನುವಂತೆ ಎತ್ತಿನ ಬಂಡಿಗಳು ಓಡಿಸಿದರು.

ಉತ್ಸವದ ಚಾಲನೆಗೆ ಮುನ್ನ ಎಲ್ಲ ಅಧಿಕಾರಿಗಳು ರೈತರ ಹಸಿರು ಶಾಲಿನ ಪೇಟತೊಟ್ಟು ಮೆರವಣಿಗೆಯಲ್ಲಿ ಗಮನಸೆಳೆದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ, ಜಿ.ಪಂ ಸಿಇಒ ಜಿ.ಲಿಂಗಮೂರ್ತಿ, ಸಹಾಯಕ ಆಯುಕ್ತ ಹೇಮಂತ್ ಕುಮಾರ, ಎಡಿಸಿ ಪಿ.ಎಸ್. ಮಂಜುನಾಥ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆ.ಮಲ್ಲಿಕಾರ್ಜುನ, ಎಪಿಎಂಸಿ ಅಧ್ಯಕ್ಷ ಬಸವಲಿಂಗಪ್ಪ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.

ಈ ಮೆರವಣಿಗೆಯು ಕೃಷಿ ಮಾರುಕಟ್ಟೆಯಿಂದ ಆರಂಭವಾಗಿ ಮೋತಿ ವೃತ್ತ, ಎಸ್‍ಪಿ ಸರ್ಕಲ್ ಮಾರ್ಗವಾಗಿ ದುರುಗಮ್ಮ ದೇವಸ್ಥಾನದಿಂದ ಮುನಿಸಿಪಲ್ ಮೈದಾನದವರೆಗೆ ತಲುಪಿತು.

ಅತ್ಯುತ್ತಮವಾಗಿ ಸಿಂಗಾರಗೊಂಡ ಎತ್ತಿನ ಬಂಡಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತಿಯ ಬಹಮಾನ ನೀಡಲಾಯಿತು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...