ಈ ಭಾರಿಯ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸಂಘಟನೆಯಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿರುವ ನಯನ ಮೋಟಮ್ಮ ಅವರಿಗೆ ಟಿಕೇಟ್ ನೀಡಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯಾತಾ ಚಾಲನಾ ಸಮಿತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದ ಸಂಬಂಧ ಜಿಲ್ಲೆಗೆ ಆಗಮಿಸಿ ಕೆಪಿಸಿಸಿ ಅಧ್ಯಕ್ಷರಿಗೆ ಸಮಿತಿಯ ಪದಾಧಿಕಾರಿಗಳು ಮನವಿ ಸಲ್ಲಿಸಿ ಮೂಡಿಗೆರೆ ಕ್ಷೇತ್ರದಲ್ಲಿ ನಿರಂತರವಾಗಿ ಹಳ್ಳಿಗಳಿಗೆ ತೆರಳಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬೆನ್ನುಲುಬಾಗಿ ನಿಂತು ಪಕ್ಷ ಸಂಘಟಿಸುತ್ತಿರುವ ನಯನ ಅವರಿಗೆ ಟಿಕೇಟ್ ಘೋಷಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೂಡಿಗೆರೆಯ ದಲಿತ ಕೇರಿಗಳಲ್ಲಿ ರಂಗೋಲಿ ಸ್ಪರ್ಧೆ ಏರ್ಪಡಿಸಿ ಬಹುಮಾನ ವಿತರಣೆಯ ದೊಡ್ಡ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಿ ಜನತೆಯ ವಿಶ್ವಾಸವನ್ನು ಪಡೆದುಕೊಂಡು ಸ್ಪಂದಿಸುವ ಕಾರ್ಯ ದಲ್ಲಿ ತೊಡಗಿರುವ ನಯನ ಮೋಟಮ್ಮ ಅವರಿಗೆ ಈ ಬಾರಿ ಅವಕಾಶ ಕಲ್ಪಿಸಿಕೊಡಬೇಕು ಎಂದು ತಿಳಿಸಿದ್ದಾರೆ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.