Tuesday, October 1, 2024
Tuesday, October 1, 2024

ಸಾಗರ ಮಾರಿಕಾಂಬೆ ಜಾತ್ರೆಯ ಧಾರ್ಮಿಕ ಪೂಜಾಕಾರ್ಯಗಳಿಗೆ ಚಾಲನೆ

Date:

ಮಂಗಳವಾರದಿಂದ ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆ ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಭಾನುವಾರ ಧಾರ್ಮಿಕ ಪೂಜಾ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು. ವಿವಿಧ ಧಾರ್ಮಿಕ ಪೂಜೆಗಳು ನಡೆದವು.

ಭಾನುವಾರ ಬೆಳಗ್ಗೆ ಕಂಚಿಗಾರ್ ಸಮಾಜದ ವತಿಯಿಂದ ಶ್ರೀ ಮಾರಿಕಾಂಬ ದೇವಿಗೆ ಬಾಗಿನ ಸಮರ್ಪಿಸಲಾಯಿತು. ನಂತರ ದೇವರ ಗರ್ಭಗುಡಿಗೆ ಬಾಗಿನ ತರಲಾಯಿತು. ನಗರದ ಅಶೋಕ ರಸ್ತೆಯಲ್ಲಿ ಇರುವ ಗೋವಿಂದಪ್ಪ ಅವರ ಮನೆಯಿಂದ ಉತ್ಸವ ಮೂರ್ತಿಗೆ ಸೀರೆ ತರಲಾಯಿತು.
ಅಮ್ಮನವರ ಉತ್ಸವ ಮೂರ್ತಿಗೆ ಸಾರ್ವಜನಿಕರಿಂದ ಸಂಗ್ರಹಿಸಿದ ದೇಣಿಗೆ ಮತ್ತು ದೈವಜ್ಞ ಬ್ರಾಹ್ಮಣ ಸಮಾಜ ಒಟ್ಟಾಗಿ ಸೇರಿ 672 ಗ್ರಾಂ ಬಂಗಾರದ ತಾಳಿಯನ್ನು ದೇವಸ್ಥಾನದ ಸುಪರ್ದಿಗೆ ವಹಿಸಲಾಯಿತು. ಮೂರು ವರ್ಷಗಳಿಗೊಮ್ಮೆ ನಡೆಯುವ ಜಾತ್ರಾ ಪ್ರಯುಕ್ತ ಅಮ್ಮನವರ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಜಯಲಕ್ಷ್ಮೀ ಜ್ಯೂವೆಲ್ಲರಿ ವರ್ಕ್ಸ್ ವತಿಯಿಂದ ಪಾಲಿಶ್ ಮಾಡಿ ದೇವಸ್ಥಾನಕ್ಕೆ ಹಿಂದಿರುಗಿಸಲಾಯಿತು.

ಗುಡಿಗಾರ್ ಸಮಾಜದ ಮುಖಂಡ ದಿ. ಗುಡಿಗಾರ್ ದೇವಪ್ಪ ಅವರ ಮನೆಯಿಂದ ಅಮ್ಮನವರಿಗೆ ಬಾಸಿಂಗ ತರಲಾಯಿತು. ಸಾಗರದ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆಯು ಎಲ್ಲ ಸಮಾಜದ ಪಾಲ್ಗೊಳ್ಳುವಿಕೆಯಿಂದ ಅತ್ಯಂತ ಯಶಸ್ವಿಯಾಗಿ ಜರುಗಲಿದೆ.
ಪ್ರತಿ ದಿನವು ಶ್ರೀ ಮಾರಿಕಾಂಬ ದೇವರ ಸನ್ನಿಧಿಯಲ್ಲಿ ವೈವಿಧ್ಯಮಯ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗ್ಗೆವರೆಗೂ ಚಿಕ್ಕಮ್ಮನನ್ನು ಹೊರಡಿಸುವ ಕಾರ್ಯಕ್ರಮ ನಡೆಯಲಿದೆ.
ಶ್ರೀ ಮಾರಿಕಾಂಬ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿ ಪ್ರಧಾನ ಕಾರ್ಯದರ್ಶಿ ಗಿರಿಧರರಾವ್, ಅತ್ಯಂತ ಅದ್ಧೂರಿಯಾಗಿ ಒಂಬತ್ತು ದಿನಗಳ ಕಾಲ ಧಾರ್ಮಿಕ ಪೂಜಾ ವಿಧಿ ವಿಧಾನಗಳು, ಭಜನಾ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ವೈಶಿಷ್ಯತೆಗಳೊಂದಿಗೆ ಸಾಗರದ ಶ್ರೀ ಮಾರಿಕಾಂಬ ಜಾತ್ರೆಯು ನಡೆಯಲಿದೆ.

ಜಾನಪದ ಕಲಾತಂಡಗಳು ರಾಜಬೀದಿ ಉತ್ಸವದಲ್ಲಿ ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.

ಧಾರ್ಮಿಕ ಕಾರ್ಯಕ್ರಮಗಳಲ್ಲಿ ಶ್ರೀ ಮಾರಿಕಾಂಬ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಉಪಾಧ್ಯಕ್ಷ ಸುಂದರ್ ಸಿಂಗ್, ವಿ.ಶಂಕರ್, ರಾಮಪ್ಪ, ಸಹ ಕಾರ್ಯದರ್ಶಿ ಎಸ್.ವಿ.ಕೃಷ್ಣಮೂರ್ತಿ, ಎಂ.ಡಿ.ಆನಂದ್, ಖಜಾಂಚಿ ನಾಗೇಂದ್ರ ಎಸ್.ಕುಮುಟಾ, ವಿವಿಧ ಸಮಿತಿ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...