Saturday, September 28, 2024
Saturday, September 28, 2024

ಹೆಚ್ಚುತ್ತಿರುವ ಹಿಂಸಾ ಪ್ರವೃತ್ತಿ ತಡೆಗೆ ಶಿಕ್ಷಣವೇ ಪರಿಹಾರ- ಪ್ರೊ.ವೀರಭದ್ರಪ್ಪ

Date:

ದೇಶದಲ್ಲಿ ಹೆಚ್ಚುತ್ತಿರುವ ಹಿಂಸಾಪ್ರವೃತ್ತಿಗಳನ್ನು ನಿಯಂತ್ರಿಸಲು ಎಲ್ಲರಿಗೂ ಉನ್ನತ ಶಿಕ್ಷಣ ನೀಡುವುದೇ ಪರಿಹಾರ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿವಿಯ ಪರೀಕ್ಷಾಂಗ ಭವನದ ಮುಂಭಾಗದಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ ಭಾಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ದೇಶಾದ್ಯಂತ ದಲಿತರು, ಅಲ್ಪಸಂಖ್ಯಾತರು ಮತ್ತು ಮಹಿಳೆಯರ ಮೇಲೆ ವಿವಿಧ ರೀತಿಯ ದೌರ್ಜನ್ಯ, ದೈಹಿಕ ಪೀಡನೆಗಳನ್ನು ನಡೆಸುತ್ತಿರುವ ಅಹಿತಕರ ಘಟನೆಗಳ ವರದಿಗಳು ಹೆಚ್ಚಳವಾಗುತ್ತಿವೆ. ಇಂತಹ ಪ್ರವೃತ್ತಿಗಳನ್ನು ಕಡಿತಗೊಳಿಸಲು ಸಮಾಜದೊಳಗೆ ಉನ್ನತ ಶಿಕ್ಷಣವನ್ನು ಹೆಚ್ಚಿಸುವುದೇ ಪರಿಹಾರೋಪಾಯ ಎಂದರು.

ಕಸ್ತೂರಿ ರಂಗನ್ ವರದಿಯ ಪ್ರಕಾರ ದೇಶದ ಉನ್ನತ ಶಿಕ್ಷಣ ಪ್ರವೇಶಾತಿಯು ಶೇ. 26 ಇದೆ. ಇದನ್ನು ಶೇ. 50ಕ್ಕಿಂತ ಅಧಿಕಗೊಳಿಸಲು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ಪ್ರಯತ್ನಿಸಲಿದೆ. ವಿದ್ಯಾರ್ಥಿಗಳು ಮತ್ತು ಯುವಜನಾಂಗವು ಹೆಚ್ಚು ಹೆಚ್ಚು ಉನ್ನತ ಶಿಕ್ಷಣ ಪಡೆದಲ್ಲಿ ಸಾಮಾಜಿಕ ಅಗತ್ಯಗಳು, ಉನ್ನತಿ, ಸಮಸ್ಯೆಗಳ ಕುರಿತು ಚಿಂತನಕ್ರಮ ರೂಢಿಸಿಕೊಂಡು ಪರಿಹಾರೋಪಾಯಗಳನ್ನು ಕಂಡುಹಿಡಿಯುವುದು ಸಾಧ್ಯವಿದೆ. ಶಿಕ್ಷಣಕ್ಕೆ ಜ್ಞಾನ, ಪ್ರೀತಿ, ಭ್ರಾತೃತ್ವ, ಮಾನವೀಯತೆ, ಸಹಬಾಳ್ವೆಗಳನ್ನು ಕಲಿಸುವ ಶಕ್ತಿಯಿದೆ. ಈ ನಿಟ್ಟಿನಲ್ಲಿ ಡಾ. ಅಂಬೇಡ್ಕರ್ ಅವರ ವ್ಯಾಪಕ ಓದು, ಶಿಕ್ಷಣಗಳು ಭಾರತಕ್ಕೆ ಬಲಿಷ್ಠವಾದ ಸಂವಿಧಾನ ನೀಡಿತು.

ಅಂತಯೇ ಇಂದಿನ ಯುವಸಮೂಹ ಉನ್ನತ ಶಿಕ್ಷಣದ ಜೊತೆಗೆ ಸಾಹಿತ್ಯ ಓದು, ವೃತ್ತಿಪರ ಕೌಶಲ್ಯಗಳ ಕಲಿಕೆ, ಮೂಲಭೂತ ಕರ್ತವ್ಯಗಳ ಅರಿವಿನೊಂದಿಗೆ ತಮ್ಮತಮ್ಮ ಕ್ಷೇತ್ರದಲ್ಲಿ ಸಂವೇದನಾಶೀಲವಾಗಿ ಕಾರ್ಯನಿರ್ವಹಿಸಬೇಕು. ಇದು ಅಹಿಂಸಾ ಪ್ರವೃತ್ತಿ ಹೆಚ್ಚಿಸುತ್ತದೆ ಮತ್ತು ಮಾನವ ಅಭ್ಯುದಯಕ್ಕೆ ದುಡಿದಂತೆ ಆಗುತ್ತದೆ. ಇದುವೇ ಲಕ್ಷಾಂತರ ಹೋರಾಟಗಾರರು ಅಹಿಂಸಾ ಮಾರ್ಗದ ಮೂಲಕ ಪಡೆದ ಸ್ವಾತಂತ್ರವನ್ನು ಗೌರವಿಸುವ ಪರಿಯಾಗಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿವಿಯ ಪರೀಕ್ಷಾಂಗ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್. ಕೆ., ದೈಹಿಕ ಶಿಕ್ಷಣ ವಿಭಾಗದ ಡಾ. ಎನ್. ಡಿ. ವಿರೂಪಾಕ್ಷ ಮತ್ತು ವಿಭಾಗದ ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿ, ಸಂಶೋಧನಾರ್ಥಿಗಳು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Adhichunchanagiri Mahasamsthana Math ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನವರಾತ್ರಿ ಸಂಭ್ರಮ

Sri Adhichunchanagiri Mahasamsthana Math ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ...

Department of Fisheries ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಅರ್ಜಿ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು 2022-23 ರಿಂದ 2024-25 ನೇ...

National Open Athletic Championship ಬಿಹಾರದ ಓಪನ್ ಅಥ್ಲೇಟಿಕ್‌ನಲ್ಲಿ ಶಿವಮೊಗ್ಗ ಜಿಲ್ಲೆಯ ಕ್ರೀಡಾಪಟು

National Open Athletic Championship ಬಿಹಾರದ ಪಾಟ್ನದಲ್ಲಿ ಸೆ. 28 ರಿಂದ...

Bhadravati Police ಅನಾಮಧೇಯ ಗಂಡಸ್ಸಿನ ಶವ ಪತ್ತೆ

Bhadravati Police ಭದ್ರಾವತಿ ಶಿವಪುರ ಗ್ರಾಮದಲ್ಲಿ ಭದ್ರಾ ಬಲದಂಡೆ ನಾಲೆಯಲ್ಲಿ ಸುಮಾರು...