Friday, March 27, 2026
Friday, March 27, 2026

ವಿಮರ್ಶಕ ಪ್ರೊ.ರಾಜೇಂದ್ರ ಚೆನ್ನಿ ಹಾಗೂ ಡಾ. ಜಿನದತ್ತ ದೇಸಾಯಿ ಅವರಿಗೆ ಪ್ರತಿಷ್ಠಿತ ಡಾ.ದ.ರಾ.ಬೇಂದ್ರೆ ಪುರಸ್ಕಾರ

Date:

ವರಕವಿ ಡಾ.ದ.ರಾ.ಬೇಂದ್ರೆ ಅವರ 127ನೇ ಜನ್ಮದಿನಾಚರಣೆ ನಿಮಿತ್ತ ಡಾ.ದ.ರಾ.ಬೇಂದ್ರೆ ರಾಷ್ಟೀಯ ಸ್ಮಾರಕ ಟ್ರಸ್ಟ್ ವತಿಯಿಂದ 2023ನೇ ಸಾಲಿನ ಅಂಬಿಕಾತನಯದತ್ತ ರಾಷ್ಟೀಯ ಪ್ರಶಸ್ತಿಗೆ ಈ ಬಾರಿ ಇಬ್ಬರು ಭಾಜನರಾಗಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಡಾ.ಡಿ.ಎಂ.ಹಿರೇಮಠ ಅವರು ತಿಳಿಸಿದ್ದಾರೆ.

ಧಾರವಾಡದ ಬೇಂದ್ರೆ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬಿಕಾತನಯದತ್ತ ರಾಷ್ಟೀಯ ಪ್ರಶಸ್ತಿಗೆ ವಿಮರ್ಶಕ, ಚಿಂತಕರಾದ ಡಾ.ರಾಜೇಂದ್ರ ಚೆನ್ನಿ ಹಾಗೂ ಧಾರವಾಡ ತಾಲೂಕಿನ ಅಮ್ಮಿನಭಾವಿ ಗ್ರಾಮದ ಡಾ.ಜಿನದತ್ತ ದೇಸಾಯಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಯು ಒಂದು ಲಕ್ಷ ನಗದು, ಸ್ಮರಣಿಕೆ ಫಲಕ ಒಳಗೊಂಡಿದೆ. ಈ ಪ್ರಶಸ್ತಿಯನ್ನು ಪ್ರತ್ಯೇಕ ತಲಾ 50 ಸಾವಿರದಂತೆ ಹಂಚಿಕೆ ಮಾಡಲಾಗಿದೆ. ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ಜ.31 ರಂದು ಸಂಜೆ 4:30 ಗಂಟೆಗೆ ಧಾರವಾಡದ ಸಾಧನಕೇರಿಯ ಡಾ.ದ.ರಾ.ಬೇಂದ್ರೆ ಭವನದಲ್ಲಿ ನೆರವೇರಲಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಮುಖ್ಯಅತಿಥಿಗಳಾಗಿ ಬೆಳಗಾವಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಶಾಸಕ ಅರವಿಂದ ಬೆಲ್ಲದ, ಆಗಮಿಸಲಿದ್ದಾರೆ.

ವಿಧಾನ ಪರಿಷತ ಸದಸ್ಯ ಎಚ್.ವಿಶ್ವನಾಥ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು,ಪ್ರಶಸ್ತಿ ಪುರಸ್ಕೃತರಾದ. ಡಾ.ರಾಜೇಂದ್ರ ಚೆನ್ನಿ ಅವರ ಕುರಿತು ಕುಮಟಾದ ಡಾ.ಎಂ‌‌.ಜಿ.ಹೆಗಡೆ ಹಾಗೂ ಡಾ.ಜಿನದತ್ತ ದೇಸಾಯಿ ಅವರ ಕುರಿತು ಡಾ.ಶಾಂತಾ ಇಮ್ರಾಪೂರ ಹಾಗೂ ಅಭಿನಂದನಾ ನುಡಿಗಳನ್ನಾಡಲಿದ್ದಾರೆ.

ಇದೇ ಸಂದರ್ಭದಲ್ಲಿ ಶಿರಸಿಯ ಪ್ರೊ.ಎಚ್.ಆರ್. ಅಮರನಾಥ ಸಂಪಾದಕತ್ವದ ಪ್ರೊ.ಬೇಂದ್ರೆ ಮಾಸ್ತರರ ಅಮರವಾಣಿ ಕೈಪಿಡಿ ಬಿಡುಗಡೆಗೊಳ್ಳಲಿದೆ ಎಂದು ತಿಳಿಸಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...