Monday, February 2, 2026
Monday, February 2, 2026

ಸಮೃದ್ಧ ಭೂಮಿಯನ್ನ ಮುಂದಿನ ಪೀಳಿಗೆಗೆ ಉಳಿಸಬೇಕಿದೆ-ಡಾ.ಕೆ.ಸುಂದರ ಗೌಡ

Date:

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

ಚಿಕ್ಕಮಗಳೂರು: ಪ್ರಪಂಚದಲ್ಲಿ ಪ್ರತಿಯೊಬ್ಬರು ಶಾಂತಿ ದಾರಿಯಲ್ಲಿ ನಡೆದು, ಪ್ರೀತಿಯನ್ನು ಪರಸ್ಪರ ಹಂಚಿಕೊಂಡರೆ ಮಾತ್ರ ಮುಂದಿನ ಪೀಳಿಗೆಗೆ ಸಮೃದ್ದ ಭೂಮಿಯನ್ನು ಉಳಿಸಲು ಸಾಧ್ಯ ಎಂದು ರಾಜ್ಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಪ್ರತಿನಿಧಿ ಡಾ|| ಕೆ.ಸುಂದರಗೌಡ ಹೇಳಿದರು.

ಚಿಕ್ಕಮಗಳೂರಿನ ಸಂತ ಜೋಸೆಫರ ಕಾಲೇಜಿನಲ್ಲಿ ಯುವರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ಏರ್ಪಡಿಸಲಾಗಿದ್ದ ಪರಿಸರ ಸಂರಕ್ಷಣೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿ ಅವರು ಮಾತನಾಡುತ್ತಿದ್ದರು.

ವಿಶ್ವದ ಬಲಾಡ್ಯ ದೇಶಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಣುಬಾಂಬ್‌ಗಳಿವೆ. ಇವುಗಳ ಬಳಕೆಯಿಂದ ಪ್ರಪಂಚಕ್ಕೆ ಸಾಕಷ್ಟು ಹಾನಿಯಾಗಲಿದೆ. ಜಪಾನ್ ಹಾಗೂ ಈಚೆಗೆ ಸಿರಿಯಾದಲ್ಲಿ ಭೂಕಂಪವಾಗಿ ಸಾವಿರಾರು ಮಂದಿ ಸಾವಗೀಡಾಗಿರುವುದು ಹಾಗೂ ವಾತಾವರಣ ಕಲುಷಿತವಾಗಲು ಮೂಲ ಕಾರಣ ಅಣುಬಾಂಬ್ ಬಳಕೆ ಎಂದು ಹೇಳಿದರು.

ಮನುಷ್ಯ ಭೂಮಿಯಿಂದ ಗಾಳಿ, ನೀರು, ಆಹಾರಗಳನ್ನು ಪಡೆದುಕೊಳ್ಳುತ್ತಿದ್ದಾನೆ. ಹೊರತು ಪರಿಸರಕ್ಕೆ ಪೂರಕವಾಗಿಲ್ಲ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ನಾಗರೀಕರು ಭೂಮಿಯ ಋಣ ತೀರಿಸುವ ಸಲುವಾಗಿ ಪಣ ತೊಡಬೇಕು. ಪರಿಸರಕ್ಕೆ ಹಾನಿಯಾಗುವುದರ ವಿರುದ್ಧ ಹೋರಾಡಬೇಕು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಮುಂಜಾಗ್ರತಾ ಕ್ರಮ ವಹಿಸಿದ್ದಲ್ಲಿ ಉಸಿರಾಟಕ್ಕೆ ತೊಂದರೆಯಾಗಿ ಗಾಳಿಯನ್ನು ಸಿಲಿಂಡರ್ ಮಾದರಿಯಲ್ಲಿ ಖರೀದಿಸಿ ಉಸಿರಾಡಬೇಕಾಗುವ ಸಂಭವವಿದೆ. ಆ ಹಿನ್ನೆಲೆಯಲ್ಲಿ ಪರಿಸರ ಕಾಪಾಡುವಲ್ಲಿ ನಾವುಗಳು ಶ್ರಮವಹಿಸಿದ್ದಲ್ಲಿ ವಿಶ್ವವು ಅಳಿವಿನ ಹಂಚಿಗೆ ತಲುಪಬಹುದು ಎಂದು ಎಚ್ಚರಿಸಿದರು.

ವಿದ್ಯಾರ್ಥಿನಿ ಇಕ್ರಾ ಮೆಹ್ತಾ ಮಾತನಾಡಿ, ಪರಿಸರ ರಕ್ಷಣೆ ಬಗ್ಗೆ ನಾವು ಗಮನಹರಿಸದಿದ್ದಲ್ಲಿ ನೆರೆ ದೇಶಗಳಲ್ಲಿ ಆಹಾರ ಸಮಸ್ಯೆ ಮತ್ತು ಭೂಕಂಪದಂತಹ ದುರ್ಘಟನೆಯನ್ನು ಎದುರಿಸಬಹುದು. ಆದ್ದರಿಂದ ನಾವುಗಳು ಇಂದಿನಿಂದಲೇ ಪಣತೊಟ್ಟು ಪರಿಸರ ಬಗ್ಗೆ ಕಾಳಜಿ ವಹಿಸಿ ಸೂಕ್ತ ನಿರ್ಧಾರ ತೆಗೆದುಕೊಂಡು ಸಂರಕ್ಷಣೆಗೆ ಮುಂದಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾಧ್ಯಕ್ಷ ಆರ್.ಶ್ರೀನಿವಾಸ್, ಕಾಲೇಜಿನ ಪ್ರಾಂಶುಪಾಲ ವಿನ್ಸಲ್ ಕಾರ್‌ಡೋಸ್, ಯುವ ರೆಡ್‌ಕ್ರಾಸ್ ಸಂಸ್ಥೆ ಸಂಯೋಜಕ ವಿನಯ್‌ಕುಮಾರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿ ತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...