Sunday, April 19, 2026
Sunday, April 19, 2026

ಕುಮಾರಣ್ಣ ಅವರಿಂದ ಜೆಡಿಎಸ್ ಭರವಸೆಗಳ ಸುರಿಮಳೆ

Date:

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರಾಜ್ಯದ ರೈತರನ್ನು ಸಾಲಮುಕ್ತಗೊಳಿಸುವುದು, ಹಳ್ಳಿಗಳ ಅಭಿವೃದ್ಧಿ, ಸ್ವಸಹಾಯ ಸಂಘಗಳ ಸಾಲ ಮನ್ನಾ ಸೇರಿ ಪಂಚರತ್ನ ಯೋಜನೆಗಳನ್ನು ಅನುಷ್ಠಾನ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಕುಷ್ಟಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ತಾವರಗೇರಾ ಗ್ರಾಮದಲ್ಲಿ ಮಾತನಾಡಿ ಅವರು, ಜೆಡಿಎಸ್‌ ಅಧಿಕಾರಕ್ಕೆ ಬಂದರೆ ರೈತರಿಗೆ ಪ್ರತಿ ಎಕರೆ ಜಮೀನಿಗೆ ಪ್ರತಿವರ್ಷ 10 ಸಾವಿರ ಆರ್ಥಿಕ ನೆರವು, ವೃದ್ಧಾಪ್ಯ ವೇತನ 5 ಸಾವಿರಕ್ಕೆ ಹೆಚ್ಚಳ ಮತ್ತು ವಿಧವಾ ವೇತನ 2,500ಗೆ ಏರಿಕೆ ಮಾಡುವುದಾಗಿ ತಿಳಿಸಿದರು.

ಯುವಕರು, ಯುವತಿಯರಿಗೆ ಸ್ವಯಂ ಉದ್ಯೋಗ, ಮಹಿಳಾ ಸ್ವಸಹಾಯ ಸಂಘಗಳ ಸಂಪೂರ್ಣ ಸಾಲಮನ್ನಾ ಯೋಜನೆಗಳನ್ನು ಜಾರಿ ಮಾಡಿಯೇ ತೀರುತ್ತೇನೆ. ಇದಕ್ಕೆ ಸುಮಾರು .2.5 ಲಕ್ಷ ಕೋಟಿ ಬಜೆಟ್‌ ಅಗತ್ಯವಿದೆ. ಅದನ್ನು ಕ್ರೋಢೀಕರಿಸುವುದೂ ಗೊತ್ತಿದೆ ಎಂದರು.

ಈ ಎಲ್ಲ ಯೋಜನೆಗಳನ್ನು ಜಾರಿ ಮಾಡಲು ಜೆಡಿಎಸ್‌ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರಬೇಕಾಗುತ್ತದೆ. ಆದರೆ ಇದೆಲ್ಲವನ್ನೂ ಬಿಜೆಪಿ, ಕಾಂಗ್ರೆಸ್‌ ಸರ್ಕಾರದ ಜತೆ ಮಾಡುವುದು ಅಸಾಧ್ಯ. ಅದಕ್ಕಾಗಿ ಇದೊಂದು ಬಾರಿ ನನಗೆ ಸಂಪೂರ್ಣ ಅಧಿಕಾರ ನೀಡಿ ಎಂದು ಮನವಿ ಮಾಡಿದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Bhadravati Police ಭದ್ರಾವತಿಯಿಂದ ವ್ಯಕ್ತಿ ನಾಪತ್ತೆ, ಹಳೇನಗರ ಪೊಲೀಸ್ ಠಾಣೆ ಪ್ರಕಟಣೆ

Bhadravati Police ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಂಬೇಡ್ಕರ್...

MESCOM ಏಪ್ರಿಲ್ 19. ಶಿವಮೊಗ್ಗ ದುರ್ಗಿಗುಡಿ‌ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...

Sri Shankaracharya Jayanti ಏ.21ರಂದು ಶ್ರೀ ಶಂಕರಾಚಾರ್ಯ ಜಯಂತಿ

Sri Shankaracharya Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ...