Sunday, June 22, 2025
Sunday, June 22, 2025

ರಕ್ತದಾನದಿಂದ ದೇಹ ಸದೃಢವಾಗಿರುತ್ತದೆ- ಜಿ.ವಿಜಯ್ ಕುಮಾರ್

Date:

ಶಿವಮೊಗ್ಗ: ದೇಶಕ್ಕಾಗಿ ಪ್ರಾಣತೆತ್ತು ಹುತಾತ್ಮರಾದ, ಮಹನೀಯರ ಜನ್ಮ ದಿನವನ್ನು ಸಮಾಜಮುಖಿ ಸೇವೆಗಳ ಮುಖಾಂತರ ಆಚರಿಸಬೇಕು.

ರಕ್ತದಾನದಂತಹ ಸೇವಾ ಕಾರ್ಯಗಳನ್ನು ನಡೆಸಬೇಕು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಅವರು ಹೇಳಿದರು.

ಶಿವಮೊಗ್ಗದ ಜೆಪಿಎನ್‌ ರಸ್ತೆಯಲ್ಲಿರುವ ರೆಡ್‌ಕ್ರಾಸ್ ಸಂಜೀವಿನಿ ರಕ್ತನಿಧಿಯಲ್ಲಿ ಭಾವಸಾರ ವಿಜನ್‌ ಇಂಡಿಯಾ ಪ್ರೇರಣಾ ಸಂಸ್ಥೆ ವತಿಯಿಂದ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್‌ಚಂದ್ರ ಬೋಸ್‌ ಜನ್ಮದಿನ ಪ್ರಯುಕ್ತ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ರಕ್ತದಾನ ಮಾಡುವುದರಿಂದ ದೇಹ ಸದೃಢವಾಗುವ ಜೊತೆಗೆ ಸದಾ ಲವಲವಿಕೆಯಿಂದ ಇರಲು ಸಾಧ್ಯವಾಗುತ್ತದೆ.
ವಿಶ್ವಸಂಸ್ಥೆ ವರದಿ ಪ್ರಕಾರರಕ್ತದಾನದಿಂದ ಶೇ.80ರಷ್ಟು ಹೃದಯಾಘಾತ ಕಡಿಮೆ ಆಗುತ್ತದೆ ಎಂದು ತಿಳಿಸಿದರು.

ಭಾವಸಾರ ವಿಜನ್‌ಇಂಡಿಯಾ ಪ್ರೇರಣ ಸಂಸ್ಥೆಯು ಕೊರೋನಾ ಸಂದರ್ಭದಲ್ಲಿಯು ಉತ್ತಮ ಸೇವಾ ಕಾರ್ಯಗಳನ್ನು ನಡೆಸಿತ್ತು.

ಕಷ್ಟದಲ್ಲಿರುವ ಜನರಿಗೆ ನೆರವು ನೀಡಿತ್ತು. ಮುಂದಿನ ದಿನಗಳಲ್ಲಿಯು ಸಂಸ್ಥೆಯು ಸಮಾಜಮುಖಿ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಹೋಗಲಿ ಎಂದು ಆಶಿಸಿದರು.

ಭಾವಸಾರ ವಿಜನ್‌ ಇಂಡಿಯಾ ಪ್ರೇರಣಾ ಸಂಸ್ಥೆ ಅಧ್ಯಕ್ಷ ಮಿಥುನ ಉತ್ತರಕರ್ ಮಾತನಾಡಿ, ನಮ್ಮ ಸಂಸ್ಥೆ ವತಿಯಿಂದ ಪ್ರತಿ ವರ್ಷ 2 ಬಾರಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗುತ್ತದೆ.

ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲಾಗುತ್ತದೆ.ಗ್ರಾಮಾಂತರ ಪ್ರದೇಶದಲ್ಲಿಆರೋಗ್ಯಜಾಗೃತಿ ಶಿಬಿರಗಳನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕಾರ್ಯದರ್ಶಿ ಯಶವಂತ್‌ ಅಂಬೋರೆ, ಚಾರ್ಟರ್ ಪ್ರೆಸಿಡೆಂಟ್ ವೆಂಕಟೇಶ, ಪ್ರದೀಪ್‌ಉತ್ತರಕರ್, ಸಾವನ್ ರಂಗದೊಳ್, ಪ್ರಶಾಂತ್ ಕೊಳೇಕರ್, ಮಂಜುನಾಥ್ ಮಾಲತ್ಕರ್ ಮತ್ತು ಸಂಸ್ಥೆಯ ನಿರ್ದೇಶಕರುಗಳು ರಕ್ತದಾನ ಮಾಡಿದರು.ಡಾ. ಪ್ರೀತಿ, 110 ಬಾರಿ ರಕ್ತದಾನ ಮಾಡಿರುವ ಧರಣೇಂದ್ರ ದಿನಕರ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ಸಮುದಾಯಗಳ ಸಾಮಾಜಿಕ,ಆರ್ಥಿಕ,ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆ ನಡೆಸುವ ಉದ್ದೇಶವಿದೆ – ಮಧು ಬಂಗಾರಪ್ಪ

Madhu Bangarappa ರಾಜ್ಯದಲ್ಲಿನ ವಿವಿಧ ಜಾತಿ ಜನಾಂಗಗಳ, ಅದರಲ್ಲೂ ಮುಖ್ಯವಾಗಿ ಹಿಂದುಳಿದ...

DK Shivakumar ಎತ್ತಿನಹೊಳೆ ಯೋಜನೆ ಕಾಮಗಾರಿ‌ ಪರಿಶೀಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

DK Shivakumar ಎತ್ತಿನ ಹೊಳೆ ಯೋಜನೆಯ ಮೂಲಕ ಕುಡಿಯುವ ನೀರನ್ನು ಬರಪೀಡಿತ...

Royal English Medium School ರಾಯಲ್ ಡೈಮಂಡ್ ಶಾಲೆಯಲ್ಲಿ‌ ನಿತ್ಯ ಯೋಗ ಮಾಡುವ ಸಂಕಲ್ಪ ಸ್ವೀಕಾರ

Royal English Medium School ಶಿವಮೊಗ್ಗ ನಗರದ ಹೆಸರಾಂತ ವಿದ್ಯಾಸಂಸ್ಥೆಯಲ್ಲಿ ಒಂದಾದ...