Tuesday, March 24, 2026
Tuesday, March 24, 2026

ಜಾತಿ ಆಧಾರಿತ ಹೇಳಿಕೆಗಳಿಗೆ ಜನ ಕಿಮ್ಮತ್ತು ಕೊಡುವುದಿಲ್ಲ- ಬಸವರಾಜ ಬೊಮ್ಮಾಯಿ

Date:

ಕರ್ನಾಟಕ ರಚನೆಯಾಗಿ 75 ವರ್ಷಗಳಾಗಿವೆ. ಜನ ಜಾತಿ ಆಧಾರದ ಮೇಲೆ ಮಾಡಿದ ಹೇಳಿಕೆಗಳಿಗೆ ಕಿಮ್ಮ ತ್ತು ನೀಡುವುದಿಲ್ಲ. ಆದ್ದರಿಂದ ಜನರಿಗೆ ಹಿಡಿಸದೇ ಇರುವುದನ್ನು ಮಾತನಾಡಬಾರದು. ಇಂಥ ಮಾತುಗಳಿಗೆ ಪ್ರತಿಕ್ರಿಯೆ ನೀಡಬಾರದು ಎನ್ನುವುದು ನನ್ನ ಭಾವನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು.

ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಜಾತಿ ಆಧಾರಿತ ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ. ಜನ ನಮ್ಮ ಕಾರ್ಯವೈಖರಿಯನ್ನು, ನೋಡಿ ತೀರ್ಮಾನ ಮಡುತ್ತಾರೆ. ಅವರ ಬದುಕಿಗೆ ಏನು ಸಹಾಯ ಮಾಡಿದ್ದಾರೆ, ಯಾವ ಸರ್ಕಾರ ಸಹಾಯ ಮಾಡಿದೆ, ಅನುಕೂಲವಾಗಿದೆ ಎನ್ನುವುದರ ಆಧಾರದ ಮೇಲೆ ಮತ ಹಾಕುತ್ತಾರೆ.

ಮತದಾರರು ಬಹಳ ಬುದ್ದಿವಂತರು, ಪ್ರಬುದ್ಧರು. ಮತದಾರರ ಮುಂದೆ ಸಣ್ಣ ಪುಟ್ಟ ಜಾತಿ ಮಾತುಗಳು ಯಾವುದೇ ಪ್ರಯೋಜನವಾಗುವುದಿಲ್ಲ. ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿಯವರು ತಮ್ಮ ಹೇಳಿಕೆಗೆ ¨ಬದ್ಧ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿ ಬದ್ಧರಾಗಿದ್ದರೆ ಒಳ್ಳೆಯದು ಎಂದರು.

ಬಿಜೆಪಿಯಲ್ಲಿ ಈ ಹೇಳಿಕೆಗಳಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಮತದಾರರಲ್ಲಿ ಗೊಂದಲವಿಲ್ಲ, ಬಿಜೆಪಿಯಲ್ಲಿ ಗೊಂದಲ ಏಕೆ ಇರುತ್ತದೆ ಎಂದರು.

ಶರಾವತಿ ಸಂಸತ್ರಸ್ತರ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರಸ್ತಾವನೆಗಳನ್ನು ಪಡೆದು ಕೇಂದ್ರಕ್ಕೆ ಕಳುಹಿಸಲಾಗಿದೆ. ಈ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಬಹಳ ವರ್ಷಗಳ ಬೆಡಿಕೆ ಅಂತಿಮ ಪರಿಹಾರ ನೀಡಲು ಎಲ್ಲಾ ಸಾಧ್ಯತೆಗಳಿವೆ ಎಂದರು.

ಸಿರಿಯಾ ಮತ್ತು ಟರ್ಕಿಯಲ್ಲಿ ನಡೆದ ಭೂಕಂಪದಲ್ಲಿ ಸಂಸತ್ರಸ್ತರಾಗಿರುವ ಕನ್ನಡಿಗರಿಗೆ ಸಹಾಯ ಮಾಡಲು ಈಗಾಗಲೇ ಸಹಾಯವಾಣಿ ಸ್ಥಾಪನೆಯಾಗಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದೇವೆ. ಸಾರ್ವಜನಿಕರಿಗೆ ಬಂಧುಮಿತ್ರರ ಬಗ್ಗೆ ಮಾಹಿತಿ ನೀಡಲು ಕೋರಲಾಗಿದೆ ಸಂತ್ರಸ್ತರನ್ನು ಪತ್ತೆಹಚ್ಚಲು ಕ್ರಮ ವಹಿಸಲಾಗಿದೆ. ದೆಹಲಿಯಲ್ಲಿರುವ ಕರ್ನಾಟಕದ ಆಯುಕ್ತರು ನೋಡಲ್ ಅಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದಾರೆ ಎಂದು ವಿವರಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...