ಶಿವಮೊಗ್ಗದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಪತ್ರಿಕಾಗೋಷ್ಠಿಯನ್ನು ನಡೆಸಿದರು. ಶಿವಮೊಗ್ಗದ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಜಾಧ್ವನಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇನ್ನು ಸದ್ಯದಲ್ಲೇ ಉಳಿದ ಕ್ಷೇತ್ರಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಈ ರಾಜ್ಯದಲ್ಲಿ ಭ್ರಷ್ಟ ರಾಜಕಾರಣವನ್ನು ಕೊನೆಗೊಳಿಸಬೇಕು ಎನ್ನುವ ಮಹಾದಾಸೆಯಿಂದ ಕಾಂಗ್ರೆಸ್ ಪಕ್ಷವು ಹಲವಾರು ಕಾರ್ಯಕ್ರಮಗಳನ್ನ ಹಮ್ಮಿಕೊಳ್ಳುತ್ತಿದೆ. ಜನರು ಪ್ರೀತಿ ವಿಶ್ವಾಸ ತೋರಿಸಬೇಕು ಎಂದು ಮನವಿ ಮಾಡಿದರು.
ಜನರ ವಿಶ್ವಾಸದಂತೆ ನಾವು ಜವಾಬ್ದಾರಿಯುತವಾಗಿ ಹಲವಾರು ಯೋಜನೆಗಳನ್ನ ರೂಪಿಸಿದ್ದೇವೆ. ಕೆಲಸ ಕಾರ್ಯದಲ್ಲಿ ತೊಡಗಿದ್ದೇವೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದರೆ ಬಡವರಿಗಾಗಿ ಅನುಕೂಲಕರ ವಾಗುವಂತೆ ಕೆಲಸ ಮಾಡುತ್ತೇವೆ ಎಂದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.