Monday, December 15, 2025
Monday, December 15, 2025

ಮನಮುದಗೊಳ್ಳಲು ಕ್ರೀಡಾ ಚಟುವಟಿಕೆ ಸಹಕಾರಿ-ಎಂ.ಸಿ.ಸುರೇಶ್

Date:

ಚಿಕ್ಕಮಗಳೂರು: ಮನರಂಜನಾ ಕೂಟದ ಸ್ಪರ್ಧೆಗಳಲ್ಲಿ ಬಿ.ಎಸ್.ಎನ್.ಎಲ್. ನೌಕರರು ಹಾಗೂ ಕುಟುಂಬ ಸದಸ್ಯರು ಅತ್ಯಂತ ಕ್ರಿಯಾಶೀಲರಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಮನರಂಜನಾ ಕೂಟದ ಅಧ್ಯಕ್ಷ ಎಂ.ಸಿ.ಸುರೇಶ್ ಹೇಳಿದರು.

ಚಿಕ್ಕಮಗಳೂರು ನಗರದ ಸಮೀಪದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಬಿ.ಎಸ್.ಎನ್.ಎಲ್. ದೂರವಾಣಿ ಮನರಂಜನಾ ಕೂಟದ ವಾರ್ಷಿಕೋತ್ಸವವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇಲಾಖೆಯ ನೌಕರರಿಗೆ ಕ್ರಿಕೇಟ್ ಸೇರಿದಂತೆ ವಿವಿಧ ಆಟೋಟ ಕ್ರೀಡೆಗಳನ್ನು ಆಯೋಜಿಸಿ ದೈಹಿಕ ವಾಗಿ ಶಕ್ತಿ ತುಂಬುವ ಕೆಲಸ ಮಾಡಲಾಗಿದ್ದು ಇಲಾಖೆಯ ನೌಕರರು ಕುಟುಂಬ ಸಮೇತರಾಗಿ ಅತ್ಯಂತ ಸಂತೋಷದಿಂದ ಪಾಲ್ಗೊಂಡು ಯುವಕರನ್ನು ಮೀರಿಸುವಂತೆ ಕ್ರೀಡೆಯಲ್ಲಿ ಭಾಗವಹಿಸಿ ಮೆರಗು ತಂದಿದ್ದಾರೆ ಎಂದರು.

ಕೆಲಸದ ಒತ್ತಡದಿಂದ ಬಳಲುವ ವ್ಯಕ್ತಿಗಳಿಗೆ ಕ್ರೀಡೆಯು ಮನಶಾಂತಿ ನೀಡುವ ಸಾಧನವಾಗಿದೆ. ದಿನನಿತ್ಯದ ಕೆಲಸ-ಕಾರ್ಯಗಳ ಜಂಜಾಟಗಳಲ್ಲಿ ನೌಕರರಿಗೆ ಸ್ವಲ್ಪಮಟ್ಟಿನ ಮನಸ್ಸನ್ನು ಮೃದಗೊಳಿಸಲು ಕ್ರೀಡಾ ಚಟುವಟಿಕೆಗಳು ಪೂರಕವಾಗಲಿದೆ ಎಂದರು.

ಕಾರ್ಯದರ್ಶಿ ಪಿ.ಮಂಜುನಾಥ್ ಮಾತನಾಡಿ ಮನರಂಜನಾ ಕೂಟವು ಸ್ಥಾಪನೆಯಾಗಿ ಅನೇಕ ವರ್ಷಗಳು ಕಳೆದಿದೆ. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಜೊತೆಗೆ ಇಲಾಖೆಯಲ್ಲಿ ನಿವೃತ್ತಗೊಂಡವರಿಗೆ ಗೌರವಿಸುವ ಕಾರ್ಯವು ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಇದೇ ವೇಳೆ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿದ ನೌಕರರ ಮಕ್ಕಳಿಗೆ ಸನ್ಮಾನಿಸಲಾಯಿತು.

ವಿವಿಧ ಕ್ರೀಡೆಯಲ್ಲಿ ಪಾಲ್ಗೊಂಡು ಪ್ರಥಮ ಸ್ಥಾನ ಗಳಿದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಿ.ಎಸ್.ಎನ್.ಎಲ್ ಜಿಲ್ಲಾ ಅಧಿಕಾರಿ ಕೆ.ಎಲ್.ಶಿವಣ್ಣ, ನೌಕರರಾದ ಪರಮೇಶ್ವರ್, ಕ್ರೀಡಾ ಕಾರ್ಯದರ್ಶಿ ಬಿ.ಟಿ. ಲಕ್ಷ್ಮಣ್ ,ನೌಕರರಾದ ಜೋಸೆಫ್, ಎನ್.ಜಿ.ರಮೇಶ್, ಕೆ.ಪಿ.ಸುಂದ್ರೇಶ್, ಕಿರಣ್ ಸಿಬ್ಬಂದಿ ವರ್ಗ ಹಾಗೂ ಕುಟುಂಬದವರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...