Tuesday, March 11, 2025
Tuesday, March 11, 2025

ಚಿಕ್ಕಮಗಳೂರಿನಲ್ಲಿ ಗಣರಾಜ್ಯೋತ್ಸವ ಮ್ಯಾರಥಾನ್ ಓಟ

Date:

ದೈಹಿಕವಾಗಿ ಆರೋಗ್ಯವನ್ನು ವೃದ್ದಿಸಲು ಯುವಕರು ನಡಿಗೆ ಯೊಂದಿಗೆ ಓಟವನ್ನು ಬಾಲ್ಯದಿಂದಲೇ ಅಭ್ಯಾಸಿಕೊಂಡಲ್ಲಿ ಮಾತ್ರ ಭವಿಷ್ಯದ ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಯಶಸ್ಸು ಗಳಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ ಹೇಳಿದರು.

ಚಿಕ್ಕಮಗಳೂರಿನ ಸೆಂಟ್ ಮೇರಿಸ್ ಶಾಲೆಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಕಾಲೇಜು ಹಾಗೂ ಪ್ರೌಢಶಾಲೆಯ ಯುವಕ ಹಾಗೂ ಯುವತಿಯರಿಗೆ ಮ್ಯಾರಥಾನ ಓಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮುಂಜಾನೆಯ ಓಟದಿಂದ ಯುವಕರು ಪಠ್ಯದ ಜೊತೆಗೆ ದಿನನಿತ್ಯದ ಚಟುವಟಿಕೆಗಳನ್ನು ಆರಾಮಧಾಯಕವಾಗಿ ನಿಭಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ಭಾರತೀಯ ಸಂವಿಧಾನದಡಿಯಲ್ಲಿ ಜೀವಿಸುತ್ತಿರುವ ನಾವುಗಳು ಒಗ್ಗಟ್ಟಿನಿಂದ ಬದುಕುವುದನ್ನು ಸೆಂಟ್ ಮೇರಿಸ್ ಶಾಲೆಯ ಶಿಕ್ಷಕರು ಮಕ್ಕಳಿಗೆ ಕಲಿಸುತ್ತಿರುವುದು ಸಂತಸ ವಿಷಯ. ಜೊತೆಗೆ ಭಾರತದಿಂದ ಜಾತ್ಯಾತೀತ ಅರಿವು, ದೇಶ ನಡೆದು ದಾರಿ ಹಾಗೂ ದೇಶಭಕ್ತಿಯನ್ನು ಬಾಲ್ಯದಲ್ಲೇ ಮಕ್ಕಳಿಗೆ ತುಂಬಿಸುವ ಕಾರ್ಯ ಶಿಕ್ಷಕರ ಮೇಲಿದೆ ಎಂದು ಕಿವಿಮಾತು ಹೇಳಿದರು.

ಶಾಲೆಯ ಸಂಸ್ಥಾಪಕ ಜೆರಾಲ್ಡ್ ಲೋಬೋ ಮಾತನಾಡಿ ಇದೇ ಪ್ರಥಮ ಬಾರಿಗೆ ಗಣರಾಜ್ಯೋತ್ಸವದ ಅಂಗವಾಗಿ ಮ್ಯಾರಥಾನ್ ಓಟವನ್ನು ಆಯೋಜಿಸಲಾಗಿದೆ. ಓಟವು ನಗರದ ಐ.ಜಿ.ರಸ್ತೆ, ಎಂ.ಜಿ.ರಸ್ತೆ, ಕೋಟೆ ಮೂಲಕ ವಾಪಸ್ ಶಾಲೆಯಲ್ಲಿ ಮುಕ್ತಾಯವಾಗಲಿದೆ ಎಂದು ತಿಳಿಸಿದರು.

ನಗರಸಭಾ ಸದಸ್ಯ ಎ.ಸಿ.ಕುಮಾರಗೌಡ ಮಾತನಾಡಿ ಮಕ್ಕಳಿಗೆ ಗಣರಾಜ್ಯೋತ್ಸವ ಹಾಗೂ ಸಂವಿ ಧಾನ ಮಹತ್ವನ್ನು ತಿಳಿಸುವ ಕಾರ್ಯವನ್ನು ಶಿಕ್ಷಕರು ಕರಗತ ಮಾಡಿಸಬೇಕು.
ಅಂಬೇಡ್ಕರ್ ನೀಡಿರುವಂತ ಹ ಮತದಾನ ಹಕ್ಕು ಸೇರಿದಂತೆ ಶೋಷಿತರ ಪರವಾದ ನಿಲುವುಗಳನ್ನು ತಿಳಿಹೇಳಬೇಕು ಎಂದರು.

ಈ ಸಂದರ್ಭದಲ್ಲಿ ಶಾಲೆಯ ಆಡಳಿಯ ಮಂಡಳಿ ಪ್ರಿಯಾ ಲೋಬೋ, ಕ್ಯಾಬಿನ್ ಲೋಬೋ, ಪಿಯು ಕಾಲೇಜಿನ ವ್ಯವಸ್ಥಾಪಕ ಗ್ಯಾಗರಿ ಲೋಬೋ ಹಾಗೂ ಶಾಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

JCI Shivamogga ಜೆಸಿಐ ನಲ್ಲಿ ತೊಡಗಿಸಿಕೊಂಡರೆ ಪರಿಪೂರ್ಣ ವ್ಯಕ್ತಿತ್ವ ಬೆಳವಣಿಗೆ- ಸೂರ್ಯ ನಾರಾಯಣ ವರ್ಮ

JCI Shivamogga ಸಮಾಜಮುಖಿ ಚಟುವಟಿಕೆಗಳ ಜತೆಯಲ್ಲಿ ಸದೃಢ ಸಮಾಜ ನಿರ್ಮಾಣ ಮಾಡುವಲ್ಲಿ...

Karnataka Lokayukta ಮಾರ್ಚ್ 18 ರಿಂದ 21 ವರೆಗೆ ರಾಜ್ಯ ಉಪಲೋಕಾಯುಕ್ತ ನ್ಯಾ.ಕೆ.ಫಣೀಂದ್ರ ಅವರ ಜಿಲ್ಲಾ ಕಾರ್ಯಕ್ರಮಗಳ ಮಾಹಿತಿ

Karnataka Lokayukta ಕರ್ನಾಟಕ ಉಪಲೋಕಾಯುಕ್ತ ನ್ಯಾ.ಕೆ.ಎನ್.ಫಣೀಂದ್ರ ಅವರು ಮಾ. 18...

CM Siddharamaih ಕುರ್ಚಿ ಉಳಿಸಿಕೊಳ್ಳುವ ಯತ್ನದಲ್ಲಿ ಸಿದ್ಧರಾಮಯ್ಯನವರ ಬಜೆಟ್…!

CM Siddharamaih ಕರ್ನಾಟಕದ ಅಭಿವೃದ್ಧಿಗೆ ಪೂರಕವೇ ಅಥವಾ ಮುಸ್ಲಿಂ ಸಮುದಾಯದ ಅಭಿವೃದ್ಧಿಗೆ...

Guarantee Scheme ಗ್ಯಾರಂಟಿ ಯೋಜನೆ ನಿಲ್ಲಿಸುವುದಿಲ್ಲ.‌ ಊಹಾಪೋಹಗಳಿಗೆ ಬೆಲೆಕೊಡಬೇಡಿ- ಸಿ.ಎಸ್.ಚಂದ್ರಭೂಪಾಲ್

Guarantee Scheme ಕರ್ನಾಟಕ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ,...