Tuesday, April 22, 2025
Tuesday, April 22, 2025

Importance of Books ವಿದ್ಯೆ ಕೇವಲ ಪುಸ್ತಕದ ಮಾಹಿತಿಯಲ್ಲ-ಡಾ.ಮೋಹನ್ ಕುಮಾರ್

Date:

Importance of Books ವಿದ್ಯೆ ಎಂಬುದು ಕೇವಲ ಪುಸ್ತಕದ ಮಾಹಿತಿಯಲ್ಲ ಬದಲಿಗೆ ವಿವೇಕ, ಪ್ರಜ್ಞೆ, ಬುದ್ದಿವಂತಿಕೆ ಹಾಗೂ ಸಂಸ್ಕೃತಿ ಕಲೆಯನ್ನು ಒಳಗೊಂಡಿರುವ ಸಾಧನ ಎಂದು ಕಳಸ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಡಾ|| ಸಿ.ಆರ್.ಮೋಹನ್ ಕುಮಾರ್ ಹೇಳಿದರು.

ಚಿಕ್ಕಮಗಳೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಶ್ರೀ ಶಾರದಾ ಪೂಜಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು.
ವಿದ್ಯೆಯನ್ನು ಆರಾಧಿಸುವ ಮೂಲಕ ವಿದ್ಯೆ ವಿವೇಕಗಳನ್ನು ಪಡೆಯಲು ಸಾಧ್ಯ ಎಂಬ ನಂಬಿಕೆಯಿಂದ ಶಾರದದೇವಿಯನ್ನು ಪೂಜಿಸುತ್ತೇವೆ ಎಂದ ಅವರು ವಿದ್ಯೆ ಸಿದ್ದಿಸುವ ಮುಖ್ಯ ಗುರಿ ವಿನಯ, ಇದು ಒಂದು ತಪಸ್ಸು ಜೊತೆಗೆ ನಿರಂತರ ಕಠಿಣ ಶ್ರಮ ಅಗತ್ಯ. ಉತ್ತಮ ಗುರುವಿನ ಮಾರ್ಗದರ್ಶನದಿಂದ ಉತ್ತಮ ಜೀವನ ರೂಪಿಸಿಕೊ ಳ್ಳಬಹುದು ಎಂದರು.

Importance of Books ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಸುಜಯ ಸದಾನಂದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳು ಒಳ್ಳೆಯ ಸಂಸ್ಕಾರವನ್ನು ಮೈಗೂಡಿಸಿಕೊಂಡು. ಜೊತೆಗೆ ಜೀವನದಲ್ಲಿ ಬಂದಂತಹ ಅವಕಾಶ ಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಹೊರಹೊಮ್ಮಬೇಕು ಎಂದರು.

ಶಾಲಾ ಸಮಿತಿ ಸದಸ್ಯ ರಿಜ್ವನ್ ಮಾತನಾಡಿ ವಿದ್ಯಾರ್ಥಿಗಳು ಕಲಿಕಾ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಕರೆ ನೀಡಿದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ ಮಾತನಾಡಿ ಮಕ್ಕಳು ವಿದ್ಯಾಭ್ಯಾಸದ ಜೊತೆಗೆ ತಂದೆ ತಾಯಿ, ಗುರುಹಿರಿಯರನ್ನು ಗೌರವಿಸಿ ಜೀವನದಲ್ಲಿ ಯಾವುದೇ ದುಡುಕಿನ ನಿರ್ಧಾರವನ್ನು ಮಾಡಬಾರದು ಎಂದರು.

ಇದೇ ವೇಳೆ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಸಮಿತಿ ಸದಸ್ಯರಾದ ವಸಂತ್, ರೂಪ ಶ್ರೀ, ಚೈತ್ರಶ್ರೀ, ಪ್ರಮೀಳಾ, ಕವಿತಾ ಶಿಕ್ಷಕಿರಾದ ಶ್ರೀದೇವಿ, ಶುಭ, ಲಲಿತ, ನಾಗರತ್ನ, ರಂಜಿತಾ, ರೇಖಾ, ಶೈಲಾ, ಹಾಗೂ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ವೀಣಾ ಸ್ವಾಗತಿಸಿದರು. ನಗ್ಮ್ ಬಾನು ವಂದಿಸಿದರು. ಪುರುಷೋತ್ತಮ ನಿರೂಪಿಸಿದರು‌.

Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಎಲ್ಲಾ ತಾಲ್ಲೂಕುಗಳಲ್ಲಿ ಜನಸ್ಪಂದನ ಕಾರ್ಯಕ್ರಮ- ಮಧು ಬಂಗಾರಪ್ಪ

Madhu Bangarappa ಜನರ ಸಮಸ್ಯೆಗಳನ್ನು ಆಲಿಸಿ, ಶೀಘ್ರ ಪರಿಹಾರ ದೊರಕಿಸಲು...

Fisheries project 2024-25ನೇ ಸಾಲಿನ ಮತ್ಸ್ಯಸಂಪದ ಯೋಜನೆಗೆ ಅರ್ಹರಿಂದ ಅರ್ಜಿ ಆಹ್ವಾನ

Fisheries project 2024-25 ನೇ ಸಾಲಿನ ಪ್ರಧಾನ ಮಂತ್ರಿ ಮತ್ಯ್ಸ ಸಂಪದ...

Ravi Telex ಪತ್ರಕರ್ತ‌ “ಟೆಲೆಕ್ಸ್ ರವಿ ” ಗೆ ಅಬ್ದುಲ್ಲ ಮಾದುಮೂಲೆ ದತ್ತಿ ಪ್ರಶಸ್ತಿ

Ravi Telex ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದ...

Inner Wheel East Shimoga ಆಶ್ರಮವಾಸಿಗಳ ಸೇವೆ ,ದೇವರ ಸೇವೆಗೆ ಸಮ- ವಾಗ್ದೇವಿ ಬಸವರಾಜ್

Inner Wheel East Shimoga ಆಶ್ರಮವಾಸಿಗಳ ಸೇವೆ ದೇವರ ಸೇವೆಗೆ ಸಮಾನ....