Saturday, September 28, 2024
Saturday, September 28, 2024

ಸಂಕಷ್ಟ ಸಂರ್ಭದಲ್ಲಿ ಮಗುವಿಗೆ ಚಿಕಿತ್ಸಾ ಸೌಲಭ್ಯ ದೊರಕಿಸಿದ ಸಂಸದ ರಾಘವೇಂದ್ರ

Date:

ಶಿವಮೊಗ್ಗ: ಲೋ ಶುಗರ್ ಹಾಗೂ ಗ್ರೋತ್ ಆರ್ಗನ್ ಸಮಸ್ಯೆಯಿಂದ ಬಳಲುತ್ತಿದ್ದ 5 ವರ್ಷದ ಬಾಲಕನಿಗೆ ನಿರಂತರ ಚಿಕಿತ್ಸೆಗೆ ವ್ಯವಸ್ಥೆ ಮಾಡುವ ಮೂಲಕ ಸಂಸದ ಬಿ.ವೈ. ರಾಘವೇಂದ್ರ ಮಾನವೀಯತೆ ಮೆರೆದಿದ್ದಾರೆ.

ತಾಲ್ಲೂಕಿನ ಇಟ್ಟಿಗೆ ಹಳ್ಳಿ ಗ್ರಾಮದಲ್ಲಿ ಗಾರೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗಳಿಗೆ ಇಬ್ಬರು ಮಕ್ಕಳು. ಮೊದಲನೆಯವನು ಎಲ್ಲರಂತೆಯೇ ಇದ್ದರೂ ಎರಡನೆಯ ಮಗು ಶ್ರೇಯಸ್‍ಗೆ 6 ತಿಂಗಳಿನಿಂದಲೇ ವಿಚಿತ್ರ ಸಮಸ್ಯೆ ಕಾಣಿಸಿಕೊಂಡಿತ್ತು.

ಲೋ ಶುಗರ್ ನಿಂದ ಬಳಲುತ್ತಿದ್ದ. ಜೊತೆಗೆ ಗ್ರೋತ್ ಆರ್ಗನ್ ಸಮಸ್ಯೆ ಕೂಡ ಕಾಣಿಸಿಕೊಂಡಿತ್ತು. ಇದು ಮಗುವಿನ ಬೆಳವಣಿಗೆ ಕುಂಠಿತಗೊಳಿಸುತ್ತಿದ್ದಲ್ಲದೆ, ಪ್ರಾಣಾಪಾಯವೂ ಇತ್ತು.
ವೈದ್ಯರಿಗೆ ಮಗುವಿನ ಸಮಸ್ಯೆ ಏನೆಂದು ಗುರುತಿಸಲು ಮೂರು ವರ್ಷಗಳು ಬೇಕಾಯಿತು. ನಂತರ ಪ್ರತಿ ತಿಂಗಳೂ ಹತ್ತಾರು ಸಾವಿರ ರೂ.ಗಳ ಮೆಡಿಸನ್ ಮತ್ತು ಚಿಕಿತ್ಸಾ ವೆಚ್ಚ ಭರಿಸಬೇಕಾಗಿತ್ತು. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕುಟುಂಬಕ್ಕೆ ದುಬಾರಿ ಚಿಕಿತ್ಸಾ ವೆಚ್ಚ ಭರಿಸುವುದೇ ಅಸಾಧ್ಯ ಎನ್ನುವಂತಾಗಿತ್ತು. ಸದ್ಯ ಮಗುವಿಗೆ 5 ವರ್ಷ 4 ತಿಂಗಳಾಗಿದೆ. ಇನ್ನು ಚಿಕಿತ್ಸೆ ಕೊಡಿಸುವುದು ಅಸಾಧ್ಯ ಎನ್ನುವಂತಹ ಪರಿಸ್ಥಿತಿ ಎದುರಾಗಿದೆ. ಈ ಬಗ್ಗೆ ಸ್ಥಳೀಯ ಬಿಜೆಪಿ ಮುಖಂಡರು ಸಂಸದ ಬಿ.ವೈ. ರಾಘವೇಂದ್ರ ಅವರ ಗಮನ ಸೆಳೆದಿದ್ದಾರೆ.

ಸಮಸ್ಯೆಯನ್ನು ಅರಿತುಕೊಂಡ ಸಂಸದರು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ, ಮಗುವಿಗೆ 18 ವರ್ಷವಾಗುವವರೆಗೂ ಸರ್ಕಾರದಿಂದಲೇ ಚಿಕಿತ್ಸಾ ವೆಚ್ಚ ಭರಿಸಲು ಕ್ರಮ ಕೈಗೊಂಡಿದ್ದಾರೆ.
ಇಂದು ಬೆಳಿಗ್ಗೆ ಮಗುವಿಗೆ ಸರ್ಕಾರದಿಂದ ಮೊದಲ ಔಷಧಿಗಳನ್ನು ಒದಗಿಸಲಾಗಿದ್ದು, ಸಂಸದರ ಬಿ.ವೈ. ರಾಘವೇಂದ್ರ ಮಗುವಿಗೆ ಔಷಧಿ ನೀಡಿ, ಶೀಘ್ರದಲ್ಲೇ ಮಗು ಎಲ್ಲ ಮಕ್ಕಳಂತೆ ಆರೋಗ್ಯವಾಗಿರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಬಿಜೆಪಿ ರೈತಮೋರ್ಚಾ ಪ್ರಧಾನಕಾರ್ಯದರ್ಶಿ ಇಟ್ಟಿಗೆಹಳ್ಳಿ ನಾಗೇಂದ್ರ, ಪ್ರಮುಖರಾದ ಸತೀಶ್, ಚೇತನ್ ಮತ್ತಿತರರಿದ್ದರು.

ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಕೃತಜ್ಞತೆ ಸಲ್ಲಿಸಿರುವ ಮಗುವಿನ ಪೋಷಕರಾದ ರಾಘವೇಂದ್ರ ಹಾಗೂ ಅಶ್ವಿನಿ ದಂಪತಿಗಳು ಸಂಕಷ್ಟದ ಸಂದರ್ಭದಲ್ಲಿ ಸ್ಪಂದಿಸಿ, ಮಗುವಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿಸುವ ಮೂಲಕ ತಮ್ಮ ಬದುಕಲ್ಲಿ ಭರವಸೆ ಮೂಡಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shikaripura News ಅಹಿಂದ ಸಂಘಟನೆ ಕರೆ ನೀಡಿದ್ದ ಶಿಕಾರಿಪುರ ಬಂದ್ ಯಶಸ್ವಿ

Shikaripura News ನಾಡಿನ ಅಹಿಂದ ವರ್ಗಕ್ಕೆ ಸೇರಿದ ಜನರ ಹಿತ ಕಾಯುವ...

New Delhi News ಅಪಹರಣಕ್ಕೊಳಗಾಗಿದ್ದ ಬಾಲಕನೇ ಇಂದು ವಕೀಲನಾಗಿ ಅದೇ ಕಿಡ್ನಾಪರ್ಸ್ ಗೆ ಶಿಕ್ಷೆ ಕೊಡಿಸಿದ

New Delhi News ಈ ಹಿಂದೆ 7 ವರ್ಷದವನಾಗಿದ್ದಾಗ ಅಪಹರಣಕ್ಕೊಳಗಾಗಿದ್ದ ಬಾಲಕ...

Kasturi Rangan Comittee Report ಕಸ್ತೂರಿ ರಂಗನ್ ವರದಿ ತಿರಸ್ಕಾರ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

Kasturi Rangan Comittee Report ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು...

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ...