Saturday, December 6, 2025
Saturday, December 6, 2025

Shimogga Airport ವಿಮಾನ ನಿಲ್ದಾಣಕ್ಕೆ ಜಮೀನು ಕೊಟ್ಟ ರೈತರಿಗೆ ಪರಿಹಾರ ನೀಡಿ ಉದ್ಘಾಟನೆ ಮಾಡಿ-ತೀ.ನಾ.ಶ್ರೀನಿವಾಸ್

Date:

Shimogga Airport  ಜಿಲ್ಲೆಯ ಸಂಸದ, ಶಾಸಕರಿಗೆ ಆತ್ಮಸಾಕ್ಷಿ ಇದ್ದರೆ ಶರಾವತಿ ಮುಳುಗಡೆ ಸಂತ್ರಸ್ತರಿಗೆ ವಿಮಾನ ನಿಲ್ದಾಣ ಉದ್ಘಾಟ ನಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈಯಲ್ಲಿ ಹಕ್ಕು ಪತ್ರ ಕೊಡಿಸಬೇಕು ಎಂದು ಮಲೆನಾಡು ರೈತ ಹೋರಾಟ ಸಮಿತಿ ಪ್ರಮುಖರಾದ ತಿ.ನಾ. ಶ್ರೀನಿವಾಸ್ ಆಗ್ರಹಿಸಿದರು.

Shimogga Airport  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಕೇಂದ್ರ ಮತ್ತು ರಾಜ್ಯ ಸರಕಾರ ಮಲೆನಾಡಿನ ಸಮಸ್ಯೆಗಳ ಬಗ್ಗೆ ಗಂಭೀರವಾಗಿಲ್ಲ. ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ರೈತರಿಗೆ ಈವರೆಗೆ ಪರಿಹಾರ ನೀಡಿಲ್ಲ.. ಇವರೆಲ್ಲರಿಗೂ ಪರಿಹಾರ ನೀಡಿ, ನಂತರ ವಿಮಾನ ನಿಲ್ದಾಣ ಉದ್ಘಾಟನೆ ಮಾಡಬೇಕು ಎಂದರು.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಗೆ ಬಂದಾಗ ಮಲೆನಾಡಿನ ಸಮಸ್ಯೆಗಳನ್ನು ಪರಿಹರಿಸುವ ಭರವಸೆ ನೀಡಿದ್ದರು. ಆದರೆ, ಆ ಎಲ್ಲ ಭರವಸೆಗಳು ಹುಸಿಯಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಆಡಳಿತದ ಸರಕಾರವಿ ದ್ದರೂ ಜಿಲ್ಲೆಯ ಜನಪ್ರತಿನಿಧಿಗಳಿಗೆ ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿ ಸಲು ಆಗಿಲ್ಲ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಪ್ರೀತ್‌ ನಾಯ್ಕ, ಕುಮಾರ್ ನಾಯ್ಕ್, ತೀರ್ಥಾ ನಾಯ್ಕ್ ಮತ್ತು ಜೈ ರಾಮ್ , ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...