Saturday, September 28, 2024
Saturday, September 28, 2024

ಹಳೇ ಪಿಂಚಣಿ ವ್ಯವಸ್ಥೆಯನ್ನ ರಾಜ್ಯ ಸರ್ಕಾರ ಜಾರಿಗೊಳಿಸಲಿ – ಆಯನೂರು ಮಂಜುನಾಥ್

Date:

ಶಿವಮೊಗ್ಗ: ರಾಜ್ಯ ಸರ್ಕಾರದ ಮುಂದಿನ ಬಜೆಟ್ ಅಧಿವೇಶನದೊಳಗೆ ಎನ್‌ಪಿಎಸ್ ನೌಕರರ ಬೇಡಿಕೆ ಈಡೇರಿಸಿಕೊಳ್ಳುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಎನ್‌ಪಿಎಸ್ ಮುಖಂಡರ ಜತೆಯಲ್ಲಿ ವಿಶೇಷ ಸಭೆ ಆಯೋಜಿಸಲಾಗುತ್ತದೆ. ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಒತ್ತಡ ಹಾಕಲಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ಹೇಳಿದರು.

ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ ನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಘಟಕ, ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ಎನ್‌ಪಿಎಸ್ ನೌಕರರ ಸಮಾವೇಶ ಮತ್ತು ವೋಟ್ ಫಾರ್ ಒಪಿಎಸ್ ಅಭಿಯಾನ, ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು.

ನ್ಯಾಯಯುತ ಬೇಡಿಕೆ ಈಡೇರಿಕೆಗಾಗಿ ಹೋರಾಟ ನಡೆಸುವಾಗ ದಬ್ಬಾಳಿಕೆ ನಡೆಯುವುದು ಸಹಜ. ಆದರೆ ಯಾವುದೇ ಒತ್ತಡಕ್ಕೂ ಹೆದರದೇ ನಿರಂತರವಾಗಿ ಹೋರಾಟ ಮುಂದುವರೆಸೋಣ, ಎನ್‌ಪಿಎಸ್ ನೌಕರರ ಬೇಡಿಕೆ ಈಡೇರುವವರೆಗೂ ನಿಮ್ಮ ಹೋರಾಟಕ್ಕೆ ನಾನು ಸದಾ ಬೆಂಬಲ ನೀಡುತ್ತೇನೆ ಎಂದು ತಿಳಿಸಿದರು.

ಬೇಡಿಕೆಗಳ ಈಡೇರಿಕೆಗಾಗಿ ಯಾರೇ ಹೋರಾಟ ನಡೆಸಿದರೂ ಅವರಿಗೆ ಬೆಂಬಲ ನೀಡುವುದು ಸಜ್ಜನರ ಕರ್ತವ್ಯ. ಎನ್‌ಪಿಎಸ್ ನೌಕರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಿಕೊಂಡು ರಾಜ್ಯಮಟ್ಟದಲ್ಲಿ ಹೋರಾಟ ನಡೆಸುತ್ತಿದ್ದಾರೆ. ಅವರ ಬೆಂಬಲಕ್ಕೆ ಎಲ್ಲರೂ ನಿಲ್ಲಬೇಕು ಎಂದರು.

ರಾಜ್ಯದಲ್ಲಿ ರಾಜಕಾರಣಿಗಳಿಗೆ ಮಾತ್ರ ಒಪಿಎಸ್ ವ್ಯವಸ್ಥೆ ಇದ್ದು, ಸರ್ಕಾರಿ ನೌಕರರಿಗೆ ಎನ್‌ಪಿಎಸ್ ಜಾರಿಗೊಳಿಸಿರುವುದು ಯಾವ ನ್ಯಾಯ. ಒಂದು ವೇಳೆ ಎನ್‌ಪಿಎಸ್ ಉತ್ತಮ ವ್ಯವಸ್ಥೆ ಆಗಿದ್ದರೆ ರಾಜಕಾರಣಿಗಳಿಗೂ ಎನ್‌ಪಿಎಸ್ ಅನ್ವಯ ಮಾಡಲಿ. ರಾಜ್ಯ ಸರ್ಕಾರ ಎನ್‌ಪಿಎಸ್ ನಿಂದ ಆಗುತ್ತಿರುವ ಸಮಸ್ಯೆಗಳನ್ನು ಗಮನಿಸಿ ಹಳೇ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಾಂತಾರಾಮ್ ಮಾತನಾಡಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ವೋಟ್ ಫಾರ್ ಒಪಿಎಸ್ ಎಂಬ ಅಭಿಯಾನದ ಮುಖಾಂತರ ಸರ್ಕಾರಕ್ಕೆ ಒತ್ತಡ ಹಾಕಲಾಗುವುದು ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ಕೆ.ಎನ್.ಮಾತನಾಡಿ, ಒಪಿಎಸ್ ಯೋಜನೆ ಜಾರಿ ಹೋರಾಟ ಬದುಕಿನ ಹೋರಾಟ ಆಗಿದೆ. ಎನ್‌ಪಿಎಸ್ ನಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಅನುಭವಿಸಿದವರಿಗೆ ಗೊತ್ತಿದೆ. ರಾಜ್ಯ ಸರ್ಕಾರ ಕೂಡ ಎನ್‌ಪಿಎಸ್ ನೌಕರರ ಸಮಸ್ಯೆಗಳನ್ನು ಅರಿತುಕೊಂಡು ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹಿಸಿ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸಿ ಸಮಾವೇಶ ನಡೆಯುವ ಫ್ರೀಡಂ ಪಾರ್ಕ್ ಸಭಾಂಗಣಕ್ಕೆ ಎಲ್ಲ ಎನ್‌ಪಿಎಸ್ ನೌಕರರು ಆಗಮಿಸಿದರು.

ಎಲ್ಲರಿಗೂ ಮಧ್ಯಾಹ್ನ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಮಜ್ಜಿಗೆ ವಿತರಿಸಲಾಯಿತು.

3 ಸಾವಿರಕ್ಕೂ ಅಧಿಕ ಎನ್‌ಪಿಎಸ್‌ ನೌಕರರು ಪಾಲ್ಗೊಂಡಿದ್ದರು.

ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪರ‍್ಯಾನಾಯ್ಕ, ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ನಾಗನಗೌಡ, ಹಿರಿಯ ಉಪಾಧ್ಯಕ್ಷ ಸಿದ್ದಪ್ಪ ಸಂಗಣ್ಣ, ಚಂದ್ರಕಾಂತ್, ತಾಲೂಕು ಅಧ್ಯಕ್ಷ ಪ್ರಭಾಕರ್‌, ಪ್ರಮುಖರಾದ ಗುರುಸ್ವಾಮಿ, ಮಹಾಬಲೇಶ್ವರ ಹೆಗಡೆ, ಡಾ. ನಾಗರಾಜ್‌ ಪರಿಸರ , ರಾಧಾ, ಕೇಶವಪ್ರಸಾದ್, ರವಿ, ವಿವಿಧ ಜಿಲ್ಲೆಗಳ ಅಧ್ಯಕ್ಷರು, ತಾಲೂಕುಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...