Saturday, June 21, 2025
Saturday, June 21, 2025

ಹಗರಿಯಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆಗೆ ರಾಜ್ಯ ಸಂಪುಟ ಒಪ್ಪಿಗೆ

Date:

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಡಿ ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಇಂದಿನ‌ ಸಚಿವ ಸಂಪುಟ ಅಸ್ತು ಎಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಇಂದಿನ ಸಚಿವ ಸಂಪುಟದಲ್ಲಿ
ಕೃಷಿ ಸಂಶೋಧನಾ ಕೇಂದ್ರದಲ್ಲಿ, ಹೊಸ‌ಕೃಷಿ ಕಾಲೇಜು ಸ್ಥಾಪಿಸಲು ಆಡಳಿತಾತ್ಮ‌ಕ ಅನುಮೋದನೆ ದೊರೆತಿದೆ.

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬಳ್ಳಾರಿ ಜಿಲ್ಲೆಯ ಹಗರಿ ಕೃಷಿ ಸಂಶೋಧನಾ ಕೇಂದ್ರದಲ್ಲಿರುವ ಕೃಷಿ ಕಾಲೇಜು”, ಸ್ಥಾಪನೆಗೆ ಅಗತ್ಯ ಮೂಲಸೌಕರ್ಯ/ ಸಿವಿಲ್ ಕಾಮಗಾರಿಗಳನ್ನು ಕೈಗೊಳ್ಳಲು ‘ಜಿಲ್ಲಾ ಗಣಿಗಾರಿಕೆ ನಿಧಿ’ಯಿಂದ ರೂ.5 ಕೋಟಿ ಅನುದಾನವನ್ನು ಒದಗಿಸಲಾಗಿದೆ.
ಒದಗಿಸಲಾಗುವ 5 ಕೋಟಿ ರೂಪಾಯಿಗಳ ಅನುದಾನ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು 2022- 23ನೇ ಆರ್ಥಿಕ ಸಾಲಿಗೆ ಅನುಮತಿಸಿರುವ 20 ಕೋಟಿ ರೂಪಾಯಿಗಳ ಅನುದಾನದಲ್ಲಿ ಕಾಲೇಜಿಗೆ ಅಗತ್ಯವಿರುವ ಮೂಲಸೌಲಭ್ಯಗಳನ್ನು/ ಕಾಮಗಾರಿಗಳನ್ನು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಲೋಕೋಪಯೋಗಿ ಇಲಾಖೆ ಮೂಲಕ ಅನುಷ್ಠಾನಗೊಳಿಸಲು ಹಾಗೂ 2022-23ನೇ ಶೈಕ್ಷಣಿಕ ಸಾಲಿನಿಂದಲೇ 30 ವಿದ್ಯಾರ್ಥಿ ಪ್ರಮಾಣದೊಂದಿಗೆ ಸ್ಥಾಪಿಸಿ, ಸಂಶೋಧನಾ ಕೇಂದ್ರ ಮತ್ತು ಆಸುಪಾಸಿನ ಸಂಶೋಧನಾ ಕೇಂದ್ರಗಳಿಂದ ಹಾಗೂ ಡಿಪ್ಲೋಮಾ ಕಾಲೇಜಿನಲ್ಲಿ ಲಭ್ಯವಿರುವ ಬೋಧಕ/ಬೋಧಕೇತರ ಸಿಬ್ಬಂದಿಯ ಸೇವೆಯನ್ನು ರಿಡಿಪ್ಲಾಯ್‌ಮೆಂಟ್/ನಿಯೋಜನೆ/ಅತಿಥಿ ಉಪನ್ಯಾಸದಿಂದ ಬಳಸಿಕೊಂಡು “ನೂತನ ಕೃಷಿ ಕಾಲೇಜನ್ನು ಪ್ರಾರಂಭಿಸುವುದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...