Wednesday, October 2, 2024
Wednesday, October 2, 2024

ಕೆಂಪೇಗೌಡರದ್ದು ನಾಡ ಅಭಿವೃದ್ಧಿಗೆ ಅಪಾರ ಕೊಡುಗೆ-ಸಿ.ಟಿ.ರವಿ

Date:

ಚಿಕ್ಕಮಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ರಾಷ್ಟ್ರಕವಿ ಕುವೆಂಪು ಹಾಗೂ ಬೆಂಗಳೂರು ಅಭಿವೃದ್ದಿ ವಿಚಾರದಲ್ಲಿ ಕೆಂಪೇಗೌಡರು ಸಾರ್ವಜನಿಕವಾಗಿ ಸೇವೆ ಸಲ್ಲಿಸಿ ಅಪಾರವಾದ ಕೊಡುಗೆ ನೀಡಿ ದೇಶಾದ್ಯಂತ ಮನ್ನಣೆ ಗಳಿಸಿದ್ದು, ಅಂತಹ ಮಹಾನೀಯರನ್ನು ಪ್ರತಿನಿತ್ಯವು ನಾವುಗಳು ಸ್ಮರಿಸುವಂತಾಗಬೇಕು ಎಂದು ಶಾಸಕ ಸಿ.ಟಿ.ರವಿ ಅವರು ಹೇಳಿದರು.

ಚಿಕ್ಕಮಗಳೂರಿನ ಕೆ.ಎಸ್.ಆರ್.ಟಿ.ಸಿ. ಬಸ್‌ನಿಲ್ದಾಣದಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಒಕ್ಕಲಿಗರ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ದಿ ಜಿಲ್ಲಾ ಸಂಘದಿಂದ ಏರ್ಪಡಿಸಿದ್ದ ನಾಡಪ್ರಭು ಕೆಂಪೇಗೌಡರ 513ನೇ ಜನ್ಮದಿನಾಚರಣೆ ಹಾಗೂ ರಾಷ್ಟ್ರಕವಿ ಕುವೆಂಪು ಭಾವಚಿತ್ರ ಅನಾವರಣ ಕಾರ್ಯ ಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೆಂಪೇಗೌಡರು ನಾಡಿನ ಶ್ರೇಯೋಭಿವೃದ್ದಿಗಾಗಿ ಅಂದಿನ ಸಮಯದಲ್ಲೇ ದೂರದೃಷ್ಟಿಯನ್ನಿಟ್ಟು ಕೊಂಡು ಬೆಂದಕಾಳೂರಿಗೆ ನಗರ ಬೆಳವಣಿಗೆ ಹಾಗೂ ಸಾವಿರಾರು ಕೆರೆಗಳನ್ನು ಅಭಿವೃಧ್ದಿಪಡಿಸಿ ಶ್ರಮವಹಿಸಿದವರು. ತಮ್ಮ ಕುಲದೇವರ ಹೆಸರಿನಲ್ಲಿ ಕೆಂಪಾಬೂದಿ ಕೆರೆಯನ್ನು ನಿರ್ಮಿಸಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕುಡಿಯುವ ನೀರನ್ನು ಒದಗಿಸಲು ಕಾರ್ಯನಿರ್ವಹಿಸಿದ್ದರು ಎಂದರು.

ಕುವೆಂಪು ಅವರು ನಾಡಗೀತೆಯ ಮೂಲಕ ದೇಶ ಹಾಗೂ ನಾಡಿನ ನಡುವೆ ತಾಯಿ, ಮಗಳ ಸಂಬಂಧವನ್ನು ಸೂಚಿಸುವ ಆಶಯವನ್ನು ವ್ಯಕ್ತಪಡಿಸಿರುವುದಲ್ಲದೇ ಅಕ್ಕಪಕ್ಕದ ರಾಜ್ಯಗಳನ್ನು ಸಹೋದ ರತ್ವದಂತೆ ಬಿಂಬಿಸುವ ಮೂಲಕ ಸಂಬಂಧ ವನ್ನು ಗಟ್ಟಿಸುವಲ್ಲಿ ಮುಂದಾಗಿದ್ದರು ಎಂದು ತಿಳಿಸಿದರು.

ಅನೇಕ ಕ್ಷೇತ್ರದಲ್ಲಿ ಅನನ್ಯ ಸೇವೆ ಸಲ್ಲಿಸಿದ ಈ ಇಬ್ಬರು ಮಹಾನೀಯರು ಎಂದಿಗೂ ವೈಯಕ್ತಿಕ ಆದ್ಯತೆಗಿಂತ ಹೆಚ್ಚಾಗಿ, ಸಮಾಜದ ಬೆಳವಣಿಗೆಗೆ ಹೆಚ್ಚು ಆದ್ಯತೆ ನೀಡಿದವರು. ಇವರ ಆದರ್ಶ, ತತ್ವಗಳನ್ನು ಜೀವನದಲ್ಲಿ ಪ್ರತಿಯೊಬ್ಬರು ಮೈಗೂಡಿಸಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು ಎಂದರು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ ಕುವೆಂಪು ಹಾಗೂ ಕೆಂಪೇಗೌಡರು ನಾಡಿನ ಬೆಳವಣಿಗೆ ಯಲ್ಲಿ ಮೇಲು-ಕೀಳು ಎನ್ನದೇ ಎಲ್ಲಾ ಜಾತೀಯ ಉದ್ದಾರಕ್ಕಾಗಿ ದುಡಿದಂತಹ ಅವಿಸ್ಮರಣಿಯರು. ಕೆಂಪೇಗೌಡರ ಶ್ರಮವು ಬೆಂಗಳೂರು ಐಟಿಬಿಟಿಯಲ್ಲಿ ದೊಡ್ಡ ನಗರವಾದರೆ, ಕುವೆಂಪು ಅವರ ಸಾಹಿತ್ಯ ವಿಶ್ವಾದ್ಯಂತ ಮನ್ನಣೆ ಗಳಿಸಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಂ.ಪಿ.ಪ್ರಕಾಶ್ ಸಂಘದ ಚಾಲಕ ರು ಹಾಗೂ ಅಧಿಕಾರಿಗಳು ಸಹಭಾಗಿತ್ವದೊಂದಿಗೆ ಇಂದು ಕೆಂಪೇಗೌಡರ ಜಯಂತಿ ಹಾಗೂ ಕುವೆಂಪು ಭಾವಚಿತ್ರ ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮವು ಯಶಸ್ವಿಗೊಳಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಪ್ರಥಮ ಬಾರಿಗೆ ಜಿಲ್ಲಾ ಒಕ್ಕಲಿಗರ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘವನ್ನು ಅಸ್ಥಿತ್ವ ತರುವ ಮೂಲಕ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ನಂತರ ಏಕಲವ್ಯ ಪ್ರಶಸ್ತಿ ಪುರಸ್ಕೃತ ಹೆಚ್.ಎಸ್.ಸಾಕ್ಷತ್‌ಗೌಡ ಅವರಿಗೆ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್.ಬಸವರಾಜ್, ವಿಧಾನಸಭಾ ಮಾಜಿ ಸದಸ್ಯ ಐ.ಬಿ.ಶಂಕರ್, ಎಐಟಿ ಕಾಲೇಜು ಪ್ರಾಂಶುಪಾಲ ಡಾ. ಜಯದೇವ, ಒಕ್ಕಲಿಗರ ಸಂಘದ ಅಧ್ಯಕ್ಷ ಟಿ.ರಾಜಶೇಖರ್, ಉಪಾಧ್ಯಕ್ಷ ಎನ್. ಲಕ್ಷ್ಮಣೇಗೌಡ, ಗೌರವ ಕಾರ್ಯದರ್ಶಿ ಮಾಡ್ಲ ಪ್ರಕಾಶ್, ಜೆಡಿಎಸ್ ಮುಖಂಡ ಬಿ.ಎಂ.ತಿಮ್ಮಶೆಟ್ಟಿ, ಸಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಾಧಾಸುಂದ್ರೇಶ್ ಸಂಘದ ಉಪಾಧ್ಯಕ್ಷ ಜಗನ್ನಾಥ್ ಹಾಗೂ ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...