Tuesday, February 3, 2026
Tuesday, February 3, 2026

ಚಿಕ್ಕಮಗಳೂರಿನಲ್ಲಿ ಅಮ್ ಆದ್ಮಿ ಪಕ್ಷದಿಂದ ಮತದಾರ ಜಾಗೃತಿ ಬೈಕ್ ಜಾಥಾ

Date:

ಚುನಾವಣಾ ಸಮಯದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೇ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಬೇಕು ಎಂದು ಆಗ್ರಹಿಸಿ ಎಎಪಿ ಮುಖಂಡರುಗಳು ಹಾಗೂ ಕಾರ್ಯ ಕರ್ತರು ಪಕ್ಷದ ಜಿಲ್ಲಾ ಕಚೇರಿಯಿಂದ ಚಿಕ್ಕಮಗಳೂರಿನ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ಜಾಗೃತಿ ಮೂಡಿಸಿದರು.

ಬೈಕ್ ಜಾಥಾವು ನಗರದ ಅಂಬೇಡ್ಕರ್ ರಸ್ತೆ, ಎಂ.ಜಿ.ರಸ್ತೆ, ಐ.ಜಿ.ರಸ್ತೆ ಮೂಲಕ ಆಜಾದ್ ಪಾರ್ಕ್ ವೃತ್ತದಲ್ಲಿ ಮುಕ್ತಾಯಗೊಳಿಸಲಾಯಿತು.
ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಡಾ|| ಕೆ.ಸುಂದರಗೌಡ ದೇಶದಲ್ಲಿ ಎಎಪಿ ಪಕ್ಷ ಬಲಿಷ್ಟವಾಗಿ ಬೆಳೆಯುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಮತದಾನ ಮೌಲ್ಯ ಯುತವಾದುದು. ಮತದಾರರು ಆಸೆ, ಆಮಿಷಕ್ಕೆ ಒಳಗಾಗದೇ ವಿವೇಚನಾಯುತವಾಗಿ ಹಕ್ಕು ಚಲಾಯಿ ಸಬೇಕು ಎಂದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹೇಮಂತ್, ಮುಖಂಡರುಗಳಾದ ಜಮೀಲ್ ಅಹ್ಮದ್, ಎಂ.ಪಿ.ಈರೇಗೌಡ, ಪವನ್, ರವಿ ಹಾಗೂ ವಿವಿಧ ತಾಲ್ಲೂಕು ಅಧ್ಯಕ್ಷರುಗಳು ಪಾಲ್ಗೊಂಡಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...