ಕೇಂದ್ರ ಸರ್ಕಾರ ಉತ್ತಮ ಬಜೆಟ್ ಮಂಡಿಸಿದ್ದು ಹಸಿರೀಕರಣಕ್ಕೆ ಒತ್ತು ನೀಡಿದೆ.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ಸರ್ಕಾರ ಮಹತ್ವ ನೀಡಿದೆ.
ರೈತರಿಗೆ ಅದರಲ್ಲಿಯೂ ಸಿರಿಧಾನ್ಯಕ್ಕೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ಬಜೆಟ್ ರೈತಾಪಿ ಸರ್ಕಾರ ಎಂದು ತೋರಿಸಿದೆ. ಒಟ್ಟಾರೆ ಈ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ಬಿ.ಸಿ.ಪಾಟೀಲ್, ಕೃಷಿ ಸಚಿವರು ತಿಳಿಸಿದರು.