Thursday, April 24, 2025
Thursday, April 24, 2025

Shivamogga Freedom Park ಶಿವಮೊಗ್ಗದ ಫ್ರೀಡಂ ಪಾರ್ಕಿನಲ್ಲಿ ಮೂಲಭೂತ ಸೌಕರ್ಯಕ್ಕೆ ಮನವಿ

Date:

Shivamogga Freedom Park ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಫ್ರೀಡಂ ಪಾರ್ಕ್ ನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಹಾಗೂ ಫ್ರೀಡಂ ಪಾರ್ಕ ಅನ್ನು ಸರಿಯಾಗಿ ನಿರ್ವಹಣೆ ಮಾಡುವಂತೆ ಮನವಿ ಮಾಡಲಾಯಿತು.

Shivamogga Freedom Park ರಾಜ್ಯ ನಾಗರೀಕರ ರಕ್ಷಣಾ ಸಮಿತಿ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಫ್ರೀಡಂ ಪಾರ್ಕ್ ನಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಹಾಗೂ ಫ್ರೀಡಂ ಪಾರ್ಕ ಅನ್ನು ಸರಿಯಾಗಿ ನಿರ್ವಹಣೆ ಮಾಡುವಂತೆ ಮನವಿ ಮಾಡಲಾಯಿತು.
ನಗರದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್ ನಲ್ಲಿ ಪ್ರತಿನಿತ್ಯ ಸಾವಿರಾರು ಜನ ವಾಕಿಂಗ್ ಅನ್ನು ಮಾಡುತ್ತಾರೆ ಈ ಸಂದರ್ಭದಲ್ಲಿ ಕನಿಷ್ಠ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಶೌಚಾಲದ ವ್ಯವಸ್ಥೆ ಇಲ್ಲ ನೋಡಲು ಕುಡಿಯುವ ನೀರಿನ ವ್ಯವಸ್ಥೆ ಇದ್ದು ಅದರಲ್ಲಿ ನೀರೆ ಬರುವುದಿಲ್ಲ ಹಾಗೂ ಶೌಚಾಲಯದ ನಿರ್ವಹಣೆ ಮಾಡುವವರು ಸರಿಯಾದ ಸಮಯಕ್ಕೆ ಶೌಚಾಲಯವನ್ನು ಓಪನ್ ಮಾಡುವ ಬದಲಾಗಿ ಇಚ್ಛೆ ಬಂದಾಗ ಮಾಡುವರು ಮತ್ತು ಫ್ರೀಡಂ ಪಾರ್ಕ್ ಅಲ್ಲಿ ಕಾರ್ಯಕ್ರಮಗಳು ನಡೆದ ನಂತರ ಕನಿಷ್ಠ ಕಾರ್ಯಕ್ರಮವಾದ ಮರುದಿನ ಸ್ವಚ್ಛಗೊಳಿಸಲು ಕಾರ್ಯಕ್ರಮದ ಆಯೋಜಕರಿಗೆ ತಿಳಿಸಬೇಕು.ಇಲ್ಲಿ ಕಾರ್ಯಕ್ರಮಗಳು ಆದ ವಾರಗಟ್ಟಲೆ ಕಸ ಫ್ರೀಡಂ ಪಾರ್ಕ್ ನಲ್ಲಿ ಹಾಗೆ ಬಿದ್ದಿರುತ್ತದೆ ಇದರಿಂದ ಫ್ರೀಡಂ ಪಾರ್ಕ್ ನ ಪರಿಸರಕ್ಕೂ ಸಹ ಹಾನಿ ಯಾಗುತ್ತಿದೆ.ಮತ್ತು ಬಹು ಮುಖ್ಯವಾಗಿ ಫ್ರೀಡಂ ಪಾರ್ಕ್ ನಲ್ಲಿ ಜಿಲ್ಲಾಡಳಿತದ ಒಬ್ಬರನ್ನು ಅದರ ಮೇಲುಸ್ತುವಾರಿಗಾಗಿ ನೇಮಿಸಿ ಕಚೇರಿಯನ್ನು ತೆರೆಯಬೇಕು.
ಪ್ರತಿನಿತ್ಯ ವಾಕಿಂಗ್ ಸಂದರ್ಭದಲ್ಲಿ ಬೆಳಗ್ಗೆ ಮತ್ತು ಸಂಜೆ ಸಾರ್ವಜನಿಕರ ಪಾರ್ಕಿಂಗ್ ವ್ಯವಸ್ಥೆಯನ್ನು ನೋಡಿಕೊಳ್ಳಲು ಹಾಗೂ ಫ್ರೀಡಂ ಪಾರ್ಕ್ ನಲ್ಲಿ ಅಹಿತಕರ ಚಟುವಟಿಕೆಗಳನ್ನು ತಡೆಯಲು ಸೆಕ್ಯೂರಿಟಿ ವ್ಯವಸ್ಥೆಯನ್ನು ಈ ಕೊಡಲೇ ಜಾರಿ ಮಾಡಿ ಫ್ರೀಡಂ ಪಾರ್ಕ್ ನಲ್ಲಿ ಮೂಲಭೂತ ಸೌಲಭ್ಯಗಳು ಹಾಗೂ ಸರಿಯಾದ ನಿರ್ವಹಣೆಯನ್ನು ಮಾಡಬೇಕೆಂದು ರಾಜ್ಯ ನಾಗರಿಕ ರಕ್ಷಣಾ ಸಮಿತಿ ವತಿಯಿಂದ ಮನವಿಯಲ್ಲಿ ಕೇಳಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಸಂಸ್ಥಾಪಕರಾದ ಶಿವಮೊಗ್ಗ ವಿನೋದ್ ಅಧ್ಯಕ್ಷರಾದ ಕೆ ಶೇಖರ್ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಪದಾಧಿಕಾರಿಗಳಾದ ಲಕ್ಷ್ಮಿಕಾಂತಪ್ಪ ರಮೇಶ್ ಚಂದನ್ ಹರ್ಷಿತ್ ಲೋಕೇಶ್ ಶರವಣ ಉಪಸ್ಥಿತರಿದ್ದರು.

Book Your Advertisement Now.Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Acharya Tulsi National College of Commerce ರಕ್ತದಾನಿಗಳು ಸಮಾಜದ ನೈಜ ಹೀರೋಗಳು- ಡಾ.ಪಿ.ನಾರಾಯಣ್

Acharya Tulsi National College of Commerce ಎಲ್ಲಾ ದಾನಗಳಿಗಿಂತ ರಕ್ತದಾನ...