Sunday, December 14, 2025
Sunday, December 14, 2025

ಶಿವಮೊಗ್ಗದಲ್ಲಿ ಪೌರಾಡಳಿತ ಇಲಾಖೆಯಿಂದ ಕ್ರೀಡಾ ಪಂದ್ಯಾವಳಿ

Date:

ಪೌರಾಡಳಿತ ನಿರ್ದೇಶನಾಲಯದ ವತಿಯಿಂದ ಜ.20 ರಿಂದ ಮಾ.31 ರವರೆಗೆ ಮುನ್ಸಿಪಲ್ ಪ್ರೀಮಿಯರ್ ಲೀಗ್-2023 ಅನ್ನು ಆಯೋಜಿಸಲಾಗಿದೆ.
ಸ್ವಾವಲಂಬನೆ, ಸುಸ್ಥಿರ ಸರ್ವತೋಮುಖ ಅಭಿವೃದ್ದಿಯ ಉದ್ದೇಶದಿಂದ ಈ ಲೀಗ್‍ನ್ನು ಆಯೋಜಿಸಿದ್ದು, ಕಂದಾಯ ಶಾಖೆ ಮತ್ತು ಆರೋಗ್ಯ ಶಾಖೆ(ಸ್ವಚ್ಚ ಭಾರತ ಮಿಷನ್) ಯಡಿ ಸ್ಥಳೀಯ ಸಂಸ್ಥೆಗಳ ಮಟ್ಟ ಹಾಗೂ ವಿಭಾಗ ಮಟ್ಟದಲ್ಲಿ ಅತ್ಯುತ್ತಮ ಬಿಲ್ ಕಲೆಕ್ಟರ್, ಕಂದಾಯ ನಿರೀಕ್ಷಕರು, ಕಂದಾಯ ಅಧಿಕಾರಿ, ಅತ್ಯುತ್ತಮ ಕಿರಿಯ ಆರೋಗ್ಯ ನಿರೀಕ್ಷಕರು, ಪರಿಸರ ಅಭಿಯಂತರರು, ಎಇಇ(ಪರಿಸರ), 14ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕೈಗೊಂಡ ಎಲ್ಲಾ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವ ಅಭಿಯಂತರರಿಗೆ ಅತ್ಯುತ್ತಮ ಜೆಇ, ಎಇ, ಎಇಇ, ಇಇ ಪ್ರಶಸ್ತಿಗಳನ್ನು ನೀಡಲಾಗುವುದು.
ಈ ಪ್ರೀಮಿಯರ್ ಲೀಗ್‍ನಲ್ಲಿ ಮೊದಲನೇ ಬಹುಮಾನವಾಗಿ ಎಕ್ಸಲೆನ್ಸ್ ಅವಾರ್ಡ್, ಎರಡನೇ ಬಹುಮಾನ ಸ್ಟ್ಯಾಂಡ್ ಔಟ್ ಪರ್ಫಾರ್ಮರ್, ಮೂರನೇ ಬಹುಮಾನ ರೈಸಿಂಗ್ ಸ್ಟಾರ್ ಅವಾರ್ಡ್, ಕಂದಾಯ ಮತ್ತು ಆರೋಗ್ಯ ಶಾಖೆಯ ಸ್ಪರ್ಧೆಯಲ್ಲಿ ಪಡೆದಿರುವ ಶ್ರೇಯಾಂಕ ಹಾಗೂ 14ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕೈಗೊಂಡ ಎಲ್ಲಾ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ರೋಲಿಂಗ್ ಟ್ರೋಫಿ, ಕಂದಾಯ ಹಾಗೂ ಆರೋಗ್ಯ ಶಾಖೆಯ ಎರಡು ಸ್ಪರ್ಧೆಗಳಲ್ಲಿ ವಿಜೇತರಾಗುವ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಲೀಡರ್‍ಶಿಪ್ ಅವಾರ್ಡ್ ಹಾಗೂ ಅತಿ ಹೆಚ್ಚು ಪ್ರತಿ ಶತ ಪ್ರಶಸ್ತಿ ಪಡೆದ ನಗರ ಸ್ಥಳೀಯ ಸಂಸ್ಥೆಗಳ ಜಿಲ್ಲೆಯ ಯೋಜನಾ ನಿರ್ದೇಶಕರುಗಳಿಗೆ ಅಪರ ಮುಖ್ಯ ಕಾರ್ಯದರ್ಶಿಗಲ ಮಾವೆರಿಕ್ ಅವಾರ್ಡ್ ನೀಡಲಾಗುವುದು. ಸ್ಥಳೀಯ ಸಂಸ್ಥೆವಾರು ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನೊಳಗೊಂಡು ವಿವಿಧ ಕ್ರೀಡಾ ಪಂದ್ಯಾವಳಿಗಳನ್ನು ನಡೆಸಿ, ಜಿಲ್ಲಾ ಮಟ್ಟದಲ್ಲಿ ವಿಜೇತರಾಗುವ ತಂಡಗಳಿಗೆ ಜಿಲ್ಲಾ ಹಂತದಲ್ಲಿಯೇ ಪೌರಾಡಳಿತ ಸಚಿವರ ಪೌರಸ್ಟಾರ್ ಅವಾರ್ಡ್ ಹಾಗೂ ಅತೀ ಹೆಚ್ಚು ಪ್ರತಿಶತ ಪ್ರಶಸ್ತಿ ಪಡೆದ ನಗರ ಸ್ಥಳೀಯ ಸಂಸ್ಥೆಗಳ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಮಾನ್ಯ ಮುಖ್ಯಮಂತ್ರಿಗಳ ಪಿನಾಕಲ್ ಪರ್ಫಾರ್ಮರ್ ಅವಾರ್ಡ್ ನೀಡಲಾಗುವುದು.

ಪ್ರೀಮಿಯರ್ ಲೀಗ್ 2023 ಕುರಿತಾದ ಕಾರ್ಯವಿಧಾನ ಹಾಗೂ ಹೆಚ್ಚಿನ ಹೆಚ್ಚಿನ ಮಾಹಿತಿಗಾಗಿ http://www.municipaladmn.gov.in/ ವಿಳಾಸಕ್ಕೆ ಸಂಪರ್ಕಿಸಬಹುದು.

ರಾಮನಗರ ಜಿಲ್ಲಾ ಮುಖ್ಯರಸ್ತೆ ಸರಪಳಿ ಕಿ.ಮೀ.1.35 ರಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ ದಿನಾಂಕ: 20-01-2023 ರಿಂದ 30-06-2023 ರವರೆಗೆ ತಾತ್ಕಾಲಿಕವಾಗಿ ಪರ್ಯಾಯ ಮಾರ್ಗವಾದ ಪಕ್ಕದಲ್ಲಿರುವ ಇತ್ತೀಚೆಗೆ ಹೊಸದಾಗಿ ನಿರ್ಮಿಸಲಾಗಿರುವ ಸೇತುವೆಯ ಮೇಲೆ ಮಾತ್ರ ಕೇಂದ್ರ ಮೋಟಾರು ವಾಹನಗಳ ಕಾಯ್ದೆ 1988 ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221(ಎ)(2) ಮತ್ತು (5) ರನ್ವಯ ವಾಹನಗಳನ್ನು ಸಂಚರಿಸಲು ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಆದೇಶಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...