Development of Society ರಾಷ್ಟ್ರದ ಅಭಿವೃದ್ಧಿಗೆ ಸಾಮಾಜಿಕ ನ್ಯಾಯ ಅವಶ್ಯ. ಸಾಮಾಜಿಕ ನ್ಯಾಯವು ರಾಷ್ಟ್ರಗಳ ಒಳಗೆ ಶಾಂತಿಯುತ ಮತ್ತು ಸಮೃದ್ಧ ಸಹಬಾಳ್ವೆಗೆ ಆಧಾರವಾಗಿರುವ ತತ್ವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಾಯಕ ಕಾನೂನು ಅಭೀರಕ್ಷಕ ಎನ್.ಹೆಚ್.ಯೋಗೇಶ್ ಹೇಳಿದರು.
ಚಿಕ್ಕಮಗಳೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ವಾರ್ತಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ವತಿಯಿಂದ ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ ಕಾರ್ಯಕ್ರಮವನ್ನು ಮಂಗಳವಾರ ಸಂಜೆ ಉದ್ಘಾಟಿಸಿ ಅವರು ಮಾತನಾ ಡುತ್ತಿದ್ದರು.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ 2007ರ ಫೆಬ್ರವರಿ 20ರಂದು ಈ ದಿನವನ್ನು ಅಂಗೀಕರಿಸಲಾಯಿತು ಹಾಗೂ 2006ರಲ್ಲಿ ಈ ದಿನವನ್ನು ಆಚರಿಸಲು ಅನುಮೋದನೆ ನೀಡಲಾಯಿತು.
ಪ್ರತಿ ಸಮಾಜದಲ್ಲೂ ಐಕ್ಯತೆ, ಸಾಮರಸ್ಯ, ಸೌಹಾರ್ದತೆ , ಮೂಲಭೂತ ಹಕ್ಕುಗಳ ನ್ಯಾಯವಿದ್ದರೆ ಸಮಾಜದ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರಾಗೃಹ ಅಧೀಕ್ಷಕ ಶ್ರೀಶೈಲಾ ಎಸ್.ಮೇಟಿ ಪ್ರಪಂಚದ ಪ್ರತಿಯೊಂದು ದೇಶವು ಸಾಮರಸ್ಯತೆ, ಐಕ್ಯತೆ ಹಾಗೂ ಮೂಲಭೂತ ಹಕ್ಕುಗಳನ್ನು ಹೊಂದಬೇಕಾದರೆ ಸಾಮಾಜಿಕ ನ್ಯಾಯದ ಅತ್ಯವಶ್ಯ ಎಂದು ಹೇಳಿದರು.
Development of Society ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಸಾಮಾಜಿಕ ನ್ಯಾಯ. ಪ್ರತಿಯೊಂದು ರಾಷ್ಟದ ಏಳಿಗೆ, ಶಾಂತಿ, ಸಹಬಾಳ್ವೆ ಮತ್ತು ಸಮೃದ್ಧಿ ಸಾಮಾಜಿಕ ತತ್ವದ ಆಧಾರದ ಮೇಲೆ ನಿಂತಿರುತ್ತದೆ. ಒಂದು ವೇಳೆ ದೇಶವು ಅನ್ಯಾಯ ಅಥವಾ ದಬ್ಬಾಳಿಕೆಗೆ ಒಳಪಟ್ಟರೆ ಜನತೆಯು ದಂಗೆ ಹೇಳುವ ಮೂಲಕ ಆಡಳಿತವನ್ನು ಮೆಟ್ಟಿ ನಿಂತಿರುವ ಹಲವಾರು ಪ್ರಸಂಗಗಳಿವೆ ಎಂದರು.
ಈ ಸಂದರ್ಭದಲ್ಲಿ ಜೈಲರ್ ಎಂ.ಕೆ.ನೆಲಧರಿ, ಅಧಿಕಾರಿಗಳು ವೃಂದ, ಸಿಬ್ಬಂದಿಗಳು ಹಾಗೂ ಕಾರಾಬಂಧಿಗಳು ಹಾಜರಿದ್ದರು.
Book Your Advertisement Now.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.