Monday, December 15, 2025
Monday, December 15, 2025

Ashwath Narayan ಪ್ರಚೋದನಕಾರಿ ಹೇಳಿಕೆ: ಸಚಿವ ಅಶ್ವತ್ಥನಾರಾಯಣ್ ವಿರುದ್ಧ ಪ್ರತಿಭಟನೆ

Date:

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಾಡು ಕಂಡ ಅಪ್ರತಿಮ ಹಿಂದುಳಿದ ವರ್ಗಗಳ ನಾಯಕರಾಗಿದ್ದು, ಇಂತಹ ವ್ಯಕ್ತಿಯನ್ನು ಟಿಪ್ಪುವನ್ನು ಹೊಡೆದಂತೆ ಹೊಡೆದು ಹಾಕಬೇಕು ಎಂದು ಮಾನಸಿಕ ಅಸ್ವಸ್ಥನಂತೆ ಸಚಿವ ಅಶ್ವತ್ಥ್ ನಾರಾಯಣ್ ಬಹಿರಂಗ ಹೇಳಿಕೆ ನೀಡಿರುವುದು ಖಂಡನೀಯ ಎಂದು ತಿಳಿಸಿದರು.

Ashwath Narayan ಇತ್ತೀಚೆಗೆ ಅಶ್ವತ್ಥ್ ನಾರಾಯಣ್ ಮಾನಸಿಕ ದಿವಾಳಿತನ ಹಾಗೂ ಹತಾಶೆಯಿಂದ ಬಳಲುತ್ತಿದ್ದಾರೆ. ಕಳೆದ ಹಲವು ದಿನಗಳಿಂದ ಪ್ರಜ್ಞಾಹೀನ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದೀಗ ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ರಾಜ್ಯದ ಜನತೆಗೆ ತಪ್ಪು ಸಂದೇಶ ಹೋಗುತ್ತದೆ. ಹಾಗಾಗಿ ಇವರ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿದಾರರು ಆಗ್ರಹಿಸಿದರು.

ಸಿದ್ದರಾಮಯ್ಯ ಪ್ರಸ್ತುತ ಸಂದರ್ಭದಲ್ಲಿ ಬಿಜೆಪಿಯ ದಮನಕಾರಿ ರಾಜಕಾರಣವನ್ನು ಪ್ರಬಲವಾಗಿ ವಿರೋಧಿಸುತ್ತಾ ಧ್ವನಿಯಿಲ್ಲದ ಸಮುದಾಯಗಳ ಅಗ್ರಮಾನ್ಯ ನಾಯಕರಾಗಿ ಕರ್ನಾಟಕ ರಾಜಕಾರಣದಲ್ಲಿ ವಿಜೃಂಭಿಸುತ್ತಿದ್ದಾರೆ. ಇಂತಹ ವ್ಯಕ್ತಿಯ ಹತ್ಯೆಗೆ ಮೊದಲಿನಿಂದಲೂ ಸಂಚು ರೂಪಿಸಲಾಗುತ್ತಿದೆ. ಇದೀಗ ಒಬ್ಬ ಜವಬ್ದಾರಿಯುತ ಸಚಿವ ಬಹಿರಂಗವಾಗಿಯೇ ಕೊಲೆಗೆ ಪ್ರಚೋದನೆ ನೀಡಿರುವುದು ಇದಕ್ಕೆ ನಿದರ್ಶನವಾಗಿದೆ ಎಂದು ಆರೋಪಿಸಿದರು.

ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿರುವ ಸಚಿವ ಅಶ್ವತ್ಥ್ ನಾರಾಯಣ್ ವಿರುದ್ಧ ಕೂಡಲೇ ಎಫ್‌ಐಆರ್ ದಾಖಲಿಸಿ, ಬಂಧಿಸಬೇಕು. ಸರ್ಕಾರ ಶೀಘ್ರವೇ ಇಂತಹ ನಾಲಾಯಕ್ ಸಚಿವನ ವಿರುದ್ಧ ಕಠಿಣ ಕ್ರಮಕೈಗೊಂಡು ಸಚಿವ ಸ್ಥಾನದಿಂದ ಕಿತ್ತೊಗೆಯಬೇಕು. ಇಲ್ಲವಾದರೇ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷರಾದ ರಮೇಶ್ ಇಕ್ಕೇರಿ, ನಗರ ಅಧ್ಯಕ್ಷರಾದ ಮೋಹನ್, ಕೆಪಿಸಿಸಿ ಕಾರ್ಯದರ್ಶಿಯಾದ ದೇವೇಂದ್ರಪ್ಪ, ಯುವ ಕಾಂಗ್ರೆಸ್ ನಗರದ ಅಧ್ಯಕ್ಷರಾದ ವಿನಯ್, ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರಾದ ಮಧು ಕುಮಾರ್, ಯುವ ಮುಖಂಡರುಗಳಾದ ಶರತ್, ವಿನಯ್ ಪ್ರದೀಪ್, ಅರುಣ, ಪ್ರಮೋದ್ರ, ರಾಜೇಶ್, ಗಿರೀಶ , ಸಂದೀಪ್, ಭರತ್, ಧನಂಜಯ್, ದರ್ಶನ್, ಸಚಿನ್, ಇನ್ನೂ ಹಲವರು ಮುಖಂಡರುಗಳು ಇದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...