ಮೈಸೂರು: ಸಾಹಸ ಸಿಂಹ ಎಂದೇ ಪ್ರಖ್ಯಾತಿ ಪಡೆದಿದ್ದ ಚಿತ್ರನಟ ಡಾ. ವಿಷ್ಣುವರ್ಧನ್ ಅವರು ನಮ್ಮನ್ನಗಲಿ ಸುಮಾರು 13 ವರ್ಷಗಳೆ ಕಳೆದಿವೆ. ವಿಷ್ಣುವರ್ಧನ್ ಅವರ ಕುಟುಂಬಸ್ಥರು ಹಾಗೂ ಅಭಿಮಾನಿ ಬಳಗದ ಕಾಯುವಿಕೆ ಹಾಗೂ ಹೋರಾಟದ ಫಲವಾಗಿ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಭವ್ಯ ಸ್ಮಾರಕ ಲೋಕಾರ್ಪಣೆಗೊಂಡಿದೆ.
ಜನವರಿ 29ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ವಿಷ್ಣು ಸ್ಮಾರಕ ಲೋಕಾರ್ಪಣೆಗೊಂಡಿದೆ.
13 ವರ್ಷಗಳ ಕಾಯುವಿಕೆಯ ಬಳಿಕ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ಮೈಸೂರಿನಲ್ಲಿ ಲೋಕಾರ್ಪಣೆಗೊಂಡಿರುವುದು ಅಭಿಮಾನಿ ಬಳಗಕ್ಕೆ ಹಾಗೂ ಕುಟುಂಬಸ್ಥರಿಗೆ ಸಂತಸದ ಸಂಭ್ರಮವಾಗಿದೆ.
ಡಾ. ವಿಷ್ಣುವರ್ಧನ್ ಅವರು ಸುಮಾರು 220 ನಟಿಸಿದ್ದಾರೆ. ಕನ್ನಡ, ತೆಲುಗು, ಹಿಂದಿ, ತಮಿಳು ಹೀಗೆ ಅನೇಕ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ. ವಿಷ್ಣುವರ್ಧನ್ ಅವರು ಮೂಲತಃ ಮೈಸೂರಿನವರು. ಡಿಸೆಂಬರ್ 30,2009 ದೈವಾಧೀನರಾದರು.
ಡಾ. ವಿಷ್ಣುವರ್ಧನ್ ಅವರ ಸ್ಮಾರಕವು ಮೈಸೂರಿನ ಹಾಲಾಳು ಗ್ರಾಮದ 5 ಎಕರೆ ಪ್ರದೇಶದಲ್ಲಿ ಅವರ ಸ್ಮಾರಕ ನಿರ್ಮಾಣಗೊಂಡಿದೆ. ಸುಮಾರು 11 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸ್ಮಾರಕವನ್ನು ನಿರ್ಮಿಸಲಾಗಿದೆ. ವಿಷ್ಣುವರ್ಧನ್ ಅವರ ಅಭಿಮಾನ ಬಳಗ ಹಾಗೂ ಕುಟುಂಬದ ಸದಸ್ಯರು ಬಯಸಿದಂತೆ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಗೊಂಡಿದೆ. ಇನ್ನು ಮುಂದಿನ ದಿನಗಳಲ್ಲಿ ಈ ಸ್ಮಾರಕವು ಪ್ರವಾಸಿ ತಾಣವಾಗಬೇಕೆಂಬುದು ಎಲ್ಲರ ಆಶಯ.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.
