Sunday, May 17, 2026
Sunday, May 17, 2026

ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಯೋಜನೆ ಕುರಿತ ಕ್ಯಾಲೆಂಡರ್ ಬಿಡುಗಡೆ

Date:

ಚಿಕ್ಕಮಗಳೂರು: ಜೆಡಿಎಸ್‌ನ ಪಂಚರತ್ನ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಉದ್ದೇಶದಿಂದ ಪಕ್ಷದ ಕಚೇರಿಯಲ್ಲಿ ಯೋಜನೆ ಸಂಬಂಧಪಟ್ಟ 2023ರ ನೂತನ ಕ್ಯಾಲೆಂಡರ್‌ನ್ನು ಚಿಕ್ಕಮಗಳೂರು ವಿಧಾನಸಭಾ ಅಭ್ಯರ್ಥಿ ಬಿ.ಎಂ.ತಿಮ್ಮಶೆಟ್ಟಿ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಬಿ.ಎಂ.ತಿಮ್ಮ ಶೆಟ್ಟಿ ಸುಮಾರು ನಲವತ್ತು ಸಾವಿರಕ್ಕೆ ಹೆಚ್ಚು ಕ್ಯಾಲೆಂಡರ್ ಮುದ್ರಣಗೊಳಿಸಲಾಗಿದ್ದು, ನಗರ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಮನೆಗಳಿಗೆ ಹಂಚಿಕೆ ಮಾಡುವ ಮೂಲಕ ಯೋಜನೆಯ ಮಾಹಿತಿಯನ್ನು ತಿಳಿಸಲಾಗುವುದು ಎಂದು ಹೇಳಿದರು.

ರಾಜ್ಯದ ಸಮಗ್ರ ಅಭಿವೃದ್ಧಿಗೆ ಪಂಚರತ್ನ ಯೋಜನೆಗಳೇ ಪರಿಹಾರ ಎಂಬುದು ಜೆಡಿಎಸ್ ಅರಿತು ಶಿಕ್ಷಣವೇ ಆಧುನಿಕ ಶಕ್ತಿ, ಆರೋಗ್ಯವೇ ಸಂಪತ್ತು, ರೈತ ಚೈತನ್ಯ, ಯುವನವ ಮಾರ್ಗ ಮತ್ತು ಮಹಿಳಾ ಸಬಲೀಕರಣ ಹಾಗೂ ವಸತಿಯ ಆಸರೆ ಎಂಬ ಐದು ಯೋಜನೆಯ ಅಂಶಗಳನ್ನು ಒಳಗೊಂಡಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ನಿಸಾರ್ ಅಹ್ಮದ್, ಎಸ್ಸಿಎಸ್ಟಿ ಘಟಕದ ಜಿಲ್ಲಾಧ್ಯಕ್ಷ ದೇವಿಪ್ರಸಾದ್, ನಗರಾಧ್ಯಕ್ಷ ಚಿದಾನಂದ್, ನಗರಸಭಾ ಸದಸ್ಯ ಗೋಪಿ, ದಿನೇಶ್, ಮಹಿಳಾ ಘಟಕದ ನಗರಾಧ್ಯಕ್ಷೆ ಜಯಂತಿ, ಮುಖಂಡರುಗಳಾದ ಸಿ.ಎನ್.ದೇವರಾಜ್ ಅರಸ್, ನಾಗರತ್ನ, ಸುಲೋಚನಾ ರಮೇಶ್, ಶಿವು, ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...