Tuesday, March 24, 2026
Tuesday, March 24, 2026

ಸಾಗರ ಮಾರಿಕಾಂಬೆ ಜಾತ್ರಾಸಮಿತಿ ಮತ್ತು ಸ್ನೇಹಿತರು ಸಾಗರ ಸಂಸ್ಥೆಯಿಂದ ಅನ್ನ ದಾಸೋಹ ವ್ಯವಸ್ಥೆ

Date:

ಸಾಗರ: ಅತ್ಯಂತ ವೈಭವಯುತವಾಗಿ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬಾ ಜಾತ್ರೆ ನಡೆಯುತ್ತಿದೆ. ಪ್ರತಿ ದಿನವು ಸಾವಿರಾರು ಜನರು ಆಗಮಿಸಿ ಶ್ರೀ ಮಾರಿಕಾಂಬಾ ದೇವರ ದರ್ಶನ ಪಡೆಯುತ್ತಿದ್ದಾರೆ. ಶುಕ್ರವಾರ, ಶನಿವಾರ ಸಹ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿ ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ಪ್ರತಿ ದಿನ ದೇವರ ದರ್ಶನ ಪಡೆಯಲು ಆಗಮಿಸುವ ಸಾರ್ವಜನಿಕರಿಗೆ ಶ್ರೀ ಮಾರಿಕಾಂಬಾ ಜಾತ್ರಾ ಸಮಿತಿಯಿಂದ ನಿರಂತರ ಅನ್ನ ಸಂತರ್ಪಣೆ ನಡೆಯುತ್ತಿದೆ. ಜಾತ್ರಾ ಸಮಿತಿ ನಡೆಯುತ್ತಿರುವ ಅನ್ನ ಸಂತರ್ಪಣೆಯಲ್ಲಿ ಪಾಲ್ಗೊಂಡ ಜನರು ಅಚ್ಚುಕಟ್ಟಾದ ವ್ಯವಸ್ಥೆಗೆ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಸಾಗರ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಶ್ರೀ ಮಾರಿಕಾಂಬ ಜಾತ್ರೆ ಪ್ರಯುಕ್ತ ಆರಂಭದ ಮೊದಲ ದಿನದಿಂದಲೂ ಜನರಿಗೆ ತಿಂಡಿ, ಊಟದ ವ್ಯವಸ್ಥೆ ಮಾಡಲಾಗಿದೆ. ದಿನ ನಿತ್ಯ ಬೆಳಗ್ಗೆ, ಮಧ್ಯಾಹ್ನ ಹಾಗೂ ರಾತ್ರಿ ಸೇರಿದಂತೆ ಒಟ್ಟಾರೆ 8 ರಿಂದ 10 ಸಾವಿರಕ್ಕೂ ಅಧಿಕ ಜನರು ಅನ್ನ ಸಂತರ್ಪಣೆಯಲ್ಲಿ ತಿಂಡಿ, ಊಟ ಮಾಡುತ್ತಿದ್ದಾರೆ.
ಶ್ರೀ ಮಾರಿಕಾಂಬ ಜಾತ್ರಾ ಸಮಿತಿಯಿಂದ ದಾಸೋಹ ಸಮಿತಿ ರಚಿಸಿದೆ.
ಸಂಚಾಲಕ ವಿನಾಯಕ್ ಗುಡಿಗಾರ್, ಸಹ ಸಂಚಾಲಕ ನಿತ್ಯಾನಂದ ಶೆಟ್ಟಿ, ಭಾಸ್ಕರ್ ಆಚಾರ್ ಸೇರಿದಂತೆ 15-20 ಜನರ ತಂಡ ಅನ್ನ ಸಂತರ್ಪಣೆ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.

ಅಡುಗೆ ಭಟ್ಟರು ಹಾಗೂ ಸೇವಾ ಕಾರ್ಯಕರ್ತರು ಶ್ರೀ ಮಾರಿಕಾಂಬಾ ಜಾತ್ರೆಯ ದಾಸೋಹ ಕಾರ್ಯದಲ್ಲಿ ಸೇವೆ ಮಾಡುತ್ತಿದ್ದಾರೆ.

ಮಾರಿಕಾಂಬಾ ಜಾತ್ರೆಯ ಪ್ರಯುಕ್ತ ನಡೆಯುತ್ತಿರುವ ದಾಸೋಹ ಕಾರ್ಯವು ಪ್ರತಿ ದಿನವು ವೈವಿಧ್ಯ ತಿಂಡಿ, ಸಿಹಿ ತಿನಿಸುಗಳನ್ನು ವಿತರಿಸಲಾಗುತ್ತಿದೆ. ಬೆಳಗ್ಗೆ ತಿಂಡಿಯಲ್ಲಿ ಕೇಸರಿಬಾತ್, ಉಪ್ಪಿಟ್ಟು, ಪಲಾವ್, ಚಿತ್ರಾನ್ನ, ಪುಳಿಯೋಗರೆ, ಅವಲಕ್ಕಿ ಪುಳಿಯೋಗರೆ, ಟೀ, ಕಾಫಿ ವಿತರಿಸಲಾಗುತ್ತಿದೆ.
ಮಧ್ಯಾಹ್ನ ಹಾಗೂ ರಾತ್ರಿ ನಡೆಯುವ ಊಟದ ವ್ಯವಸ್ಥೆಯಲ್ಲಿ ಪ್ರತಿ ದಿನ ಅಡುಗೆಯಲ್ಲಿ ಸಿಹಿ ತಿನಿಸು, ಪಲ್ಯ, ಅನ್ನ ಸಾಂಬರ್, ಮಜ್ಜಿಗೆ, ಉಪ್ಪಿನಕಾಯಿ ನೀಡಲಾಗುತ್ತಿದೆ. ಊಟದ ಸಿಹಿತಿನಿಸುವಿನಲ್ಲಿ ಕೇಸರಿಬಾತ್, ಪಾಯಸ, ಗೋದಿ ಪಾಯಸ, ಮೈಸೂರು ಪಾಕ್ ಹೋಳಿಗೆ ಸೇರಿದಂತೆ ದಿನಕ್ಕೊಂದು ಸಿಹಿ ನೀಡಲಾಗುತ್ತಿದೆ. ಕುಡಿಯುವ ನೀರಿನ ವ್ಯವಸ್ಥೆ ಅಚ್ಚುಕಟ್ಟಾಗಿ ಮಾಡಲಾಗಿದೆ. ಜಾತ್ರೆಯಲ್ಲಿ ದಿನಪೂರ್ತಿ ನಿಂತು ಕೆಲಸ ಮಾಡುವ ಪೊಲೀಸ್, ಹೋಂಗಾರ್ಡ್ ಸಿಬ್ಬಂದಿಗೆ ಕುಳಿತು ಊಟ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ.
ಫೋಟೋ
ಸಾಗರದ ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುತ ನಡೆಸುತ್ತಿರುವ ಅನ್ನಸಂತರ್ಪಣೆ.
ಬಾಕ್ಸ್
ಸ್ನೇಹಿತರು ಸಾಗರದಿಂದ ಅನ್ನದಾನ
ಪ್ರತಿ ಮೂರು ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆಯ ಪ್ರಯುಕ್ತ ಸಾಗರ ಹೊಟೇಲ್ ವೃತ್ತದ ನಗರಸಭೆ ಸಂಕೀರ್ಣದಲ್ಲಿ “ಸ್ನೇಹಿತರು ಸಾಗರ” ಸಂಸ್ಥೆ ವತಿಯಿಂದಲೂ ಪ್ರತಿ ದಿನ ಮಧ್ಯಾಹ್ನ ಊಟ ಉಚಿತವಾಗಿ ವಿತರಿಸಲಾಗುತ್ತಿದೆ. ಜಾತ್ರೆಯ ಒಂಬತ್ತು ದಿನಗಳ ಕಾಲವು ಮಧ್ಯಾಹ್ನ ಊಟ ನೀಡಲಾಗುತ್ತಿದೆ. 12-13 ಜಾತ್ರೆಗಳಿಂದಲೂ ಸ್ನೇಹಿತರು ಸಾಗರ ಸಂಸ್ಥೆಯು ಸಾರ್ವಜನಿಕರಿಗೆ ಊಟ ವಿತರಿಸುವ ಕಾರ್ಯ ನಡೆಸುತ್ತಿದೆ. ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯು ಕಲ್ಪಿಸಿದೆ. ಜಾತ್ರೆಗೆ ಆಗಮಿಸುವ ಸಾವಿರಾರು ಜನರು ನಿತ್ಯ ದಾಸೋಹದಲ್ಲಿ ಭಾಗಿಯಾಗುತ್ತಿದ್ದಾರೆ.

ಕಲಾಸಿರಿ ಕಾರ್ಯಕ್ರಮ ಫೆ. 12
ಸಾಗರದ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ನಿರ್ಮಿಸಿರುವ ನಗರಸಭೆ ಆವರಣದ ಮಾರಿಕಾಂಬಾ ಕಲಾವೇದಿಕೆಯಲ್ಲಿ ಫೆ. 12ರ ಸಂಜೆ ಕಲಾಸಿರಿ ಕಾರ್ಯಕ್ರಮ ನಡೆಯಲಿದೆ. ಫೆ. 12ರ ಸಂಜೆ 5.30ರಿಂದ 6ರವರೆಗೆ ಕಲ್ಲುಕೊಪ್ಪ ಹೆಗ್ಗೋಡು ಹಾಲ್ದೀಪ ಚಂಡೆ ಬಳಗದಿಂದ ಚಂಡೆ ವಾದನ, ಸಂಜೆ 6ರಿಂದ 6.15 ರವರೆಗೆ ಸ್ನೇಹ ಸಾಗರ ಬಳಗದಿಂದ ಲಂಬಾಣಿ ನೃತ್ಯ, 6.15ರಿಂದ 7 ರವರೆಗೆ ತೀರ್ಥಹಳ್ಳಿ ವಿಭಾ ಪ್ರಕಾಶ ಅವರಿಂದ ಸುಗಮ ಸಂಗೀತ, ರಾತ್ರಿ 7 ರಿಂದ 7.45 ರವರೆಗೆ ಮೈಸೂರು ಡಾ. ಕುಮಾರ್ ಅವರಿಂದ ಭರತನಾಟ್ಯ, 7.45 ರಿಂದ 9 ರವರೆಗೆ ಬೆಂಗಳೂರು ಶಶಿಧರ್ ಕೋಟೆ ಅವರಿಂದ ಸಂಗೀತ ಸಂಭ್ರಮ, ನಂತರ ಡಾ. ಪದ್ಮಿನಿ, ಶ್ರೀನಿವಾಸ, ರಜನಿ, ಉದಯ ಅಂಕೋಲ ಅವರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...