Sunday, August 23, 2026
Sunday, August 23, 2026

ಕನ್ನಡ ನಟಿ ಪ್ರೇಮಾ: ಸಿನಿಮಾ ಬದುಕಿನ ಬೆಳ್ಳಿಹಬ್ಬದ ಸಡಗರ

Date:

ಶಿವಮೊಗ್ಗ: ನಟಿ ಪ್ರೇಮಾ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷ ಪೂರೈಸಿ ಬೆಳ್ಳಿ ಹಬ್ಬ ಸಂಭ್ರಮದಲ್ಲಿರುವ ಪ್ರಯುಕ್ತ ಸಮನ್ವಯ ಟ್ರಸ್ಟ್ ವತಿಯಿಂದ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಫೆಬ್ರವರಿ 19ರ ಸಂಜೆ 6ಕ್ಕೆ “ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ” ಕಾರ್ಯಕ್ರಮ ಆಯೋಜಿಸಲಾಗಿದೆ.

ನಾಯಕ ನಟರು 25 ವರ್ಷ ಪೂರೈಸಿ ಚಲನಚಿತ್ರರಂಗದಲ್ಲಿ ಯಶಸ್ವಿಯಾಗುವುದು ಸಾಮಾನ್ಯ. ಆದರೆ ನಾಯಕ ನಟಿಯರು 25 ವರ್ಷ ಪೂರ್ಣಗೊಳಿಸುವುದು ಕಷ್ಟದ ಮಾತು. ನಟಿ ಪ್ರೇಮಾ ಅವರು ಚಿತ್ರರಂಗದಲ್ಲಿ 25 ವರ್ಷ ಪೂರೈಸಿ ಪ್ರಸ್ತುತ ಕೂಡ ಸಕ್ರಿಯರಾಗಿ ಕಾರ್ಯ ನಿರ್ವಹಿಸುತ್ತಿದೆ. ಉತ್ತಮ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.
ಸವ್ಯಸಾಚಿ ಸಿನಿಮಾ ಮುಖಾಂತರ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರೇಮಾ, ಓಂ ಚಿತ್ರದ ಮೂಲಕ ಪ್ರಖ್ಯಾತರಾದರು.

ಶಿವರಾಜ್‌ಕುಮಾರ್, ವಿಷ್ಣುವರ್ಧನ್, ಉಪೇಂದ್ರ, ರವಿಚಂದ್ರನ್, ಸಾಯಿಕುಮಾರ್, ರಮೇಶ್ ಜತೆಯಲ್ಲಿ ಬಹುತೇಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ತಮಿಳು, ತೆಲುಗು, ಮಲಯಾಳಂ ಸಿನಿಮಾಗಳಲ್ಲಿಯೂ ಅಭಿನಯಿಸಿದ್ದಾರೆ.

ಅತ್ಯಂತ ಅಪರೂಪ ಮತ್ತು ವಿಶೇಷವಾದ ಕಾರ್ಯಕ್ರಮ ಶಿವಮೊಗ್ಗದಲ್ಲಿ ಆಯೋಜನೆ ಆಗುತ್ತಿದೆ. 25 ವರ್ಷ ಪೂರೈಸಿ ಸಕ್ರಿಯರಾಗಿ ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ ನಟಿ ಪ್ರೇಮಾ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಇದಾಗಿದೆ. ಸಿನಿಮಾ ರಂಗದ ಹಿರಿಯ ನಿರ್ದೇಶಕರು, ನಟರು, ಕಲಾವಿದರು, ಗಣ್ಯರು ಪಾಲ್ಗೊಳ್ಳುವರು. ಕುವೆಂಪು ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದ ಉಚಿತ ಪಾಸ್‌ಗಳನ್ನು ಪಡೆದುಕೊಳ್ಳುವಂತೆ ಸಮನ್ವಯ ಟ್ರಸ್ಟ್ ನಿರ್ದೇಶಕ ಸಮನ್ವಯ ಕಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಿತ ಪಾಸ್ ಗಳಿಗೆ ಸಂಪರ್ಕಿಸಿ
ಶಿವಮೊಗ್ಗ ನಗರದ ಕುವೆಂಪು ರಂಗಮಂದಿರದಲ್ಲಿ ಫೆಬ್ರವರಿ 19ರ ಸಂಜೆ 6ಕ್ಕೆ ಆಯೋಜಿಸಿರುವ “ಶ್ರೀಗಂಧದ ಗೊಂಬೆಗೆ ಬಿರುದು ಸನ್ಮಾನ” ಕಾರ್ಯಕ್ರಮಕ್ಕೆ ಪಾಸ್ ಕಡ್ಡಾಯವಾಗಿದೆ. ಉಚಿತ ಪಾಸ್‌ಗಳನ್ನು ಪಡೆಯಲು ಇಚ್ಚಿಸುವ ಆಸಕ್ತರು ಮೊಬೈಲ್ ಸಂಖ್ಯೆ 9380233123 ಸಂಪರ್ಕಿಸಬಹುದಾಗಿದೆ.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K. Shivakumar 500 ಕೆಪಿಎಸ್ ಶಾಲೆಗಳನ್ನ ಸಮಗ್ರ ಉನ್ನತೀಕರಿಸುವ “ಶಿಕ್ಷಣ ಕ್ರಾಂತಿ-2030″ಯೋಜನೆಗೆ ಹೆಜ್ಜೆಯಿಟ್ಟಿದ್ದೇವೆ,- ಡಿ.ಕೆ.ಶಿವಕುಮಾರ್.

D.K. Shivakumar ನಮ್ಮ ಹಳ್ಳಿಯ ಮಣ್ಣಿನ ಪ್ರತಿಭೆಗಳು ವಿಶ್ವದಂಗಳದಲ್ಲಿ ರಾರಾಜಿಸಬೇಕು, ಅವರಿಗೆ ಅತ್ಯುನ್ನತ...

B.Y. Raghavendra “ಸರ್ಕಾರಿ ಶಾಲೆಗೆ ನೀವು ಸಲ್ಲಿಸಿರುವ ಅಪಾರಸೇವೆಗೆ ದೊರೆತ ಅರ್ಹ ಗೌರವ”- ಬಿ.ವೈ.ರಾಘವೇಂದ್ರ.

B.Y. Raghavendra ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿರುವ...

Shivamogga News ಹರಕೆರೆ ರಿಂಗ್ ರಸ್ತೆಯಲ್ಲಿ ದರೋಡೆ ಮಾಡಿದ್ದ ಖದೀಮರು ಈಗ ‘ಅಂದರ್’.

Shivamogga News ಹರಕೆರೆ ರಿಂಗ್‌ರೋಡ್‌ನಲ್ಲಿ ಸಾರ್ವಜನಿಕರನ್ನು ಬೆದರಿಸಿ, ಹಲ್ಲೆ ನಡೆಸಿ ಹಣ...

D. Devaraj Arasu ದೇವರಾಜ ಅರಸು ಅವರಿಗೆ ನಮ್ಮರೈತರು ಚಿರ ಋಣಿಯಾಗಿರಬೇಕು – ಬಿ.ಆರ್.ಜಯಂತ್.

D. Devaraj Arasu  1974ರ ಭೂ ಸುಧಾರಣಾ ಕಾಯ್ದೆಗೆ ಐತಿಹಾಸಿಕ ಮಹತ್ವವಿದ್ದು,...