Saturday, April 26, 2025
Saturday, April 26, 2025

ಆದಿಚುಂಚನಗಿರಿ ಶಾಖಾಮಠದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ

Date:

ಶಿವಮೊಗ್ಗ:
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನಮಠದ ಪರಮ ಪೂಜ್ಯ ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಮಹಾಸಂಸ್ಥಾನದ ಪ್ರಧಾನಕಾರ್ಯದರ್ಶಿ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ಕನಸಿನಂತೆ 1998ರಂದು ನಿರ್ಮಿಸಿದ ಸಮುದಾಯ ಭವನ ಉದ್ಘಾಟನೆ ದಿನದಿಂದ ಆರಂಭಗೊಂಡ ವಿವಾಹ ಮಹೋತ್ಸವಕ್ಕೆ 25ನೇ ವರುಷ ತಲುಪಿದ್ದು, ಈ ಮಹೋತ್ಸವವು ನಗರದ ಶರಾವತಿ ನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ನಡೆಯಲಿದ್ದು, ಅಂದಿನಿಂದ ಉಚಿತ ಸಾಮೂಹಿಕ ವಿವಾಹದಲ್ಲಿ ಸಾವಿರಾರು ಜನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಪ್ರತಿ ವಿವಾಹ ಮಹೋತ್ಸವದ ವಿಶೇಷತೆ ಎಂದರೆ ಮದುವೆಯಾಗುವ ವಧು ವರರಿಗೆ ವಿವಾಹಕ್ಕೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಮಠವೇ ನೀಡುತ್ತದೆ. ಹೆಣ್ಣಿಗೆ ತಾಳಿ, ಕಾಲುಂಗುರ, ಬಟ್ಟೆ ನೀಡಿದರೆ. ಗಂಡಿಗೆ ಅಂಗಿ,ಪಂಚೆ, ಕಲ್ಪವೃಕ್ಷ ನೀಡಲಾಗುತ್ತದೆ. ಇದೇ ಸಂದರ್ಭದಲ್ಲಿ ಶ್ರೀ.ಕಾಲಭೈರವೇಶ್ವರ ದೇವಾಲಯದ ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ.

ಆಸಕ್ತ ವಧು ವರರು ತಮ್ಮ ಇತ್ತೀಚಿನ ಭಾವಚಿತ್ರ,ಆಧಾರ್ ಕಾರ್ಡ್, ಜಾತಿ ಹಾಗೂ ಜನನ ಪ್ರಮಾಣ ಪತ್ರ,ಗ್ರಾಮ ಪಂಚಾಯಿತಿ ಅಥವಾ ನಗರಸಭೆಯಿಂದ ಪಡೆದ ದೃಢೀಕರಣ ಪತ್ರದೊಂದಿಗೆ ತಾವು ಹಾಗೂ ತಮ್ಮ ಪೋಷಕರೊಂದಿಗೆ ಬಂದು, ದಿನಾಂಕ :25/3/23 ರೊಳಗೆ ತಮ್ಮ ಹೆಸರನ್ನು ಮೇಲ್ಕಂಡ ವಿಳಾಸದಲ್ಲಿ ನೋಂದಾಯಿಸಿಕೊಳ್ಳಬೇಕೆಂದು ಕೋರುತ್ತೇವೆ.
ಪ್ರತಿ ವರ್ಷದಂತೆ ವಿವಾಹವಾಗಿ 50 ವರ್ಷ ತುಂಬಿದ ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೊಂದಾಯಿಸಲು 08182-257958,254141,9742885628 ಗೆ ಸಂಪರ್ಕಿಸಿ ಎಂದು ಮಹಾಸಂಸ್ಥಾನ ಮಠದ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

National Defense University ಪಠ್ಯಕ್ರಮದ ರಚನೆ & ಕೌಶಲ್ಯಾಭಿವೃದ್ಧಿಗೆಒತ್ತು-ರಾಷ್ಟ್ರೀಯ ರಕ್ಷಾ ವಿವಿಯಲ್ಲಿ ವೃತ್ತಿ ಸಮಾಲೋಚನೆ ಯಶಸ್ವಿ

National Defense University ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (RRU), ಶಿವಮೊಗ್ಗ ಕ್ಯಾಂಪಸ್ನಲ್ಲಿ,...

Digital library ಹೊಸ ವಿಷಯ ಕಲಿಕೆ ಸಂಗಡ ಮಕ್ಕಳು ದೈಹಿಕ & ಮಾನಸಿಕ ದೃಢತೆ ಸಾಧಿಸಬೇಕು- ವೀರೇಶ್ ಕ್ಯಾತನಕೊಪ್ಪ

Digital library ಮಕ್ಕಳಿಗೆ ಬೇಸಿಗೆ ಶಿಬಿರಗಳು ಅತ್ಯಂತ ಅವಶ್ಯಕ ಎಂದು ಸೂಗುರು...

CM siddharamaih ಪಹಲ್ಗಾಮ್ ದುರ್ಘಟನೆ‌ ಗುಪ್ತಚರ ವ್ಯವಸ್ಥೆಯ ವೈಫಲ್ಯ- ಮುಖ್ಯಮಂತ್ರಿ ಸಿದ್ಧರಾಮಯ್ಯ

CM siddharamaih ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ...