Tuesday, December 16, 2025
Tuesday, December 16, 2025

ಪತ್ರಕರ್ತರು ಸಮಗ್ರ ಕರ್ನಾಟಕದ ಬಗ್ಗೆ ಮಾತಾಡಬೇಕು- ಬಸವರಾಜ ಬೊಮ್ಮಯಿ

Date:

ಗ್ರಾಮೀಣ ಪತ್ರಕರ್ತರಿಗೂ ಬಸ್ ಪಾಸ್ ವ್ಯವಸ್ಥೆಗೆ ಜಾರಿಗೆ ಬದ್ಧ. ಈ ನಿಟ್ಟಿನಲ್ಲಿ ಪತ್ರಕರ್ತರ ಸಂಘ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು. ಅರ್ಹ ಪತ್ರಕರ್ತರಿಗೆ ಈ ಯೋಜನೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಗುಲ್ಬರ್ಗ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಇಂದು ಆಯೋಜನೆಗೊಂಡ 37ನೇ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕೋದ್ಯಮ ಕವಲು ದಾರಿಯಲ್ಲಿದ್ದು, ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಇಂದು ಪ್ರತೀ ಓದುಗನೂ ಕೂಡಾ ಪತ್ರಕರ್ತನಾಗಿದ್ದಾನೆ. ಪತ್ರಿಕೋದ್ಯಮವನ್ನು ಉಳಿಸಿಕೊಳ್ಳುವುದು ದೊಡ್ಡ ಸವಾಲು. ಹೀಗಾಗಿ ವಿಶ್ವಾಸಾರ್ಹತೆ ಬಹಳ ಮುಖ್ಯ. ಇಂತಹ ಸಂದಿಗ್ಧ ಸಂದರ್ಭದಲ್ಲಿ ಪತ್ರಕರ್ತರು ಹಾಗೂ ಪತ್ರಿಕೆಗಳ ಹಿತ ಕಾಯುವುದು ಸರ್ಕಾರದ ಆದ್ಯ ಕರ್ತವ್ಯ ಎಂದರು.

ನಿವೃತ್ತ ಮಾಸಾಶಾನ ಹೆಚ್ಚಿಗೆಗೆ ಸಹಮತ ವ್ಯಕ್ತಪಡಿಸಿದ ಅವರು, ಈ ಬಗ್ಗೆ ಮುಂಗಡ ಪತ್ರದಲ್ಲಿ ಅಗತ್ಯ ಹಣವನ್ನು ಮೀಸಲಿರಿಸಲಾಗುವುದು. ಮುಂದಿನ ದಿನಗಳಲ್ಲಿ ಪತ್ರಿಕಾ ಭವನ ನಿರ್ವಹಣೆಯನ್ನು ಪತ್ರಕರ್ತರ ಸಂಘಕ್ಕೆ ವಹಿಸಿಕೊಡಲು ಸಿದ್ಧ. ಈ ಬಗ್ಗೆ ಕಾರ್ಯನಿರತ ಪತ್ರಕರ್ತರ ಸಂಘ ರೂಪು ರೇಷೆಗಳನ್ನು ಸಿದ್ಧಪಡಿಸುವಂತೆ ಸೂದರು.

ವಿಧಾನ ಪರಿಷತ್‌ನಲ್ಲಿ ಪತ್ರಕರ್ತರಿಗೂ ಅವಕಾಶ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುವುದು ಹಾಗೆಯೇ, ಕಾರ್ಮಿಕ ಇಲಾಖೆಯ ಮುಖಾಂತರ ಸಿಗಬಹುದಾದ ಸೌಲಭ್ಯಗಳನ್ನು ಒದಗಿಸಲು ಬದ್ಧ ಎಂದ ಅವರು, ಜಾಹಿರಾತು ದರ ಪರಿಷ್ಕರಣೆಗೆ ಆದೇಶ ಜಾರಿ ಮಾಡಲಾಗಿದೆ. ಯಶಸ್ವಿನಿ ವ್ಯಾಪ್ತಿಗೂ ಪತ್ರಕರ್ತರನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಪತ್ರಕರ್ತರೂ ಕೂಡಾ ಪ್ರಾದೇಶಿಕವಾಗಬಾರದು. ಅಖಂಡ ಕರ್ನಾಟಕದ ಪತ್ರಕರ್ತರಾಗಬೇಕು ಎಂದ ಅವರು, ಸಮಗ್ರ ಕರ್ನಾಟಕದ ಬಗ್ಗೆ ಮಾತಾಡುವಂತಾಗಬೇಕು. ಪತ್ರಕರ್ತರಿಗೂ ರಾಜಕಾರಣಿಗೂ ಅವಿನಾಭಾವ ಸಂಬಂಧವಿದೆ. ಒಬ್ಬರ ಬಿಟ್ಟು ಇನ್ನೊಬ್ಬರು ಇರಲಾರರು. ಪ್ರಾಮಾಣಿಕ ಕಾರ್ಯನಿರತವಾಗಿರುವ ಬಾಂಧವ್ಯವಾಗಿರಬೇಕು. ಇಬ್ಬರೂ ಕೂಡಾ ಗಡಿಯನ್ನು ಮೀರಬಾರದು ಎಂದು ಎಚ್ಚರಿಸಿದರು.

ಸಣ್ಣ ಹಾಗೂ ಪ್ರಾದೇಶಿಕ ಪತ್ರಿಕೆಗಳು ಉಳಿಯಬೇಕು. ಇದು ಜನ ಸಂಸ್ಕೃತಿಯ ಜೀವಾಳ. ಈ ಸಂಸ್ಕೃತಿಯನ್ನು ಉಳಿಸಬೇಕಾದ್ದು ಸಮ್ಟ ಜವಾಬ್ದಾರಿ. ಈ ಬಗ್ಗೆ ಯಾವುದೇ ರಾಜಿ ಇಲ್ಲ ಎಂದ ಅವರು, ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ಪತ್ರಕರ್ತರ ನಡೆದುಕೊಂಡ ರೀತಿ ಅವಿಸ್ಮರಣೀಯ. ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದು ಮರೆಯುವಂತಿಲ್ಲ ಎಂದ ಅವರು, ಕೋವಿಡ್ ಕಾರಣದಿಂದ ಮೃತರಾದ ಎಲ್ಲ ಪತ್ರಕರ್ತರ ಕುಟುಂಬಗಳಿಗೆ ಆರ್ಥಿಕ ನೆರವು ನೀಡಲಾಗುವುದು ಎಂದು ಘೋಷಿಸಿದರು.

ಜ್ಞಾನ ಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಛಾಯಚಿತ್ರ ಪ್ರದರ್ಶನವನ್ನು ಸಚಿವ ಸಿ. ಸಿ. ಪಾಟೀಲ್, ವಸ್ತು ಪ್ರದರ್ಶನವನ್ನು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ವ್ಯಂಗ್ಯ ಚಿತ್ರ ಪ್ರದರ್ಶನವನ್ನು ಸಚಿವ ಮುರುಗೇಶ್ ನಿರಾಣಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹೊರತರಲಾದ ಸ್ಮರಣ ಸಂಚಿಕೆಯನ್ನು ಸಚಿವ ಗೋವಿಂದ ಕಾರಜೋಳ ಲೋಕಾರ್ಪಣೆಗೊಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ವಹಿಸಿದ್ದರು.

ವೇದಿಕೆಯಲ್ಲಿ ಸಚಿವರಾದ ಹಾಲಪ್ಪ ಆಚಾರ್, ನಾರಾಯಣ ಗೌಡ, ಶಂಕರ ಗೌಡ ಪಾಟೀಲ್ ಮುನೇನ ಕೊಪ್ಪ, ಗೋಪಾಲಯ್ಯ, ಸಂಸದ ರಮೇಶ್ ಜಿಗಜಿಣಗಿ, ಜಿಲ್ಲಾಽಕಾರಿ ವಿಜಯ ಮಹಂತೇಶ್ ದಾನಮ್ಮನವರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ, ರಾಹುಲ್ ಸಿಂಧೆ, ಪೋಲೀಸ್ ವರಿಷ್ಟಾಧಿಕಾರಿ ಆನಂದ ಕುಮಾರ್, ವಾರ್ತಾ ಇಲಾಖೆ ಆಯುಕ್ತ ಡಾ. ಪಿ. ಎಸ್.ಹರ್ಷ, ಸ್ಥಳೀಯ ಶಾಸಕರು ಉಪಸ್ಥಿತರಿದ್ದರು.

ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಂಗಮೇಶ ಚೂರಿ ಮಾತನಾಡಿದರು.

ಪ್ರಜಾವಾಣಿಯ ಸಂಪಾದಕ ರವೀಂದ್ರ ಭಟ್ಟರವರಿಂದ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಾಧಕ ಪತ್ರಕರ್ತರನ್ನು ಸನ್ಮಾನಿಸಲಾಯಿತ

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಡಿಸೆಂಬರ್ 16 & 17 ಶಿವಮೊಗ್ಗದ ರವೀಂದ್ರನಗರಕ್ಕೆ ವಿದ್ಯುತ್ ಸರಬರಾಜು ಇಲ್ಲ, ಮೆಸ್ಕಾಂ ಪ್ರಕಟಣೆ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್...

Shamanur Shivashankarappa ವಿಧಾನ ಸಭಾ ಕಲಾಪ: ಅಗಲಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

Shamanur Shivashankarappa ಎಲ್ಲ ರಾಜಕಾರಣಿಗಳೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದ ಶಾಮನೂರು ಶಿವಶಂಕರಪ್ಪ...

Dr. G.S. Shivarudrappa ರಾಷ್ಟ್ರಕವಿ ಜಿ.ಎಸ್.ಎಸ್. ರಚಿತ ಕವನಗಳ ಆನ್ ಲೈನ್ ಗಾಯನ ಸ್ಪರ್ಧೆ

Dr. G.S. Shivarudrappa ಶಿವಮೊಗ್ಗದಲ್ಲಿ ರಾಷ್ಟ್ರಕವಿ ಡಾ. ಜಿ.ಎಸ್ . ಶಿವರುದ್ರಪ್ಪ...

ಸಿಗಂದೂರು ಸೇತುವೆ: ಆತ್ಮಹತ್ಯೆಗೆ ಯತ್ನಿಸಿದಾತನ ಜೀವವುಳಿಸಿದ ಇಂಜಿನಿಯರ್ ಮಾತಿನ ಕೌಶಲ

ಮೈಸೂರಿನ ವ್ಯಕ್ತಿಯೊಬ್ಬರು ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇಂಜಿನಿಯರ್ ಒಬ್ಬರ...